ಬೆಂಗಳೂರು: ಎಲ್ಲರಂತೆ ನಮಗೂ ಕಷ್ಟ ಬರುತ್ತದೆ, ಯುವ ಹಾಗೂ ವಿನಯ್ ತಲೆ ಬಗ್ಗಿಸಿಕೊಂಡು ನಡೆಯಬೇಕು ಎಂದು ನಟ ರಾಘವೇಂದ್ರ ರಾಜ್ ಕುಮಾರ್ ಹೇಳಿದ್ದಾರೆ.
ಈ ಬಗ್ಗೆ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಅಭಿಮಾನಿಗಳು ನನ್ನ ಮಕ್ಕಳಿಗೆ ಇಷ್ಟೊಂದು ಯಶಸ್ಸು ಕೊಡುತ್ತಿದ್ದಾರೆ ಅಂತ ಅಂದುಕೊಂಡಿರಲಿಲ್ಲ. ಒಬ್ಬ ತಂದೆಯಾಗಿ ಇದಕ್ಕಿಂತ ಬೇರೆ ಸಂತೋಷ ಬೇಡ. ಅಭಿಮಾನಿಗಳ ಪ್ರೀತಿಯನ್ನು ನಮ್ಮ ಕುಟುಂಬದವರು ತಲೆ ಬಗ್ಗಿಸಿಕೊಂಡು ಕಾಪಾಡಿಕೊಂಡು ನಡೆಯಬೇಕು ಎಂದರು.
ವಿನಯ್ ಹಾಗೂ ಯುವ ಕಷ್ಟ ಪಟ್ಟು ತಲೆ ಬಗ್ಗಿಸಿಕೊಂಡು ಮುಂದೆ ನಡೆಯಬೇಕು. ಪ್ರತಿಯೊಂದು ಕೆಲಸದಲ್ಲಿ ಚಾಲೆಂಜ್ ಇರುತ್ತದೆ. ಯಾವುದನ್ನೂ ಸುಮ್ಮನೆ ಸಂಪಾದನೆ ಮಾಡಲು ಆಗುವುದಿಲ್ಲ. ಅಭಿಮಾನಿಗಳೇ ನಮಗೆ ಶಕ್ತಿ ಹಾಗೂ ಪ್ರೋತ್ಸಾಹ ಎಂದು ರಾಘವೇಂದ್ರ ರಾಜ್ ಕುಮಾರ್ ಹೇಳಿದ್ದಾರೆ.
ಕಷ್ಟ-ಸುಖ ಅನ್ನೋದು ಎಲ್ಲರಿಗೂ ಬರುತ್ತದೆ. ಹಾಗೆಯೇ ನಮಗೂ ಬರುತ್ತದೆ. ಆದರೆ ಏನೇ ಬಂದರೂ ನಾವು ಧೈರ್ಯವಾಗಿ ಎದುರಿಸಬೇಕು ಎಂದು ಕಿವಿಮಾತು ಹೇಳಿದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…