ಮನರಂಜನೆ

‘ಎಕ್ಕ’ ಚಿತ್ರದಲ್ಲಿ ನನ್ನನ್ನು ಹೊಸ ರೀತಿಯಲ್ಲಿ ನೋಡಬಹುದು: ಯುವ ರಾಜಕುಮಾರ್

ಯುವ ರಾಜಕುಮಾರ್ ಅಭಿನಯದ ‘ಯುವ’ ಬಿಡುಗಡೆಯಾಗಿ ಒಂದು ವರ್ಷವಾಗಿದೆ. ಅವರ ಎರಡನೇ ಚಿತ್ರ ಇದೇ ಜುಲೈ 18ಕ್ಕೆ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರ ಟೀಸರ್ ‍ಮತ್ತು ಹಾಡುಗಳು ಬಿಡುಗಡೆ ಆಗಿವೆ. ಕಳೆದ ವಾರ ‘ಬ್ಯಾಂಗಲ್‍ ಬಂಗಾರಿ’ ಎಂಬ ಹಾಡು ಬಿಡಗುಡೆ ಆಗಿದ್ದು, ಸಾಕಷ್ಟು ಜನಪ್ರಿಯವಾಗಿವೆ. ಚಿತ್ರದ ಹಾಡುಗಳು ಗೆದ್ದ ಖುಷಿಯಲ್ಲಿ ಚಿತ್ರತಂಡ ಇದೀಗ ಪ್ರಚಾರ ಶುರು ಮಾಡಿದೆ.

ನಿರ್ದೇಶಕ ರೋಹಿತ್ ಪದಕಿ ಮಾತನಾಡಿ, ‘ನಾವು ಬಿಟ್ಟಿರುವ ಹಾಡು ಮತ್ತು ಟೀಸರ್‍ ಬಗ್ಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಾವು ಸಹ ಅಷ್ಟೇ ಖುಷಿಯಿಂದ ಚಿತ್ರ ಮಾಡಿದ್ದೇವೆ. ಚಿತ್ರ ನೋಡುವಾಗ ಪ್ರೇಕ್ಷಕರಿಗೂ ಖುಷಿಯಾಗುತ್ತದೆ. ಈ ಪ್ರಯಾಣದಲ್ಲಿ ಸಾಕಷ್ಟು ಕಲಿತಿದ್ದೇನೆ’ ಎಂದರು.

ಇದನ್ನೂ ಓದಿ: ‘ಎಡಗೈ’ ಜೊತಯಾದ ‘ಬ್ಲಿಂಕ್’ ಮತ್ತು ‘ಶಾಖಹಾರಿ’ ನಿರ್ಮಾಪಕರು

’ಬ್ಯಾಂಗಲ್ ಬಂಗಾರಿ’ ಹಾಡಿಗೆ ಎಲ್ಲಾ ವರ್ಗದ ಜನ ಇಷ್ಟಪಟ್ಟು ಡ್ಯಾನ್ಸ್ ಮಾಡಿರುವುದನ್ನು ನೋಡಲು ಖುಷಿಯಾಗುತ್ತದೆ ಎಂದು ಯುವ, ‘ಚಿತ್ರಮಂದಿರಗಳಲ್ಲಿ ಈ ಚಿತ್ರವನ್ನು ಎಲ್ಲರೂ ಎಂಜಾಯ್ ಮಾಡುತ್ತಾರೆ ಎಂಬ ನಂಬಿಕೆ ಇದೆ. ಈ ಚಿತ್ರದಲ್ಲಿ ನನ್ನನ್ನು ಹೊಸ ರೀತಿಯಲ್ಲಿ ನೋಡಬಹುದು’ ಎಂದು ಹೇಳಿದರು.

ಮೊದಲು ಜೂನ್ 6ಕ್ಕೆ ಸಿನಿಮಾ ಬಿಡುಗಡೆ ಮಾಡಬೇಕೆಂದು ಪ್ರಯತ್ನಿಸಿದ್ದೆವು ಎಂದ ನಿರ್ಮಾಪಕ ಕಾರ್ತಿಕ್ ಗೌಡ, ‘ಸಿನಿಮಾ ಕೆಲಸ ಬಾಕಿ ಇದ್ದುದರಿಂದ ಜುಲೈ 18ಕ್ಕೆ ಬಿಡುಗಡೆ ಮಾಡುತ್ತಿದ್ದೇವೆ. ಸಿನಿಮಾ ಚೆನ್ನಾಗಿದ್ದರೆ ಜನ ಚಿತ್ರಮಂದಿರಕ್ಕೆ ಬರುತ್ತಾರೆ. ಜುಲೈ ತಿಂಗಳಿನಿಮದ ಕೆಲವು ದೊಡ್ಡ ಚಿತ್ರಗಳು ಬಿಡುಗಡೆಗೆ ತಯಾರಿ ನಡೆಸಿದ್ದು, ಈ ಪೈಕಿ ‘ಕೆಡಿ’, ‘ಡೆವಿಲ್’, ‘45’ ಮುಂತಾದ ದೊಡ್ಡ ಚಿತ್ರಗಳು ಬಿಡುಗಡೆ ಆಗಲಿವೆ’ ಎಂದರು.

‘ಎಕ್ಕ’ ಚಿತ್ರವನ್ನು ಪಿ.ಆರ್‌.ಕೆ ಪ್ರೊಡಕ್ಷನ್ಸ್, ಜಯಣ್ಣ ಫಿಲ್ಮ್ಸ್ ಹಾಗೂ ಕೆ.ಆರ್‌.ಜಿ ಸ್ಟುಡಿಯೋಸ್ ಸಂಸ್ಥೆಗಳು ಜೊತೆಯಾಗಿ ನಿರ್ಮಾಣ ಮಾಡಿದ್ದು, ಚಿತ್ರದಲ್ಲಿ ಯುವ ರಾಜಕುಮಾರ್ ಜೊತೆಗೆ ಸಂಪದ ಹುಲಿವಾನ, ಸಂಜನಾ ಆನಂದ್, ಶ್ರುತಿ, ಅತುಲ್ ಕುಲಕರ್ಣಿ, ಆದಿತ್ಯ, ಸಾಧು ಕೋಕಿಲ, ಪುನೀತ್ ರುದ್ರನಾಗ್, ಡಾ. ಸೂರಿ, ಹರಿಣಿ ಮುಂತಾದವರು ನಟಿಸಿದ್ದಾರೆ. ಚರಣ್‍ ರಾಜ್‍ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

3 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

3 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

4 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

4 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

4 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

4 hours ago