ಮನರಂಜನೆ

ಯುವಕರ ಮನಸ್ಸು ಮತ್ತು ಕಡಲ ಕುರಿತು ಯೋಗರಾಜ್‍ ಭಟ್‍ ಹೊಸ ಚಿತ್ರ

ಇಂದಿನ ತಲೆಮಾರಿನ ಯುವಕ, ಯುವತಿಯರ ಯೋಚನೆ ಮತ್ತು ಮನಸ್ಥಿತಿಯನ್ನು ಹಿಡಿದಿಡುವ ಪ್ರಯತ್ನವನ್ನು ಯೋಗರಾಜ್‍ ಭಟ್‍ ಆಗಾಗ ಮಾಡುತ್ತಲೇ ಇರುತ್ತಾರೆ. ‘ಪಂಚರಂಗಿ’ ನಂತರ ಅವರು ಈ ತರಹದ ಸಿನಿಮಾ ಮಾಡಿರಲಿಲ್ಲ. ಈಗ ಸಣ್ಣ ಗ್ಯಾಪ್‍ನ ನಂತರ ಅವರು ಇಂದಿನ ತಲೆಮಾರಿನವರ ಚಿತ್ರವನ್ನು ಮಾಡುವುದಕ್ಕೆ ಮುಂದಾಗಿದ್ದಾರೆ. ವಿಶೇಷವೆಂದರೆ, ಈ ಬಾರಿ ಅವರ ಜೊತೆಗೆ ಇ. ಕೃಷ್ಣಪ್ಪ ಕೈಜೋಡಿಸಿದ್ದಾರೆ.

18 ವರ್ಷಗಳ ಹಿಂದೆ ಬಿಡುಗಡೆಯಾದ ‘ಮುಂಗಾರು ಮಳೆ’ ಚಿತ್ರವನ್ನು ಇದೇ ಕೃಷ್ಣಪ್ಪ ನಿರ್ಮಿಸಿದ್ದರು. ಅದೇ ಯೋಗರಾಜ್‍ ಭಟ್ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದರು. ಈಗ ಪುನಃ ಅವರಿಬ್ಬರೂ ಜೊತೆಯಾಗಿದ್ದಾರೆ. ಸದ್ದಿಲ್ಲದೆ ‘ಮನದ ಕಡಲು’ ಎಂಬ ಚಿತ್ರವನ್ನು ಪ್ರಾರಂಭಿಸಿರುವ ಅವರು, ಈಗಾಗಲೇ ಶೇ. 95ರಷ್ಟು ಚಿತ್ರೀಕರಣವೂ ಆಗಿದೆ. ಇದೀಗ ಭಟ್ ಮತ್ತು ಚಿತ್ರತಂಡ ಮೊದಲ ಬಾರಿಗೆ ಚಿತ್ರದ ಬಗ್ಗೆ ಮಾತನಾಡಿದ್ದಾರೆ.

‘ಮುಂಗಾರು ಮಳೆ’ ಮತ್ತು ‘ಮೊಗ್ಗಿನ ಮನಸ್ಸು’ ಚಿತ್ರಗಳ ನಂತರ ಈ ಬಾರಿ ಸಹ ಹೊಸ ಕುದುರೆಗಳ ಜೊತೆಗೆ ಸಿನಿಮಾ ಮಾಡೋಣ ಎಂದು ಹೇಳಿದರಂತೆ ಇ. ‘ಕೃಷ್ಣಪ್ಪ ಮೊದಲೇ ಹೊಸ ಕುದುರೆ ಜೊತೆಗೇ ಸಿನಿಮಾ ಮಾಡೋಣ ಎಂದರು. ಹೊಸಬರ ಜೊತೆಗೆ ಸಿನಿಮಾ ಮಾಡೋದು ಸುಲಭವಲ್ಲ. ಆದರೆ, ಹೊಸಬರ ಜೊತೆಗೆ ಕೆಲಸ ಮಾಡುವುದರಿಂದ ತುಂಬಾ ಕಲಿಯುತ್ತೇವೆ. ಅವರ ಎನರ್ಜಿ ಲೆವೆಲ್‍ ಅದ್ಭುತವಾಗಿರುತ್ತದೆ. ಇವತ್ತಿನ ಯುವಕರ ಮನಸ್ಥಿತಿ ಅರ್ಥ ಮಾಡಿಕೊಳ್ಳಬೇಕು ಎಂದರೆ ಅವರ ಸಹವಾಸ ಮಾಡಬೇಕು’ ಎನ್ನುತ್ತಾರೆ ಯೋಗರಾಜ್‍ ಭಟ್‍.

‘ಮನದ ಕಡಲು’ ಎಂಬ ಹೆಸರೇ ಹೇಳುವಂತೆ ಚಿತ್ರದಲ್ಲಿ ಕಡಲು ಒಂದು ಪ್ರಮುಖ ಪಾತ್ರ ವಹಿಸುತ್ತದಂತೆ. ‘ನನಗೆ ಸಮುದ್ರ ಹೊಸದು. ಇದೇ ಮೊದಲ ಬಾರಿಗೆ ಚಿತ್ರದಲ್ಲಿ ಕಡಲನ್ನು ಇಷ್ಟೊಂದು ಬಳಸಿಕೊಂಡಿದ್ದೇನೆ. ಕಡಲು ನೋಡಿದರೆ ಕೀಳರಿಮೆ ಬರುತ್ತದೆ. ಪ್ರಕೃತಿ ಮುಂದೆ ನಾವೆಷ್ಟು ಚಿಕ್ಕವರು ಎಂದನಿಸುತ್ತದೆ. ಚಿತ್ರದ ಪಾತ್ರಗಳು ಕಡಲು ನೋಡಿ ಹೇಗೆ ತಮ್ಮ ಬದುಕನ್ನು ಹೇಗೆ ಸರಿ ಮಾಡಿಕೊಳ್ಳುತ್ತಾರೆ ಎನ್ನುವುದು ಚಿತ್ರದ ಕಥೆ’ ಎಂದರು.

‘ಮನದ ಕಡಲು’ ಚಿತ್ರಕ್ಕಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಚಿತ್ರೀಕರಣ ಮಾಡಲಾಗಿದೆಯಂತೆ. ಮಹಾರಾಷ್ಟ್ರದ ಮುರುಡ್‍ ಜಂಜೀರ ಎಂಬ ಸಮುದ್ರದ ಮಧ್ಯದ ಕೋಟೆಯಲ್ಲಿ ಚಿತ್ರೀಕರಣ ಮಾಡಲಾಗಿದೆ. ಈ ಚಿತ್ರದಲ್ಲಿ ಸುಮುಖ, ಅಂಜಲಿ ಅನೀಶ್‍ ಮತ್ತು ರಾಶಿಕಾ ಶೆಟ್ಟಿ ನಾಯಕ-ನಾಯಕಿಯರಾಗಿ ನಟಿಸಿದರೆ, ದತ್ತಣ್ಣ, ರಂಗಾಯಣ ರಘು ಮುಂತಾದ ಹಿರಿಯರಿದ್ದಾರೆ.

ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ, ಸಂತೋಷ್‍ ರೈ ಪಾತಾಜೆ ಛಾಯಾಗ್ರಹಣ, ಜಯಂತ್‍ ಕಾಯ್ಕಿಣಿ ಸಾಹಿತ್ಯವಿದೆ. ಇ.ಕೆ. ಎಂಟರ್‍ಟೈರ್ಸ್ ಬ್ಯಾನರ್ ಅಡಿ ಈ ಚಿತ್ರ ನಿರ್ಮಾಣವಾಗುತ್ತಿದೆ.

ಭೂಮಿಕಾ

Recent Posts

ಓದುಗರ ಪತ್ರ: ಎಸ್‌ಐಆರ್: ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ

ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್‌ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…

19 mins ago

ಓದುಗರ ಪತ್ರ: ದಸರಾದಲ್ಲಿ ಕಂಬಳ ಬೇಕೇ?

ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಾಡಹಬ್ಬ ದಸರಾ ೧೬೧೦ ರಲ್ಲಿ ಪ್ರಾರಂಭವಾಗಿ, ಇಲ್ಲಿನ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.ಇತ್ತೀಚಿನ…

24 mins ago

ಉಪನಗರ ಯೋಜನೆ ಖಂಡಿತ ಅಭಿವೃದ್ಧಿಯಲ್ಲ

ಆರ್.ಪಿ.ವೆಂಕಟೇಶಮೂರ್ತಿ ಬೆಂಗಳೂರು ಮತ್ತು ಸುತ್ತಮುತ್ತಲಿನ ದುಃಸ್ಥಿತಿಗೆ ಎಲ್ಲ ರಾಜಕೀಯ ಪಕ್ಷಗಳ ಕೊಡುಗೆ ಇದೆ, ರಾಜಕೀಯ ನಾಯಕರು ದಯಮಾಡಿ ಆತ್ಮಾವಲೋಕನ ಮಾಡಿಕೊಳ್ಳಬೇಕು.…

29 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಗೆದಷ್ಟು ಬಹಿರಂಗ; ರಾಮಮಂದಿರ ಕಾಣಿಕೆ ಲೂಟಿ

ಹಲವು ದಶಕಗಳ ಹೋರಾಟದಿಂದ ಎರಡೂವರೆ ವರ್ಷಗಳ ಹಿಂದೆ ನನಸಾದ ಹಿಂದುಗಳ ಧಾರ್ಮಿಕ ಶ್ರದ್ಧಾ ಕೇಂದ್ರವಾದ ಶ್ರೀರಾಮ ಮಂದಿರದಗಿರುವ ಭಕ್ತರ ಕಾಣಿಕೆಯ…

34 mins ago

ಎಸ್‌ಐಆರ್: ಮಿಶ್ರ ಪ್ರತಿಕ್ರಿಯೆ

ಕೆ.ಎಸ್.ಚಂದ್ರಶೇಖರ ಮೂರ್ತಿ ‘ಸಂವಿಧಾನಬದ್ಧ ಪ್ರಕ್ರಿಯೆ; ಕಾರ್ಯವಿಧಾನದ ಬಗ್ಗೆ ಅಸಮಾಧಾನ’ ಸಾಹಿತಿಗಳು, ಗಣ್ಯರು, ಮುಖಂಡರ ಅಭಿಪ್ರಾಯ ಮೈಸೂರು: ಭಾರತೀಯ ಚುನಾವಣಾ ಆಯೋಗದ…

40 mins ago