ಮನರಂಜನೆ

ಸೆಟ್ಟೇರಿತು ಸೂರಿ ಹೊಸ ಸಿನಿಮಾ; ಯುವಗೆ ‘ದುನಿಯಾ’ ವಿಜಯ್‌ ಪುತ್ರಿ ನಾಯಕಿ

ಯುವ ಅಭಿನಯದ ‘ಎಕ್ಕ’ ಚಿತ್ರವು ಜೂನ್‍ 06ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಅಶ್ವಿನಿ ಪುನೀತ್‌ ರಾಜಕುಮಾರ್‌ ಅವರ ಪಿಆರ್‌ಕೆ ಪ್ರೊಡಕ್ಷನ್ಸ್, ಕಾರ್ತಿಕ್‌ ಗೌಡ ಹಾಗೂ ಯೋಗಿ ಜಿ ರಾಜ್‌ ಒಡೆತನದ KRG ಸ್ಟುಡಿಯೋಸ್‍ ಹಾಗೂ ಜಯಣ್ಣ-ಭೋಗಣ್ಣ ಅವರ ಜಯಣ್ಣ ಫಿಲ್ಮಂಸ್‌ ಬ್ಯಾನರ್‌ನಡಿ ನಿರ್ಮಿಸಲಾಗುತ್ತಿದೆ. ಈ ಚಿತ್ರ ಬಿಡುಗಡೆಗೂ ಮುನ್ನವೇ ಇದೇ ಸಂಸ್ಥೆಯಡಿ ಹೊಸದೊಂದು ಚಿತ್ರ ಘೋಷಣೆಯಾಗಿದೆ.

ವಿಶೇಷವೆಂದರೆ, ಈ ಚಿತ್ರದಲ್ಲೂ ಯುವ ರಾಜಕುಮಾರ್ ನಟಿಸುತ್ತಿದ್ದು, ‘ದುನಿಯಾ’ ಸೂರಿ ನಿರ್ದೇಶನ ಮಾಡುತ್ತಿದ್ದಾರೆ. ವಿಶೇಷವೆಂದರೆ, ‘ದುನಿಯಾ’ ಚಿತ್ರದ ಮೂಲಕ ವಿಜಯ್‍ ಅವರನ್ನು ಹೀರೋ ಮಾಡಿದ್ದ ಸೂರಿ, ಈ ಚಿತ್ರದಲ್ಲಿ ವಿಜಯ್‍ ಅವರ ಮಗಳು ರಿತನ್ಯಾಳನ್ನು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ.

ಕೆಲವು ತಿಂಗಳುಗಳ ಹಿಂದೆಯೇ ಯುವ ಹಾಗೂ ಸೂರಿ ಸಿನಿಮಾ ಕುರಿತು ಮಾತು ಕೇಳಿಬರುತ್ತಿತ್ತು. ಆ ಚಿತ್ರ ಅಕ್ಷಯ ತೃತೀಯ ದಿನ ಅಧಿಕೃತವಾಗಿ ಸೆಟ್ಟೇರಿದೆ. ಬುಧವಾರ, ಬೆಂಗಳೂರಿನ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರಳವಾಗಿ ಮುಹೂರ್ತ ನೆರವೇರಿದೆ. ಚಿತ್ರದ ಮೊದಲ ದೃಶ್ಯಕ್ಕೆ ‘ದುನಿಯಾ’ ವಿಜಯ್‍ ಕ್ಲ್ಯಾಪ್‌ ಮಾಡಿದ್ದು, ಪುನೀತ್ ರಾಜಕುಮಾರ್‍ ಅವರ ಮಗಳು ಧೃತಿ ಪುನೀತ್ ರಾಜಮಾರ್ ಕ್ಯಾಮೆರಾ ಚಾಲನೆ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು.

ಯುವಗೆ ಇದು ಮೂರನೇ ಚಿತ್ರ. ಕಳೆದ ವರ್ಷ ಬಿಡುಗಡೆಯಾದ ‘ಯುವ’ ಚಿತ್ರದ ಜೊತೆಗೆ ‘ಎಕ್ಕ’ ಮುಗಿಸಿ, ಬಿಡುಗಡೆಗೆ ಕಾಯುತ್ತಿದ್ದಾರೆ. ಇನ್ನು, ರಿತನ್ಯಾಗೆ ಇದು ಎರಡನೇ ಚಿತ್ರ. ಕಳೆದ ವರ್ಷ ಸೆಟ್ಟೇರಿದ ‘ಲ್ಯಾಂಡ್‍ ಲಾರ್ಡ್’ ಚಿತ್ರದಲ್ಲಿ ರಿತನ್ಯಾ ನಟಿಸಿದ್ದು, ಚಿತ್ರದ ಚಿತ್ರೀಕರಣ ಇನ್ನೂ ಮುಗಿದಿಲ್ಲ.

ಇನ್ನೂ ಹೆಸರಿಡದ ಈ ಚಿತ್ರಕ್ಕೆ ದೀಪು ಎಸ್‌. ಕುಮಾರ್‌ ಸಂಕಲನ, ಚರಣ್‌ ರಾಜ್‌ ಸಂಗೀತ ನಿರ್ದೇಶನ, ಶೇಖರ್‌ ಛಾಯಾಗ್ರಹಣವಿರಲಿದೆ. ಮೇ ತಿಂಗಳ ಕೊನೆಯಲ್ಲಿ ಈ ಚಿತ್ರದ ಚಿತ್ರೀಕರಣ ಅಧಿಕೃತವಾಗಿ ಪ್ರಾರಂಭವಾಗಲಿದೆ.

ಆಂದೋಲನ ಡೆಸ್ಕ್

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

7 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

7 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

7 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

8 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

8 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

8 hours ago