ಮನರಂಜನೆ

ಏ.18ಕ್ಕೆ “ಯುದ್ದಕಾಂಡ” ಚಿತ್ರ ತೆರೆಗೆ

ಅಜಯ್‌ರಾವ್‌ ನಟಿಸಿ ನಿರ್ಮಿಸಿರುವ ʼಯುದ್ದಕಾಂಡʼ ಸಿನಿಮಾವು ಇದೇ ತಿಂಗಳ ಏ.18 ರಂದು ರಾಜ್ಯಾದ್ಯಾಂತ ತೆರೆಗೆ ಬರಲಿದೆ.

ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಹಾಗೂ ಮಕ್ಕಳ ದುರ್ಬಳಕೆ ಕುರಿತಾದ ಕಥಾಹಂದರ ಹೊಂದಿದ್ದು, ನ್ಯಾಯ ವ್ಯವಸ್ಥೆಯ ಮೇಲೆ ಬೆಳಕು ಚೆಲ್ಲುವ ಕಥೆಯಾಗಿದೆ.

ಚಿತ್ರದಲ್ಲಿ ಅನ್ಯಾಯಕ್ಕೊಳಗಾದ ಹೆಣ್ಣೊಬ್ಬಳು ನ್ಯಾಯಕ್ಕಾಗಿ ಹೋರಾಡುತ್ತಾಳೆ. ಆಕೆ ನಮ್ಮ ಸಮಾಜದ ಎಲ್ಲ ಹೆಣ್ಣು ಮಕ್ಕಳ ಪ್ರತಿನಿಧಿ. ಇದು ಯಾವುದೇ ಓರ್ವ ಹೆಣ್ಣು ಮಗಳಿಗೆ ಸೀಮಿತವಾದ ಕಥೆಯಲ್ಲ ಎಂದು ಅಜಯ್‌ ರಾವ್‌ ಹೇಳಿದರು.

ಈ ಚಿತ್ರಕ್ಕೆ ಪವನ್‌ ಭಟ್‌ ಆಕ್ಷನ್‌ ಕಟ್‌ ಹೇಳಿದ್ದಾರೆ. ಅಜಯ್‌ರಾವ್‌ಗೆ ನಾಯಕಿಯಾಗಿ ಅರ್ಚನಾ ಜೋಯಿಸ್‌ ನಟಿಸಿದ್ದು, ಪ್ರಕಾಶ್‌ ಬೆಳವಾಡಿ, ಟಿ.ಎಸ್‌.ನಾಗಾಭರಣ್‌ ಪ್ರಮುಖ ಪಾತ್ರದಲ್ಲಿದ್ದಾರೆ. ಪ್ರವೀಣ್‌ ಭಟ್‌ ಸಂಗೀತ ನೀಡಿದ್ದು, ಕಾರ್ತಿಕ್‌ ಛಾಯಾಚಿತ್ರಗ್ರಹಣ ಮಾಡಿದ್ದಾರೆ. ಕೆವಿಎನ್‌ ಸಂಸ್ಥೆ ಈ ಚಿತ್ರವನ್ನು ವಿತರಣೆ ಮಾಡುತ್ತಿದೆ.

 

ಆಂದೋಲನ ಡೆಸ್ಕ್

Recent Posts

ಆರೋಗ್ಯ ಕೇಂದ್ರದ ಮುಂಭಾಗವೇ ವಾಹನಗಳ ಪಾರ್ಕಿಂಗ್:‌ ಸಾರ್ವಜನಿಕರಿಗೆ ಕಿರಿಕಿರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ…

9 mins ago

ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ನಿವಾಸಿಗಳಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ…

15 mins ago

ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್‌ ಪೊಲೀಸ್‌…

49 mins ago

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ 80 ಲಕ್ಷ ಜನರಿಂದ ನೋ ಕಿಂಗ್ಸ್‌ ಚಳುವಳಿ ಟ್ರಂಪ್‌ ನೀತಿ ವಿರೋಧಿಸಿ…

1 hour ago

ರಸ್ತೆ ಇಕ್ಕೆಲಗಳ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

೫೦ ಜೆಸಿಬಿ, ೩೦ ಟಿಪ್ಪರ್‌ಗಳು, ೮ ಟ್ರಾಕ್ಟರ್‌ಗಳು, ೫೦೦ ಮಂದಿ ಪೌರಕಾರ್ಮಿಕರು ಭಾಗಿ ಮೈಸೂರು: ನಗರದ ಹೊರ ವರ್ತುಲ ರಸ್ತೆಯಲ್ಲಿ…

1 hour ago

ದಕ್ಷಿಣ ಕಾಶಿಯ ಪಂಚ ಮಹಾರಥೋತ್ಸವಕ್ಕೆ ಭಾರಿ ಸಿದ್ಧತೆ

ಯಶಸ್ವಿಯಾಗಿ ಜಾತ್ರೆ ನಡೆಸಲು ಶಾಸಕ, ಡಿಸಿ ಪಣ; ರಥೋತ್ಸವದ ನಂತರ ವಿವಿಧೆಡೆ ಅರವಟ್ಟಿಗೆಗಳ ಸೇವೆ  ನಂಜನಗೂಡು: ಇಲ್ಲಿನ ಶ್ರೀಕಂಠೇಶ್ವರಸ್ವಾಮಿ ಜಾತ್ರೆಗೆ…

2 hours ago