ಮನರಂಜನೆ

‘ಯುದ್ಧಕಾಂಡ’ದ ಮೊದಲ ಐದು ಟಿಕೆಟ್‍ ಖರೀದಿಸಿದ ರವಿಚಂದ್ರನ್‍

ಅಜೇಯ್‍ ರಾವ್‍ ಅಭಿನಯದ ಮತ್ತು ನಿರ್ಮಾಣದ ‘ಯುದ್ಧಕಾಂಡ’ ಚಿತ್ರವು ಏಪ್ರಿಲ್‍ 18ರಂದು ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ನಟ-ನಿರ್ದೇಶಕ ರವಿಚಂದ್ರನ್‍ ಅವರು ಚಿತ್ರದ ಐದು ಗೋಲ್ಡ್ ಕ್ಲಾಸ್‍ ಟಿಕೆಟ್‍ಗಳನ್ನು ಖರೀದಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಭಾನುವಾರ ಬೆಳಿಗ್ಗೆ ರವಿಚಂದ್ರನ್‍, ‘ಯುದ್ಧಕಾಂಡ’ ಚಿತ್ರದ ಟ್ರೇಲರ್‍ ಬಿಡುಗಡೆ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಬಂದಿದ್ದರು. ಈ ಸಂದರ್ಭದಲ್ಲಿ ಶಂಖ ಊದುವ ಮೂಲಕ ಟ್ರೇಲರ್‍ ಬಿಡುಗಡೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ರವಿಚಂದ್ರನ್, ‘ನಾನು ಬರುವಾಗ ಅಜೇಯ್‍ ಅವರ ಒಂದಿಷ್ಟು ಸಂದರ್ಶನಗಳನ್ನು ನೋಡಿಕೊಂಡು ಬಂದೆ. ಈ ಚಿತ್ರಕ್ಕಾಗಿ ಸಾಕಷ್ಟು ಸಾಲ ಮಾಡಿದ್ದೇನೆ ಎಂದು ಅಜೇಯ್‍ ಹಲವು ಬಾರಿ ಹೇಳಿಕೊಂಡಿದ್ದಾರೆ. ಅದನ್ನು ಕೇಳಿ ನನಗೆ ನನ್ನ ಸಾಲದ ನೆನಪಾಯಿತು. ಸಾಲ ಮಾಡೋದಕ್ಕೆ ತಾಕತ್ತು ಬೇಡ. ಸಾಲ ತೀರಿಸೋಕೆ ತಾಖತ್ತು ಬೇಕು. ನಾನು ಕೋಟಿಗಟ್ಟಲೆ ಹಾಕಿ ಸಿನಿಮಾ ಮಾಡಿದವನು. ನನಗೆ ದುಡ್ಡು ದುಡ್ಡಿನ ಬೆಲೆ ಗೊತ್ತಿಲ್ಲ. ನನಗೆ 100 ಡ್ಯಾನ್ಸರ್ಸ್ ಬೇಕು, 100 ಫೈಟರ್ಸ್ ಬೇಕು ಎಂದು ಹೇಳಿಬಿಡುತ್ತಿದ್ದೆ. ಅಪ್ಪ ಎಲ್ಲಿಂದ ಹಣ ತರುತ್ತಿದ್ದರು ಅಂತ ನಾನು ಯೋಚನೆ ಮಾಡುತ್ತಿರಲಿಲ್ಲ. ಅವರು ಇಲ್ಲದಿದ್ದಾಗ ನನಗೆ ಕಷ್ಟ ಗೊತ್ತಾಯಿತು. ದುಡ್ಡಿಲ್ಲದಿದ್ದರೂ ಇಲ್ಲಿ ಕನಸು ಮುಖ್ಯ. ಎಷ್ಟು ದುಡ್ಡಿದೆಯೋ, ಅಷ್ಟರಲ್ಲಿ ಸಿನಿಮಾ ಮಾಡುವುದನ್ನು ಕಲಿಯಬೇಕು. ಇಲ್ಲಿ ಕಂಟೆಂಟ್ ಮುಖ್ಯ, ಏನು ಹೇಳುತ್ತಿದ್ದೇವೆ ಅನ್ನೋದಷ್ಟೇ ಮುಖ್ಯ’ ಎಂದರು.

‘ಯುದ್ಧಕಾಂಡ’ ಚಿತ್ರವನ್ನು ನೋಡುವುದಾಗಿ ಹೇಳಿದ ರವಿಚಂದ್ರನ್, ‘ನಿಮ್ಮ ಚಿತ್ರತಂಡ ನೋಡಿದರೆ, ನಿಮ್ಮಲ್ಲಿ ಶ್ರದ್ಧೆ ಕಾಣುತ್ತಿದೆ. ನಿಮ್ಮ ತಂಡದಲ್ಲಿ ಒಂದು ತೃಪ್ತಿ ಮತ್ತು ಆತ್ಮವಿಶ್ವಾಸವಿದೆ. ನೀವು ಇಷ್ಟೆಲ್ಲಾ ಮಾಡಿ ಸಿನಿಮಾ ಮಾಡಿರುವಾಗ ನಾನು ಏನು ಕೊಡೋಕೆ ಸಾಧ್ಯ? ನಾನು ಪ್ರೇಕ್ಷಕನಾಗಿ ಸಿನಿಮಾ ನೋಡುತ್ತೇನೆ. ಸಿನಿಮಾ ನೋಡಿ ಫೋನ್‍ ಮಾಡುತ್ತೇನೆ’ ಎಂದು ತಕ್ಷಣವೇ ಜೇಬಿನಿಂದ ದುಡ್ಡು ತೆಗೆದು ಅಜೇಯ್‍ಗೆ ಕೊಟ್ಟು, ಚಿತ್ರದ ಐದು ಗೋಲ್ಡ್ ಕ್ಲಾಸ್‍ ಟಿಕೆಟ್‍ ಕಾದಿರಿಸಿದರು.

‘ಯುದ್ಧಕಾಂಡ’ ಚಿತ್ರಕ್ಕೆ ಪವನ್‍ ಭಟ್‍ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದು, ಚಿತ್ರದಲ್ಲಿ ಅಜೇಯ್‍ ರಾವ್‍, ಅರ್ಚನಾ ಜೋಯಿಸ್‍, ಪ್ರಕಾಶ್‍ ಬೆಳವಾಡಿ, ಟಿ.ಎಸ್‍. ನಾಗಾಭರಣ ಮುಂತಾದವರು ನಟಿಸಿದ್ದಾರೆ. ಕಾರ್ತಿಕ್‍ ಶರ್ಮ ಛಾಯಾಗ್ರಹಣ ಮತ್ತು ಹೇಮಂತ್‍ ಜೋಯಿಸ್‍ ಅವರ ಸಂಗೀತ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

10 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

11 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

12 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

13 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

16 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

16 hours ago