ಯುವ ರಾಜಕುಮಾರ್ ಅಭಿನಯದ ಎರಡನೇ ಚಿತ್ರ ‘ಎಕ್ಕ’ಗೆ ಇತ್ತೀಚೆಗೆ ಅಧಿಕೃತ ಚಾಲನೆ ಸಿಕ್ಕಿದೆ. ವಿಶೇಷವೆಂದರೆ, ಚಿತ್ರದ ಮುಹೂರ್ತದ ದಿನವೇ ಚಿತ್ರದ ಬಿಡುಗಡೆಯ ದಿನಾಂಕವನ್ನು ಘೋಷಿಸಲಾಗಿದೆ. ಹಿಂದೊಮ್ಮೆ ನಿರ್ಮಾಪಕರಾದ ದ್ವಾರಕೀಶ್, ಎನ್. ವೀರಾಸ್ವಾಮಿ ಮುಂತಾದವರು ಚಿತ್ರದ ಮುಹೂರ್ತದ ದಿನವೇ ಬಿಡುಗಡೆ ದಿನಾಂಕ ಘೋಷಿಸವ ಪರಿಪಾಠ ಇಟ್ಟುಕೊಂಡಿದ್ದರು. ಇದೀಗ ಅದು ಮುಂದುವರೆದಿದೆ.
‘ಎಕ್ಕ’ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದಿರುವ ನಿರ್ದೇಶನ ಮಾಡುತ್ತಿದ್ದಾರೆ ರೋಹಿತ್ ಪದಕಿ. ಈ ಹಿಂದೆ ‘ರತ್ನನ್ ಪ್ರಪಂಚ’ ಮತ್ತು ‘ಉತ್ತರಕಾಂಡ’ ಚಿತ್ರಗಳನ್ನು ನಿರ್ದೇಶಿಸಿರುವ ಅವರಿಗೆ ಇದು ಮೂರನೇ ಚಿತ್ರ. ‘ಎಕ್ಕ’ ಎಂಬ ಶೀರ್ಷಿಕೆಯ ಕುರಿತು ಮಾತನಾಡುವ ಅವರು, ‘ಈ ಹಿಂದೆ ‘ಜಾಕಿ’ ಚಿತ್ರಕ್ಕೆ ‘ಎಕ್ಕ’ ಎಂಬ ಶೀರ್ಷಿಕೆ ಮೊದಲು ಇಡಲಾಗಿತ್ತು. ಚಿತ್ರದಲ್ಲಿ ನಾಯಕನ ಹೆಸರು ಜಾಕಿ ಎಂದಾದ್ದರಿಂದ, ಕೊನೆಗೆ ‘ಜಾಕಿ’ ಎಂದು ಇಡಲಾಯ್ತು. ನಮ್ಮ ಚಿತ್ರದಲ್ಲಿ ನಾಯಕನ ಹೆಸರು ಎಕ್ಕ ಆದ್ದರಿಂದ ಮತ್ತು ಕಥೆಗೆ ಅದು ಪೂರಕವಾಗಿರುವುದರಿಂದ, ಅದನ್ನೇ ಇಟ್ಟಿದ್ದೇವೆ. ಮೊದಲು ‘ಎಕ್ಕ ರಾಜ ರಾಣಿ’ ಎಂಬ ಟೈಟಲ್ ಇಡುವ ಯೋಚನೆಯೂ ಇತ್ತು. ಕೊನೆಗೆ ‘ಎಕ್ಕ’ ಫೈನಲ್ ಆಯಿತು’ ಎನ್ನುತ್ತಾರೆ.
ಈ ಚಿತ್ರದಲ್ಲಿ ಮಾಸ್ ಅಂಶಗಳ ಜೊತೆಗೆ ಗಟ್ಟಿ ಕಥೆ ಸಹ ಇದೆ ಎನ್ನುವ ಅವರು, ‘ಇದೊಂದು ರಾ ಚಿತ್ರ. ಅದರ ಜೊತೆಗೆ ಸಾಕಷ್ಟು ಭಾವನೆಗಳಿವೆ. ಚಿತ್ರದ ಮೂಲಕ ಮನುಷ್ಯನ ತಳಮಳವಳನ್ನು ತೋರಿಸುವ ಪ್ರಯತ್ನ ಮಾಡುತ್ತಿದ್ದೇವೆ. ‘ರತ್ನನ್ ಪ್ರಪಂಚ’ ಚಿತ್ರದಲ್ಲೂ ತಳಮಳವಿತ್ತು. ಆದರೆ, ಅದರಲ್ಲಿ ರಕ್ತ ಇರಲಿಲ್ಲ. ಇದರಲ್ಲಿ ರಕ್ತ ಇದೆ. ಪ್ರತಿಯೊಬ್ಬರಿಗೂ ಕನೆಕ್ಟ್ ಆಗುವ ವಿಷಯ ಈ ಚಿತ್ರದಲ್ಲಿದೆ. ಈ ಚಿತ್ರ ಬರೀ ಅಭಿಮಾನಿಗಳಿಗೆ ಸೀಮಿತವಾಗಬಾರದು. ಕನ್ನಡ ಪ್ರೇಕ್ಷಕರು ಬಂದು ನೋಡಬೇಕು’ ಎಂದರು.
ಇದೊಂದು ಪಕ್ಕಾ ಮಾಸ್ ಚಿತ್ರ ಎನ್ನುವ ಯುವ ರಾಜಕುಮಾರ್, ‘ಇದೊಂದು ಮಾಸ್ ಚಿತ್ರ. ಮಾಸ್ ಅಂಶಗಳ ಜೊತೆಗೆ ಹಲವು ಭಾವನೆಗಳಿವೆ. ಪರಿಸ್ಥಿತಿ ಒಬ್ಬ ಮನುಷ್ಯನನ್ನು ಹೇಗೆ ಬದಲಾಯಿಸುತ್ತದೆ ಎಂಬದನ್ನು ಈ ಚಿತ್ರದ ಮೂಲಕ ಹೇಳಲಾಗುತ್ತಿದೆ. ಮೊದಲ ಬಾರಿಗೆ ತುಂಬಾ ಮಾಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ನನ್ನ ಮೊದಲ ಚಿತ್ರಕ್ಕೂ, ಈ ಚಿತ್ರಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಅದು ಸಲೈಂಟ್ ಪಾತ್ರ, ಇದು ವೈಲೆಂಟ್ ಪಾತ್ರ’ ಎಂದರು.
‘ಎಕ್ಕ’ ಚಿತ್ರವನ್ನು PRK ಪ್ರೊಡಕ್ಷನ್ಸ್, ಜಯಣ್ಣ ಫಿಲಂಸ್ ಮತ್ತು KRG ಸ್ಟುಡಿಯೋಸ್ ಅಡಿ ಅಶ್ವಿನಿ ಪುನೀತ್ ರಾಜಕುಮಾರ್, ಜಯಣ್ಣ, ಭೋಗೇಂದ್ರ, ಕಾರ್ತಿಕ್ ಗೌಡ ಮತ್ತು ಯೋಗಿ ಜೊತೆಯಾಗಿ ನಿರ್ಮಿಸುತ್ತಿರುವುದು ವಿಶೇಷ. ಈ ಚಿತ್ರದಲ್ಲಿ ಸಂಪದ ಹುಲಿವಾನ ನಾಯಕಿಯಾಗಿ ನಟಿಸುತ್ತಿದ್ದು, ಮಿಕ್ಕಂತೆ ಅತುಲ್ ಕುಲಕರ್ಣಿ, ಶ್ರುತಿ, ಡಾ. ಸೂರಿ, ಪೂರ್ಣಚಂದ್ರ ಮೈಸೂರು, ಪುನೀತ್ ರುದ್ರನಾಗ್ ಮುಂತಾದವರು ನಟಿಸುತ್ತಿದ್ದಾರೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣವಿದೆ.
ಇಸ್ಲಾಮಾಬಾದ್: ಇರಾನ್, ಅಮೇರಿಕಾ-ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.23ರಂದು…
ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…
ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…
ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…
ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…