ಮನರಂಜನೆ

ಸುಳ್ಳು ಲೆಕ್ಕ ಕೊಟ್ಟು ನಮಗೆ ನಾವೇ ಮೋಸ ಮಾಡಿಕೊಳ್ತಿದ್ದೀವಿ: ಗಣೇಶ್‍

ಗಣೇಶ್‍ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರವು ಆಗಸ್ಟ್ 15ರಂದು ಬಿಡುಗಡೆ ಆಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ರಾಜ್ಯಾದ್ಯಂತ ಹಲವು ಪ್ರದರ್ಶನಗಳು ಹೌಸ್‍ಫುಲ್ ಆಗಿವೆ. ಮೊದಲ ನಾಲ್ಕು ದಿನಗಳ ಲೆಕ್ಕಾಚಾರದಲ್ಲಿ ಎಷ್ಟು ಕಲೆಕ್ಷನ್‍ ಆಗಿರಬಹುದು ಎಂಬ ಪ್ರಶ್ನೆ ಸಹಜವಾಗಿಯೇ ಬರುತ್ತದೆ. ಈ ಕುರಿತು ಮಾತನಾಡುವ ಗಣೇಶ್‍, ಎರಡು ವಾರಗಳ ನಂತರ ಸರಿಯಾಗಿ ಲೆಕ್ಕ ಕೊಡುವುದಾಗಿ ಹೇಳುತ್ತಾರೆ.

ಇತ್ತೀಚೆಗೆ, ಚಿತ್ರ ಗೆದ್ದ ಖುಷಿಯಲ್ಲಿ ಚಿತ್ರತಂಡದವರು ಒಂದು ಸಂತೋಷಕೂಟ ಆಯೋಜಿಸಿ, ಚಿತ್ರ ಗೆದ್ದ ಸಂಭ್ರಮವನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಗಣೇಶ್‍ ಹಲವು ವಿಷಯಗಳನ್ನು ಮಾತನಾಡಿದರು.

ಈ ಕುರಿತು ಮಾತನಾಡಿರುವ ಗಣೇಶ್‍, ‘ಮೊದಲ ಮೂರು ದಿನಗಳ ಕಾಲ ಪ್ರೇಕ್ಷಕರು ದೊಡ್ಡ ರೀತಿಯಲ್ಲಿ ಬಂದು ಚಿತ್ರ ನೋಡಿ ಇಷ್ಟಪಟ್ಟಿದ್ದಾರೆ. ಸೋಮವಾರದ ನಂತರ ಇನ್ನೂ ಜಾಸ್ತಿ ಆಗಬಹುದು ಎಂಬ ನಿರೀಕ್ಷೆ ಇದೆ. ಹೆಚ್ಚು ಚಿತ್ರಗಳು ಬಿಡುಗಡೆಗೆ ಇದ್ದರಿಂದ ನಮಗೆ ಹೆಚ್ಚು ಪ್ರದರ್ಶನ ಸಿಗಲಿಲ್ಲ. ಕೆಲವು ಮಲ್ಟಿಪ್ಲೆಕ್ಸ್ಗಳಲ್ಲಿ ಮೊದಲ ದಿನ ಐದು ಪ್ರದರ್ಶನ ಅಷ್ಟೇ ಸಿಕ್ಕಿದ್ದು, ಈಗ ಅದು 10ರವರೆಗೂ ಬಂದಿದೆ. ಚಿತ್ರದ ಕಲೆಕ್ಷನ್‍ ಎಷ್ಟು ಆಗಿರಬಹುದು ಎಂದು ಕೆಲವು ದಿನಗಳ ನಂತರ ಅಧಿಕೃತವಾಗಿ ಘೋಷಿಸುತ್ತೇವೆ. ನನಗೆ ಸುಳ್ಳು ಹೇಳುವುದಕ್ಕೆ ಇಷ್ಟವಿಲ್ಲ. ಸುಳ್ಳು ಹೇಳುತ್ತಾ ಹೇಳುತ್ತಾ, ನಮಗೆ ನಾವೇ ಮೋಸ ಮಾಡಿಕೊಳ್ಳುತ್ತಿರುತ್ತೇವೆ. ಜೊತೆಗೆ, ನೋಡುಗಿರಗೂ, ಓದುಗರಿಗೂ ಮೋಸ ಮಾಡುತ್ತಿರುತ್ತೇವೆ. ಹಾಗಾಗಿ, ಎರಡು ವಾರಗಳ ನಂತರ ಏನು ಕಲೆಕ್ಷನ್‍ ಆಯಿತು ಎಂದು ಸರಿಯಾದ ನಂಬರ್‍ ಕೊಡುತ್ತೇವೆ’ ಎಂದರು.

ಇನ್ನು, ಈ ಚಿತ್ರ ಬಿಡುಗಡೆಯಾದ ಸಂದರ್ಭದಲ್ಲಿ ಗಣೇಶ್‍ ಬಹಳ ವರ್ಷಗಳ ನಂತರ ನರ್ತಕಿ ಚಿತ್ರಮಂದಿರಕ್ಕೆ ಹೋಗಿ ಪ್ರೇಕ್ಷಕರ ಜೊತೆಗೆ ಚಿತ್ರ ನೋಡಿ ಬಂದರು. ‘ಸುಮಾರು 10 ವರ್ಷವೇ ಆಗಿತ್ತು ಚಿತ್ರಮಂದಿರಕ್ಕೆ ಹೋಗಿ. ಈ ಚಿತ್ರದ ಮೇಲಿನ ನಂಬಿಕೆ ಮತ್ತು ಪ್ರೀತಿ ನೋಡಿ ಚಿತ್ರಮಂದಿರಕ್ಕೆ ಹೋದೆ. ಏಳೆಂಟು ವರ್ಷಗಳಿಂದ ನಾನು ಅಭಿಮಾನಿಗಳ ಜೊತೆಗೆ ಹುಟ್ಟುಹಬ್ಬವನ್ನೂ ಆಚರಿಸಿಕೊಂಡಿರಲಿಲ್ಲ. ಹಾಗಾಗಿ, ನರ್ತಕಿ ಚಿತ್ರಮಂದಿರಕ್ಕೆ ಹೋದೆ. ಖುಷಿಯಿಂದ ರಂಗಾಯಣ ರಘು ತರಹ ಡ್ಯಾನ್ಸ್ ಸಹ ಮಾಡಿದೆ’ ಎಂದರು.

ಈ ಸಂದರ್ಭದಲ್ಲಿ ನಿರ್ದೇಶಕ ಶ್ರೀನಿವಾಸ ರಾಜು, ನಿರ್ಮಾಪಕ ಪ್ರಶಾಂತ್‍ ರುದ್ರಪ್ಪ, ರಂಗಾಯಣ ರಘು, ಶರಣ್ಯ ಶೆಟ್ಟಿ ಮುಂತಾದವರು ಹಾಜರಿದ್ದರು.

ಭೂಮಿಕಾ

Recent Posts

ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಸಂಚು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿ

ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…

1 hour ago

ವಾಟಾಳ್‌ ನಾಗರಾಜ್‌ಗೆ ಬಿಗ್‌ ರಿಲೀಫ್:‌ 10 ಕೇಸ್‌ಗಳು ವಾಪಸ್‌

ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ರಾಜ್ಯ ಸರ್ಕಾರ ರಿಲೀಫ್‌ ನೀಡಿದೆ. ವಾಟಾಳ್‌ ನಾಗರಾಜ್‌ ಮೇಲಿನ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಲು…

2 hours ago

52 ಪ್ರಕರಣಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಪರಮೇಶ್ವರ್

ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌…

3 hours ago

ಆತ್ಮಹತ್ಯೆಯ ಹಾಟ್‌ಸ್ಪಾಟ್ ಆಗುತ್ತಿದೆ ಪ್ರಸಿದ್ದ ವೆಲ್ಲೆಸ್ಲಿ ಸೇತುವೆ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್‌ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…

3 hours ago

ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್:‌ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…

4 hours ago

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…

5 hours ago