ಇಂದಿನ ತಲೆಮಾರಿನ ಯುವಕ, ಯುವತಿಯರ ಯೋಚನೆ ಮತ್ತು ಮನಸ್ಥಿತಿಯನ್ನು ಹಿಡಿದಿಡುವ ಪ್ರಯತ್ನವನ್ನು ಯೋಗರಾಜ್ ಭಟ್ ಆಗಾಗ ಮಾಡುತ್ತಲೇ ಇರುತ್ತಾರೆ. ‘ಪಂಚರಂಗಿ’ ನಂತರ ಅವರು ಈ ತರಹದ ಸಿನಿಮಾ ಮಾಡಿರಲಿಲ್ಲ. ಈಗ ಸಣ್ಣ ಗ್ಯಾಪ್ನ ನಂತರ ಅವರು ಇಂದಿನ ತಲೆಮಾರಿನವರ ಚಿತ್ರವನ್ನು ಮಾಡುವುದಕ್ಕೆ ಮುಂದಾಗಿದ್ದಾರೆ. ವಿಶೇಷವೆಂದರೆ, ಈ ಬಾರಿ ಅವರ ಜೊತೆಗೆ ಇ. ಕೃಷ್ಣಪ್ಪ ಕೈಜೋಡಿಸಿದ್ದಾರೆ.
18 ವರ್ಷಗಳ ಹಿಂದೆ ಬಿಡುಗಡೆಯಾದ ‘ಮುಂಗಾರು ಮಳೆ’ ಚಿತ್ರವನ್ನು ಇದೇ ಕೃಷ್ಣಪ್ಪ ನಿರ್ಮಿಸಿದ್ದರು. ಅದೇ ಯೋಗರಾಜ್ ಭಟ್ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದರು. ಈಗ ಪುನಃ ಅವರಿಬ್ಬರೂ ಜೊತೆಯಾಗಿದ್ದಾರೆ. ಸದ್ದಿಲ್ಲದೆ ‘ಮನದ ಕಡಲು’ ಎಂಬ ಚಿತ್ರವನ್ನು ಪ್ರಾರಂಭಿಸಿರುವ ಅವರು, ಈಗಾಗಲೇ ಶೇ. 95ರಷ್ಟು ಚಿತ್ರೀಕರಣವೂ ಆಗಿದೆ. ಇದೀಗ ಭಟ್ ಮತ್ತು ಚಿತ್ರತಂಡ ಮೊದಲ ಬಾರಿಗೆ ಚಿತ್ರದ ಬಗ್ಗೆ ಮಾತನಾಡಿದ್ದಾರೆ.
‘ಮುಂಗಾರು ಮಳೆ’ ಮತ್ತು ‘ಮೊಗ್ಗಿನ ಮನಸ್ಸು’ ಚಿತ್ರಗಳ ನಂತರ ಈ ಬಾರಿ ಸಹ ಹೊಸ ಕುದುರೆಗಳ ಜೊತೆಗೆ ಸಿನಿಮಾ ಮಾಡೋಣ ಎಂದು ಹೇಳಿದರಂತೆ ಇ. ‘ಕೃಷ್ಣಪ್ಪ ಮೊದಲೇ ಹೊಸ ಕುದುರೆ ಜೊತೆಗೇ ಸಿನಿಮಾ ಮಾಡೋಣ ಎಂದರು. ಹೊಸಬರ ಜೊತೆಗೆ ಸಿನಿಮಾ ಮಾಡೋದು ಸುಲಭವಲ್ಲ. ಆದರೆ, ಹೊಸಬರ ಜೊತೆಗೆ ಕೆಲಸ ಮಾಡುವುದರಿಂದ ತುಂಬಾ ಕಲಿಯುತ್ತೇವೆ. ಅವರ ಎನರ್ಜಿ ಲೆವೆಲ್ ಅದ್ಭುತವಾಗಿರುತ್ತದೆ. ಇವತ್ತಿನ ಯುವಕರ ಮನಸ್ಥಿತಿ ಅರ್ಥ ಮಾಡಿಕೊಳ್ಳಬೇಕು ಎಂದರೆ ಅವರ ಸಹವಾಸ ಮಾಡಬೇಕು’ ಎನ್ನುತ್ತಾರೆ ಯೋಗರಾಜ್ ಭಟ್.
‘ಮನದ ಕಡಲು’ ಎಂಬ ಹೆಸರೇ ಹೇಳುವಂತೆ ಚಿತ್ರದಲ್ಲಿ ಕಡಲು ಒಂದು ಪ್ರಮುಖ ಪಾತ್ರ ವಹಿಸುತ್ತದಂತೆ. ‘ನನಗೆ ಸಮುದ್ರ ಹೊಸದು. ಇದೇ ಮೊದಲ ಬಾರಿಗೆ ಚಿತ್ರದಲ್ಲಿ ಕಡಲನ್ನು ಇಷ್ಟೊಂದು ಬಳಸಿಕೊಂಡಿದ್ದೇನೆ. ಕಡಲು ನೋಡಿದರೆ ಕೀಳರಿಮೆ ಬರುತ್ತದೆ. ಪ್ರಕೃತಿ ಮುಂದೆ ನಾವೆಷ್ಟು ಚಿಕ್ಕವರು ಎಂದನಿಸುತ್ತದೆ. ಚಿತ್ರದ ಪಾತ್ರಗಳು ಕಡಲು ನೋಡಿ ಹೇಗೆ ತಮ್ಮ ಬದುಕನ್ನು ಹೇಗೆ ಸರಿ ಮಾಡಿಕೊಳ್ಳುತ್ತಾರೆ ಎನ್ನುವುದು ಚಿತ್ರದ ಕಥೆ’ ಎಂದರು.
‘ಮನದ ಕಡಲು’ ಚಿತ್ರಕ್ಕಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಚಿತ್ರೀಕರಣ ಮಾಡಲಾಗಿದೆಯಂತೆ. ಮಹಾರಾಷ್ಟ್ರದ ಮುರುಡ್ ಜಂಜೀರ ಎಂಬ ಸಮುದ್ರದ ಮಧ್ಯದ ಕೋಟೆಯಲ್ಲಿ ಚಿತ್ರೀಕರಣ ಮಾಡಲಾಗಿದೆ. ಈ ಚಿತ್ರದಲ್ಲಿ ಸುಮುಖ, ಅಂಜಲಿ ಅನೀಶ್ ಮತ್ತು ರಾಶಿಕಾ ಶೆಟ್ಟಿ ನಾಯಕ-ನಾಯಕಿಯರಾಗಿ ನಟಿಸಿದರೆ, ದತ್ತಣ್ಣ, ರಂಗಾಯಣ ರಘು ಮುಂತಾದ ಹಿರಿಯರಿದ್ದಾರೆ.
ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಜಯಂತ್ ಕಾಯ್ಕಿಣಿ ಸಾಹಿತ್ಯವಿದೆ. ಇ.ಕೆ. ಎಂಟರ್ಟೈರ್ಸ್ ಬ್ಯಾನರ್ ಅಡಿ ಈ ಚಿತ್ರ ನಿರ್ಮಾಣವಾಗುತ್ತಿದೆ.
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…