yuva rajakumar duniya vijay
ಯುವ ಅಭಿನಯದ ‘ಎಕ್ಕ’ ಚಿತ್ರವು ಜೂನ್ 06ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಅವರ ಪಿಆರ್ಕೆ ಪ್ರೊಡಕ್ಷನ್ಸ್, ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಒಡೆತನದ KRG ಸ್ಟುಡಿಯೋಸ್ ಹಾಗೂ ಜಯಣ್ಣ-ಭೋಗಣ್ಣ ಅವರ ಜಯಣ್ಣ ಫಿಲ್ಮಂಸ್ ಬ್ಯಾನರ್ನಡಿ ನಿರ್ಮಿಸಲಾಗುತ್ತಿದೆ. ಈ ಚಿತ್ರ ಬಿಡುಗಡೆಗೂ ಮುನ್ನವೇ ಇದೇ ಸಂಸ್ಥೆಯಡಿ ಹೊಸದೊಂದು ಚಿತ್ರ ಘೋಷಣೆಯಾಗಿದೆ.
ವಿಶೇಷವೆಂದರೆ, ಈ ಚಿತ್ರದಲ್ಲೂ ಯುವ ರಾಜಕುಮಾರ್ ನಟಿಸುತ್ತಿದ್ದು, ‘ದುನಿಯಾ’ ಸೂರಿ ನಿರ್ದೇಶನ ಮಾಡುತ್ತಿದ್ದಾರೆ. ವಿಶೇಷವೆಂದರೆ, ‘ದುನಿಯಾ’ ಚಿತ್ರದ ಮೂಲಕ ವಿಜಯ್ ಅವರನ್ನು ಹೀರೋ ಮಾಡಿದ್ದ ಸೂರಿ, ಈ ಚಿತ್ರದಲ್ಲಿ ವಿಜಯ್ ಅವರ ಮಗಳು ರಿತನ್ಯಾಳನ್ನು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ.
ಕೆಲವು ತಿಂಗಳುಗಳ ಹಿಂದೆಯೇ ಯುವ ಹಾಗೂ ಸೂರಿ ಸಿನಿಮಾ ಕುರಿತು ಮಾತು ಕೇಳಿಬರುತ್ತಿತ್ತು. ಆ ಚಿತ್ರ ಅಕ್ಷಯ ತೃತೀಯ ದಿನ ಅಧಿಕೃತವಾಗಿ ಸೆಟ್ಟೇರಿದೆ. ಬುಧವಾರ, ಬೆಂಗಳೂರಿನ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರಳವಾಗಿ ಮುಹೂರ್ತ ನೆರವೇರಿದೆ. ಚಿತ್ರದ ಮೊದಲ ದೃಶ್ಯಕ್ಕೆ ‘ದುನಿಯಾ’ ವಿಜಯ್ ಕ್ಲ್ಯಾಪ್ ಮಾಡಿದ್ದು, ಪುನೀತ್ ರಾಜಕುಮಾರ್ ಅವರ ಮಗಳು ಧೃತಿ ಪುನೀತ್ ರಾಜಮಾರ್ ಕ್ಯಾಮೆರಾ ಚಾಲನೆ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು.
ಯುವಗೆ ಇದು ಮೂರನೇ ಚಿತ್ರ. ಕಳೆದ ವರ್ಷ ಬಿಡುಗಡೆಯಾದ ‘ಯುವ’ ಚಿತ್ರದ ಜೊತೆಗೆ ‘ಎಕ್ಕ’ ಮುಗಿಸಿ, ಬಿಡುಗಡೆಗೆ ಕಾಯುತ್ತಿದ್ದಾರೆ. ಇನ್ನು, ರಿತನ್ಯಾಗೆ ಇದು ಎರಡನೇ ಚಿತ್ರ. ಕಳೆದ ವರ್ಷ ಸೆಟ್ಟೇರಿದ ‘ಲ್ಯಾಂಡ್ ಲಾರ್ಡ್’ ಚಿತ್ರದಲ್ಲಿ ರಿತನ್ಯಾ ನಟಿಸಿದ್ದು, ಚಿತ್ರದ ಚಿತ್ರೀಕರಣ ಇನ್ನೂ ಮುಗಿದಿಲ್ಲ.
ಇನ್ನೂ ಹೆಸರಿಡದ ಈ ಚಿತ್ರಕ್ಕೆ ದೀಪು ಎಸ್. ಕುಮಾರ್ ಸಂಕಲನ, ಚರಣ್ ರಾಜ್ ಸಂಗೀತ ನಿರ್ದೇಶನ, ಶೇಖರ್ ಛಾಯಾಗ್ರಹಣವಿರಲಿದೆ. ಮೇ ತಿಂಗಳ ಕೊನೆಯಲ್ಲಿ ಈ ಚಿತ್ರದ ಚಿತ್ರೀಕರಣ ಅಧಿಕೃತವಾಗಿ ಪ್ರಾರಂಭವಾಗಲಿದೆ.
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…
ಬೆಂಗಳೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST)…