ಮನರಂಜನೆ

Ekka teaser; ಪೊರಕೆ ಹಿಡಿದು ಹೊಸ ಅವತಾರದಲ್ಲಿ ಯುವ ಎಂಟ್ರಿ

ಯುವ ರಾಜಕುಮಾರ್‌ ತಮ್ಮ ಹುಟ್ಟುಹಬ್ಬವನ್ನು ಬುಧವಾರ (ಏಪ್ರಿಲ್‍ 23) ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರ ಹೊಸ ಚಿತ್ರ ‘ಎಕ್ಕ’ದ ಟೀಸರ್‌ (Ekka Teaser) ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ, ಪುಲ್ವಾಮಾದಲ್ಲಿ ಹಿಂದುಗಳ ಮೇಲೆ ನಡೆದ ದಾಳಿ ಹಿನ್ನೆಲೆಯಲ್ಲಿ, ಮೃತಪಟ್ಟವರ ಗೌರವ ಸೂಚಕವಾಗಿ ಚಿತ್ರದ ಟೀಸರ್‍ ಬಿಡುಗಡೆಯನ್ನು ಗುರುವಾರಕ್ಕೆ ಮುಂದೂಡಲಾಗಿತ್ತು. ಅದರಂತೆ ಇಂದು ಟೀಸರ್‌ ಬಿಡುಗಡೆಯಾಗಿದೆ.

ಇಂದು ಡಾ. ರಾಜಕುಮಾರ್‌ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರದ ಟೀಸರ್‌ ಬಿಡುಗಡೆ ಮಾಡಲಾಗಿದೆ. ಒಂದು ನಿಮಿಷ ಒಂಬತ್ತು ಸೆಕೆಂಡ್‌ ಇರುವ ಟೀಸರ್‌ನಲ್ಲಿ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಮಗು-ಮೃಗ ಎಂದು ಮಸ್ತ್‌ ಡೈಲಾಗ್‌ ಹೊಡೆಯುತ್ತಾ ಕೈಯಲ್ಲಿ ಪೊರಕೆ ಹಿಡಿದು ವಿಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಇದು ಇಲ್ಲಿಗೆ ನಿಲ್ಲೋದಿಲ್ಲ’ ಎಂದು ದೊಡ್ಡದಾಗಿ ಏನೋ ಸೂಚನೆ ಕೊಟ್ಟಿದ್ದಾರೆ.

‘ಜಾಕಿ’ ಚಿತ್ರದಲ್ಲಿನ ಒಂದು ದೃಶ್ಯದಲ್ಲಿ ಪುನೀತ್‍ ಮಾನಸಿಕ ಅಸ್ವಸ್ಥರಾಗಿ ಕಾಣಿಸಿಕೊಂಡಂತೆ, ಯುವ ಸಹ ಅದೇ ತರಹ ಗೆಟಪ್‍ನಲ್ಲಿ ಕಾಣಿಸಿಕೊಂಡಿದ್ದಾರೆ. ಬಾಯಲ್ಲಿ ವಿಷಲ್‍ ಊದುತ್ತಾ, ತಲೆಗೆ ಒಂದು ಟೋಪಿ ಧರಿಸಿ, ಒಡೆದ ಕನ್ನಡಕವನ್ನು ತೊಟ್ಟು ಅವರು ಈ ಟೀಸರ್‍ನಲ್ಲಿ ಎಂಟ್ರಿ ಕೊಟ್ಟಿದ್ದಾರೆ.

ರೋಹಿತ್‍ ಪದಕಿ ನಿರ್ದೇಶನದ ಈ ಚಿತ್ರದಲ್ಲಿ ಯುವಗೆ ಸಂಜನಾ ಆನಂದ್‍ ಮತ್ತು ಸಂಪದ ನಾಯಕಿಯರಾಗಿ ನಟಿಸಿದ್ದು, ಮಿಕ್ಕಂತೆ ಅತುಲ್ ಕುಲಕರ್ಣಿ, ಆದಿತ್ಯ, ಶ್ರುತಿ, ಪೂರ್ಣಚಂದ್ರ ಮೈಸೂರು, ಪುನೀತ್‍ ರುದ್ರನಾಗ್‍, ಸಾಧು ಕೋಕಿಲ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚರಣ್ ರಾಜ್ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣವಿರುವ ಈ ಚಿತ್ರವನ್ನು ರೋಹಿತ್‍ ಪದಕಿ ನಿರ್ದೇಶನ ಮಾಡಿದ್ದಾರೆ.

ಈ ಚಿತ್ರವನ್ನು ಕನ್ನಡದ ಮೂರು ಜನಪ್ರಿಯ ನಿರ್ಮಾಣ ಸಂಸ್ಥೆಗಳಾದ PRK ಪ್ರೊಡಕ್ಷನ್ಸ್, ಜಯಣ್ಣ ಫಿಲಂಸ್‍ ಮತ್ತು KRG ಸ್ಟುಡಿಯೋಸ್‍ ಜೊತೆಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿರುವುದು ವಿಶೇಷ. ಈ ಚಿತ್ರವನ್ನು ಅಶ್ವಿನಿ ಪುನೀತ್‍ ರಾಜಕುಮಾರ್‌, ಜಯಣ್ಣ, ಭೋಗೇಂದ್ರ, ಕಾರ್ತಿಕ್‍ ಗೌಡ ಮತ್ತು ಯೋಗಿ ಜೊತೆಯಾಗಿ ನಿರ್ಮಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

12 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

12 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

13 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

13 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

14 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

14 hours ago