ಮನರಂಜನೆ

ಸೆಟ್ಟೇರಿತು ಸೂರಿ ಹೊಸ ಸಿನಿಮಾ; ಯುವಗೆ ‘ದುನಿಯಾ’ ವಿಜಯ್‌ ಪುತ್ರಿ ನಾಯಕಿ

ಯುವ ಅಭಿನಯದ ‘ಎಕ್ಕ’ ಚಿತ್ರವು ಜೂನ್‍ 06ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಅಶ್ವಿನಿ ಪುನೀತ್‌ ರಾಜಕುಮಾರ್‌ ಅವರ ಪಿಆರ್‌ಕೆ ಪ್ರೊಡಕ್ಷನ್ಸ್, ಕಾರ್ತಿಕ್‌ ಗೌಡ ಹಾಗೂ ಯೋಗಿ ಜಿ ರಾಜ್‌ ಒಡೆತನದ KRG ಸ್ಟುಡಿಯೋಸ್‍ ಹಾಗೂ ಜಯಣ್ಣ-ಭೋಗಣ್ಣ ಅವರ ಜಯಣ್ಣ ಫಿಲ್ಮಂಸ್‌ ಬ್ಯಾನರ್‌ನಡಿ ನಿರ್ಮಿಸಲಾಗುತ್ತಿದೆ. ಈ ಚಿತ್ರ ಬಿಡುಗಡೆಗೂ ಮುನ್ನವೇ ಇದೇ ಸಂಸ್ಥೆಯಡಿ ಹೊಸದೊಂದು ಚಿತ್ರ ಘೋಷಣೆಯಾಗಿದೆ.

ವಿಶೇಷವೆಂದರೆ, ಈ ಚಿತ್ರದಲ್ಲೂ ಯುವ ರಾಜಕುಮಾರ್ ನಟಿಸುತ್ತಿದ್ದು, ‘ದುನಿಯಾ’ ಸೂರಿ ನಿರ್ದೇಶನ ಮಾಡುತ್ತಿದ್ದಾರೆ. ವಿಶೇಷವೆಂದರೆ, ‘ದುನಿಯಾ’ ಚಿತ್ರದ ಮೂಲಕ ವಿಜಯ್‍ ಅವರನ್ನು ಹೀರೋ ಮಾಡಿದ್ದ ಸೂರಿ, ಈ ಚಿತ್ರದಲ್ಲಿ ವಿಜಯ್‍ ಅವರ ಮಗಳು ರಿತನ್ಯಾಳನ್ನು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ.

ಕೆಲವು ತಿಂಗಳುಗಳ ಹಿಂದೆಯೇ ಯುವ ಹಾಗೂ ಸೂರಿ ಸಿನಿಮಾ ಕುರಿತು ಮಾತು ಕೇಳಿಬರುತ್ತಿತ್ತು. ಆ ಚಿತ್ರ ಅಕ್ಷಯ ತೃತೀಯ ದಿನ ಅಧಿಕೃತವಾಗಿ ಸೆಟ್ಟೇರಿದೆ. ಬುಧವಾರ, ಬೆಂಗಳೂರಿನ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರಳವಾಗಿ ಮುಹೂರ್ತ ನೆರವೇರಿದೆ. ಚಿತ್ರದ ಮೊದಲ ದೃಶ್ಯಕ್ಕೆ ‘ದುನಿಯಾ’ ವಿಜಯ್‍ ಕ್ಲ್ಯಾಪ್‌ ಮಾಡಿದ್ದು, ಪುನೀತ್ ರಾಜಕುಮಾರ್‍ ಅವರ ಮಗಳು ಧೃತಿ ಪುನೀತ್ ರಾಜಮಾರ್ ಕ್ಯಾಮೆರಾ ಚಾಲನೆ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು.

ಯುವಗೆ ಇದು ಮೂರನೇ ಚಿತ್ರ. ಕಳೆದ ವರ್ಷ ಬಿಡುಗಡೆಯಾದ ‘ಯುವ’ ಚಿತ್ರದ ಜೊತೆಗೆ ‘ಎಕ್ಕ’ ಮುಗಿಸಿ, ಬಿಡುಗಡೆಗೆ ಕಾಯುತ್ತಿದ್ದಾರೆ. ಇನ್ನು, ರಿತನ್ಯಾಗೆ ಇದು ಎರಡನೇ ಚಿತ್ರ. ಕಳೆದ ವರ್ಷ ಸೆಟ್ಟೇರಿದ ‘ಲ್ಯಾಂಡ್‍ ಲಾರ್ಡ್’ ಚಿತ್ರದಲ್ಲಿ ರಿತನ್ಯಾ ನಟಿಸಿದ್ದು, ಚಿತ್ರದ ಚಿತ್ರೀಕರಣ ಇನ್ನೂ ಮುಗಿದಿಲ್ಲ.

ಇನ್ನೂ ಹೆಸರಿಡದ ಈ ಚಿತ್ರಕ್ಕೆ ದೀಪು ಎಸ್‌. ಕುಮಾರ್‌ ಸಂಕಲನ, ಚರಣ್‌ ರಾಜ್‌ ಸಂಗೀತ ನಿರ್ದೇಶನ, ಶೇಖರ್‌ ಛಾಯಾಗ್ರಹಣವಿರಲಿದೆ. ಮೇ ತಿಂಗಳ ಕೊನೆಯಲ್ಲಿ ಈ ಚಿತ್ರದ ಚಿತ್ರೀಕರಣ ಅಧಿಕೃತವಾಗಿ ಪ್ರಾರಂಭವಾಗಲಿದೆ.

ಆಂದೋಲನ ಡೆಸ್ಕ್

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

12 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

13 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

15 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

16 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

17 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

17 hours ago