ಇಂದಿನ ತಲೆಮಾರಿನ ಯುವಕ, ಯುವತಿಯರ ಯೋಚನೆ ಮತ್ತು ಮನಸ್ಥಿತಿಯನ್ನು ಹಿಡಿದಿಡುವ ಪ್ರಯತ್ನವನ್ನು ಯೋಗರಾಜ್ ಭಟ್ ಆಗಾಗ ಮಾಡುತ್ತಲೇ ಇರುತ್ತಾರೆ. ‘ಪಂಚರಂಗಿ’ ನಂತರ ಅವರು ಈ ತರಹದ ಸಿನಿಮಾ ಮಾಡಿರಲಿಲ್ಲ. ಈಗ ಸಣ್ಣ ಗ್ಯಾಪ್ನ ನಂತರ ಅವರು ಇಂದಿನ ತಲೆಮಾರಿನವರ ಚಿತ್ರವನ್ನು ಮಾಡುವುದಕ್ಕೆ ಮುಂದಾಗಿದ್ದಾರೆ. ವಿಶೇಷವೆಂದರೆ, ಈ ಬಾರಿ ಅವರ ಜೊತೆಗೆ ಇ. ಕೃಷ್ಣಪ್ಪ ಕೈಜೋಡಿಸಿದ್ದಾರೆ.
18 ವರ್ಷಗಳ ಹಿಂದೆ ಬಿಡುಗಡೆಯಾದ ‘ಮುಂಗಾರು ಮಳೆ’ ಚಿತ್ರವನ್ನು ಇದೇ ಕೃಷ್ಣಪ್ಪ ನಿರ್ಮಿಸಿದ್ದರು. ಅದೇ ಯೋಗರಾಜ್ ಭಟ್ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದರು. ಈಗ ಪುನಃ ಅವರಿಬ್ಬರೂ ಜೊತೆಯಾಗಿದ್ದಾರೆ. ಸದ್ದಿಲ್ಲದೆ ‘ಮನದ ಕಡಲು’ ಎಂಬ ಚಿತ್ರವನ್ನು ಪ್ರಾರಂಭಿಸಿರುವ ಅವರು, ಈಗಾಗಲೇ ಶೇ. 95ರಷ್ಟು ಚಿತ್ರೀಕರಣವೂ ಆಗಿದೆ. ಇದೀಗ ಭಟ್ ಮತ್ತು ಚಿತ್ರತಂಡ ಮೊದಲ ಬಾರಿಗೆ ಚಿತ್ರದ ಬಗ್ಗೆ ಮಾತನಾಡಿದ್ದಾರೆ.
‘ಮುಂಗಾರು ಮಳೆ’ ಮತ್ತು ‘ಮೊಗ್ಗಿನ ಮನಸ್ಸು’ ಚಿತ್ರಗಳ ನಂತರ ಈ ಬಾರಿ ಸಹ ಹೊಸ ಕುದುರೆಗಳ ಜೊತೆಗೆ ಸಿನಿಮಾ ಮಾಡೋಣ ಎಂದು ಹೇಳಿದರಂತೆ ಇ. ‘ಕೃಷ್ಣಪ್ಪ ಮೊದಲೇ ಹೊಸ ಕುದುರೆ ಜೊತೆಗೇ ಸಿನಿಮಾ ಮಾಡೋಣ ಎಂದರು. ಹೊಸಬರ ಜೊತೆಗೆ ಸಿನಿಮಾ ಮಾಡೋದು ಸುಲಭವಲ್ಲ. ಆದರೆ, ಹೊಸಬರ ಜೊತೆಗೆ ಕೆಲಸ ಮಾಡುವುದರಿಂದ ತುಂಬಾ ಕಲಿಯುತ್ತೇವೆ. ಅವರ ಎನರ್ಜಿ ಲೆವೆಲ್ ಅದ್ಭುತವಾಗಿರುತ್ತದೆ. ಇವತ್ತಿನ ಯುವಕರ ಮನಸ್ಥಿತಿ ಅರ್ಥ ಮಾಡಿಕೊಳ್ಳಬೇಕು ಎಂದರೆ ಅವರ ಸಹವಾಸ ಮಾಡಬೇಕು’ ಎನ್ನುತ್ತಾರೆ ಯೋಗರಾಜ್ ಭಟ್.
‘ಮನದ ಕಡಲು’ ಎಂಬ ಹೆಸರೇ ಹೇಳುವಂತೆ ಚಿತ್ರದಲ್ಲಿ ಕಡಲು ಒಂದು ಪ್ರಮುಖ ಪಾತ್ರ ವಹಿಸುತ್ತದಂತೆ. ‘ನನಗೆ ಸಮುದ್ರ ಹೊಸದು. ಇದೇ ಮೊದಲ ಬಾರಿಗೆ ಚಿತ್ರದಲ್ಲಿ ಕಡಲನ್ನು ಇಷ್ಟೊಂದು ಬಳಸಿಕೊಂಡಿದ್ದೇನೆ. ಕಡಲು ನೋಡಿದರೆ ಕೀಳರಿಮೆ ಬರುತ್ತದೆ. ಪ್ರಕೃತಿ ಮುಂದೆ ನಾವೆಷ್ಟು ಚಿಕ್ಕವರು ಎಂದನಿಸುತ್ತದೆ. ಚಿತ್ರದ ಪಾತ್ರಗಳು ಕಡಲು ನೋಡಿ ಹೇಗೆ ತಮ್ಮ ಬದುಕನ್ನು ಹೇಗೆ ಸರಿ ಮಾಡಿಕೊಳ್ಳುತ್ತಾರೆ ಎನ್ನುವುದು ಚಿತ್ರದ ಕಥೆ’ ಎಂದರು.
‘ಮನದ ಕಡಲು’ ಚಿತ್ರಕ್ಕಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಚಿತ್ರೀಕರಣ ಮಾಡಲಾಗಿದೆಯಂತೆ. ಮಹಾರಾಷ್ಟ್ರದ ಮುರುಡ್ ಜಂಜೀರ ಎಂಬ ಸಮುದ್ರದ ಮಧ್ಯದ ಕೋಟೆಯಲ್ಲಿ ಚಿತ್ರೀಕರಣ ಮಾಡಲಾಗಿದೆ. ಈ ಚಿತ್ರದಲ್ಲಿ ಸುಮುಖ, ಅಂಜಲಿ ಅನೀಶ್ ಮತ್ತು ರಾಶಿಕಾ ಶೆಟ್ಟಿ ನಾಯಕ-ನಾಯಕಿಯರಾಗಿ ನಟಿಸಿದರೆ, ದತ್ತಣ್ಣ, ರಂಗಾಯಣ ರಘು ಮುಂತಾದ ಹಿರಿಯರಿದ್ದಾರೆ.
ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಜಯಂತ್ ಕಾಯ್ಕಿಣಿ ಸಾಹಿತ್ಯವಿದೆ. ಇ.ಕೆ. ಎಂಟರ್ಟೈರ್ಸ್ ಬ್ಯಾನರ್ ಅಡಿ ಈ ಚಿತ್ರ ನಿರ್ಮಾಣವಾಗುತ್ತಿದೆ.
ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…
ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…
ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…
ವಸಂತಕುಮಾರ ಮೈಸೂರಮಠ, ಸಾಮಾಜಿಕ ಕಾರ್ಯಕರ್ತರು ಶ್ವಾನ ಮನುಷ್ಯನ ಅತ್ಯತ್ತಮ ಸ್ನೇಹಿತ ಎಂಬುದರಲ್ಲಿ ಸಂದೇಹವಿಲ್ಲ! ಆದರೆ ಅವು ಉಪದ್ರವಕಾರಿ ಯಾದಾಗ ಏನಾದರೂ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಕಾಲದಲ್ಲಿ ಹೆಸರಿಸಲಾಗಿದ್ದ ಸರ್ಕಾರಿ ಕಾರ್ಯಾಲಯಗಳು ಮತ್ತು ರಸ್ತೆಗಳ ಹೆಸರುಗಳನ್ನು ಕೇಂದ್ರದಲ್ಲಿ…
ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…