ಮನರಂಜನೆ

‘ಎಕ್ಕ’ ಚಿತ್ರದಲ್ಲಿ ನನ್ನನ್ನು ಹೊಸ ರೀತಿಯಲ್ಲಿ ನೋಡಬಹುದು: ಯುವ ರಾಜಕುಮಾರ್

ಯುವ ರಾಜಕುಮಾರ್ ಅಭಿನಯದ ‘ಯುವ’ ಬಿಡುಗಡೆಯಾಗಿ ಒಂದು ವರ್ಷವಾಗಿದೆ. ಅವರ ಎರಡನೇ ಚಿತ್ರ ಇದೇ ಜುಲೈ 18ಕ್ಕೆ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರ ಟೀಸರ್ ‍ಮತ್ತು ಹಾಡುಗಳು ಬಿಡುಗಡೆ ಆಗಿವೆ. ಕಳೆದ ವಾರ ‘ಬ್ಯಾಂಗಲ್‍ ಬಂಗಾರಿ’ ಎಂಬ ಹಾಡು ಬಿಡಗುಡೆ ಆಗಿದ್ದು, ಸಾಕಷ್ಟು ಜನಪ್ರಿಯವಾಗಿವೆ. ಚಿತ್ರದ ಹಾಡುಗಳು ಗೆದ್ದ ಖುಷಿಯಲ್ಲಿ ಚಿತ್ರತಂಡ ಇದೀಗ ಪ್ರಚಾರ ಶುರು ಮಾಡಿದೆ.

ನಿರ್ದೇಶಕ ರೋಹಿತ್ ಪದಕಿ ಮಾತನಾಡಿ, ‘ನಾವು ಬಿಟ್ಟಿರುವ ಹಾಡು ಮತ್ತು ಟೀಸರ್‍ ಬಗ್ಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಾವು ಸಹ ಅಷ್ಟೇ ಖುಷಿಯಿಂದ ಚಿತ್ರ ಮಾಡಿದ್ದೇವೆ. ಚಿತ್ರ ನೋಡುವಾಗ ಪ್ರೇಕ್ಷಕರಿಗೂ ಖುಷಿಯಾಗುತ್ತದೆ. ಈ ಪ್ರಯಾಣದಲ್ಲಿ ಸಾಕಷ್ಟು ಕಲಿತಿದ್ದೇನೆ’ ಎಂದರು.

ಇದನ್ನೂ ಓದಿ: ‘ಎಡಗೈ’ ಜೊತಯಾದ ‘ಬ್ಲಿಂಕ್’ ಮತ್ತು ‘ಶಾಖಹಾರಿ’ ನಿರ್ಮಾಪಕರು

’ಬ್ಯಾಂಗಲ್ ಬಂಗಾರಿ’ ಹಾಡಿಗೆ ಎಲ್ಲಾ ವರ್ಗದ ಜನ ಇಷ್ಟಪಟ್ಟು ಡ್ಯಾನ್ಸ್ ಮಾಡಿರುವುದನ್ನು ನೋಡಲು ಖುಷಿಯಾಗುತ್ತದೆ ಎಂದು ಯುವ, ‘ಚಿತ್ರಮಂದಿರಗಳಲ್ಲಿ ಈ ಚಿತ್ರವನ್ನು ಎಲ್ಲರೂ ಎಂಜಾಯ್ ಮಾಡುತ್ತಾರೆ ಎಂಬ ನಂಬಿಕೆ ಇದೆ. ಈ ಚಿತ್ರದಲ್ಲಿ ನನ್ನನ್ನು ಹೊಸ ರೀತಿಯಲ್ಲಿ ನೋಡಬಹುದು’ ಎಂದು ಹೇಳಿದರು.

ಮೊದಲು ಜೂನ್ 6ಕ್ಕೆ ಸಿನಿಮಾ ಬಿಡುಗಡೆ ಮಾಡಬೇಕೆಂದು ಪ್ರಯತ್ನಿಸಿದ್ದೆವು ಎಂದ ನಿರ್ಮಾಪಕ ಕಾರ್ತಿಕ್ ಗೌಡ, ‘ಸಿನಿಮಾ ಕೆಲಸ ಬಾಕಿ ಇದ್ದುದರಿಂದ ಜುಲೈ 18ಕ್ಕೆ ಬಿಡುಗಡೆ ಮಾಡುತ್ತಿದ್ದೇವೆ. ಸಿನಿಮಾ ಚೆನ್ನಾಗಿದ್ದರೆ ಜನ ಚಿತ್ರಮಂದಿರಕ್ಕೆ ಬರುತ್ತಾರೆ. ಜುಲೈ ತಿಂಗಳಿನಿಮದ ಕೆಲವು ದೊಡ್ಡ ಚಿತ್ರಗಳು ಬಿಡುಗಡೆಗೆ ತಯಾರಿ ನಡೆಸಿದ್ದು, ಈ ಪೈಕಿ ‘ಕೆಡಿ’, ‘ಡೆವಿಲ್’, ‘45’ ಮುಂತಾದ ದೊಡ್ಡ ಚಿತ್ರಗಳು ಬಿಡುಗಡೆ ಆಗಲಿವೆ’ ಎಂದರು.

‘ಎಕ್ಕ’ ಚಿತ್ರವನ್ನು ಪಿ.ಆರ್‌.ಕೆ ಪ್ರೊಡಕ್ಷನ್ಸ್, ಜಯಣ್ಣ ಫಿಲ್ಮ್ಸ್ ಹಾಗೂ ಕೆ.ಆರ್‌.ಜಿ ಸ್ಟುಡಿಯೋಸ್ ಸಂಸ್ಥೆಗಳು ಜೊತೆಯಾಗಿ ನಿರ್ಮಾಣ ಮಾಡಿದ್ದು, ಚಿತ್ರದಲ್ಲಿ ಯುವ ರಾಜಕುಮಾರ್ ಜೊತೆಗೆ ಸಂಪದ ಹುಲಿವಾನ, ಸಂಜನಾ ಆನಂದ್, ಶ್ರುತಿ, ಅತುಲ್ ಕುಲಕರ್ಣಿ, ಆದಿತ್ಯ, ಸಾಧು ಕೋಕಿಲ, ಪುನೀತ್ ರುದ್ರನಾಗ್, ಡಾ. ಸೂರಿ, ಹರಿಣಿ ಮುಂತಾದವರು ನಟಿಸಿದ್ದಾರೆ. ಚರಣ್‍ ರಾಜ್‍ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

6 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

7 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

7 hours ago