ಬೆಂಗಳೂರು: ಎಲ್ಲರಂತೆ ನಮಗೂ ಕಷ್ಟ ಬರುತ್ತದೆ, ಯುವ ಹಾಗೂ ವಿನಯ್ ತಲೆ ಬಗ್ಗಿಸಿಕೊಂಡು ನಡೆಯಬೇಕು ಎಂದು ನಟ ರಾಘವೇಂದ್ರ ರಾಜ್ ಕುಮಾರ್ ಹೇಳಿದ್ದಾರೆ.
ಈ ಬಗ್ಗೆ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಅಭಿಮಾನಿಗಳು ನನ್ನ ಮಕ್ಕಳಿಗೆ ಇಷ್ಟೊಂದು ಯಶಸ್ಸು ಕೊಡುತ್ತಿದ್ದಾರೆ ಅಂತ ಅಂದುಕೊಂಡಿರಲಿಲ್ಲ. ಒಬ್ಬ ತಂದೆಯಾಗಿ ಇದಕ್ಕಿಂತ ಬೇರೆ ಸಂತೋಷ ಬೇಡ. ಅಭಿಮಾನಿಗಳ ಪ್ರೀತಿಯನ್ನು ನಮ್ಮ ಕುಟುಂಬದವರು ತಲೆ ಬಗ್ಗಿಸಿಕೊಂಡು ಕಾಪಾಡಿಕೊಂಡು ನಡೆಯಬೇಕು ಎಂದರು.
ವಿನಯ್ ಹಾಗೂ ಯುವ ಕಷ್ಟ ಪಟ್ಟು ತಲೆ ಬಗ್ಗಿಸಿಕೊಂಡು ಮುಂದೆ ನಡೆಯಬೇಕು. ಪ್ರತಿಯೊಂದು ಕೆಲಸದಲ್ಲಿ ಚಾಲೆಂಜ್ ಇರುತ್ತದೆ. ಯಾವುದನ್ನೂ ಸುಮ್ಮನೆ ಸಂಪಾದನೆ ಮಾಡಲು ಆಗುವುದಿಲ್ಲ. ಅಭಿಮಾನಿಗಳೇ ನಮಗೆ ಶಕ್ತಿ ಹಾಗೂ ಪ್ರೋತ್ಸಾಹ ಎಂದು ರಾಘವೇಂದ್ರ ರಾಜ್ ಕುಮಾರ್ ಹೇಳಿದ್ದಾರೆ.
ಕಷ್ಟ-ಸುಖ ಅನ್ನೋದು ಎಲ್ಲರಿಗೂ ಬರುತ್ತದೆ. ಹಾಗೆಯೇ ನಮಗೂ ಬರುತ್ತದೆ. ಆದರೆ ಏನೇ ಬಂದರೂ ನಾವು ಧೈರ್ಯವಾಗಿ ಎದುರಿಸಬೇಕು ಎಂದು ಕಿವಿಮಾತು ಹೇಳಿದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…