yuva rajakumar duniya vijay
ಯುವ ಅಭಿನಯದ ‘ಎಕ್ಕ’ ಚಿತ್ರವು ಜೂನ್ 06ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಅವರ ಪಿಆರ್ಕೆ ಪ್ರೊಡಕ್ಷನ್ಸ್, ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಒಡೆತನದ KRG ಸ್ಟುಡಿಯೋಸ್ ಹಾಗೂ ಜಯಣ್ಣ-ಭೋಗಣ್ಣ ಅವರ ಜಯಣ್ಣ ಫಿಲ್ಮಂಸ್ ಬ್ಯಾನರ್ನಡಿ ನಿರ್ಮಿಸಲಾಗುತ್ತಿದೆ. ಈ ಚಿತ್ರ ಬಿಡುಗಡೆಗೂ ಮುನ್ನವೇ ಇದೇ ಸಂಸ್ಥೆಯಡಿ ಹೊಸದೊಂದು ಚಿತ್ರ ಘೋಷಣೆಯಾಗಿದೆ.
ವಿಶೇಷವೆಂದರೆ, ಈ ಚಿತ್ರದಲ್ಲೂ ಯುವ ರಾಜಕುಮಾರ್ ನಟಿಸುತ್ತಿದ್ದು, ‘ದುನಿಯಾ’ ಸೂರಿ ನಿರ್ದೇಶನ ಮಾಡುತ್ತಿದ್ದಾರೆ. ವಿಶೇಷವೆಂದರೆ, ‘ದುನಿಯಾ’ ಚಿತ್ರದ ಮೂಲಕ ವಿಜಯ್ ಅವರನ್ನು ಹೀರೋ ಮಾಡಿದ್ದ ಸೂರಿ, ಈ ಚಿತ್ರದಲ್ಲಿ ವಿಜಯ್ ಅವರ ಮಗಳು ರಿತನ್ಯಾಳನ್ನು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ.
ಕೆಲವು ತಿಂಗಳುಗಳ ಹಿಂದೆಯೇ ಯುವ ಹಾಗೂ ಸೂರಿ ಸಿನಿಮಾ ಕುರಿತು ಮಾತು ಕೇಳಿಬರುತ್ತಿತ್ತು. ಆ ಚಿತ್ರ ಅಕ್ಷಯ ತೃತೀಯ ದಿನ ಅಧಿಕೃತವಾಗಿ ಸೆಟ್ಟೇರಿದೆ. ಬುಧವಾರ, ಬೆಂಗಳೂರಿನ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರಳವಾಗಿ ಮುಹೂರ್ತ ನೆರವೇರಿದೆ. ಚಿತ್ರದ ಮೊದಲ ದೃಶ್ಯಕ್ಕೆ ‘ದುನಿಯಾ’ ವಿಜಯ್ ಕ್ಲ್ಯಾಪ್ ಮಾಡಿದ್ದು, ಪುನೀತ್ ರಾಜಕುಮಾರ್ ಅವರ ಮಗಳು ಧೃತಿ ಪುನೀತ್ ರಾಜಮಾರ್ ಕ್ಯಾಮೆರಾ ಚಾಲನೆ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು.
ಯುವಗೆ ಇದು ಮೂರನೇ ಚಿತ್ರ. ಕಳೆದ ವರ್ಷ ಬಿಡುಗಡೆಯಾದ ‘ಯುವ’ ಚಿತ್ರದ ಜೊತೆಗೆ ‘ಎಕ್ಕ’ ಮುಗಿಸಿ, ಬಿಡುಗಡೆಗೆ ಕಾಯುತ್ತಿದ್ದಾರೆ. ಇನ್ನು, ರಿತನ್ಯಾಗೆ ಇದು ಎರಡನೇ ಚಿತ್ರ. ಕಳೆದ ವರ್ಷ ಸೆಟ್ಟೇರಿದ ‘ಲ್ಯಾಂಡ್ ಲಾರ್ಡ್’ ಚಿತ್ರದಲ್ಲಿ ರಿತನ್ಯಾ ನಟಿಸಿದ್ದು, ಚಿತ್ರದ ಚಿತ್ರೀಕರಣ ಇನ್ನೂ ಮುಗಿದಿಲ್ಲ.
ಇನ್ನೂ ಹೆಸರಿಡದ ಈ ಚಿತ್ರಕ್ಕೆ ದೀಪು ಎಸ್. ಕುಮಾರ್ ಸಂಕಲನ, ಚರಣ್ ರಾಜ್ ಸಂಗೀತ ನಿರ್ದೇಶನ, ಶೇಖರ್ ಛಾಯಾಗ್ರಹಣವಿರಲಿದೆ. ಮೇ ತಿಂಗಳ ಕೊನೆಯಲ್ಲಿ ಈ ಚಿತ್ರದ ಚಿತ್ರೀಕರಣ ಅಧಿಕೃತವಾಗಿ ಪ್ರಾರಂಭವಾಗಲಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…