ಮನರಂಜನೆ

ರಾಜ್ಯೋತ್ಸವದಂದು ಯುವ ಅಭಿನಯದ 2ನೇ ಚಿತ್ರದ ಹೆಸರು ಘೋಷಣೆ

‘ಯುವ’ ಚಿತ್ರದ ನಂತರ ಯುವ ರಾಜಕುಮಾರ್‍ ಅಭಿನಯದ ಮುಂದಿನ ಚಿತ್ರ ಯಾವುದು, ಯಾರು ನಿರ್ಮಿಸುತ್ತಾರೆ, ಯಾರು ನಿರ್ದೇಶನ ಮಾಡುತ್ತಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ, ಎರಡನೇ ಚಿತ್ರಕ್ಕಿಂತ ಯುವ ಡೈವೋರ್ಸ್ ಪ್ರಕರಣ ಮುನ್ನಲೆಗೆ ಬಂದು, ಮಿಕ್ಕಿದ್ದೆಲ್ಲವೂ ಹಿಂದೆ ಸರಿಯಿತು. ಇದೀಗ ದಸರಾ ಸಂದರ್ಭದಲ್ಲಿ ಯುವ ಅಭಿನಯದ ಎರಡನೇ ಚಿತ್ರವನ್ನು ಅಧಿಕೃತವಾಗಿ ಘೋಷಿಸಲಾಗಿದೆ.

ಸದ್ಯಕ್ಕೆ ಈ ಚಿತ್ರಕ್ಕೆ ‘ಯುವ 02’ ಎಂಬ ಹೆಸರನ್ನು ಇಡಲಾಗಿದ್ದು, ಈ ಚಿತ್ರವನ್ನು ಕನ್ನಡದ ಮೂರು ಜನಪ್ರಿಯ ನಿರ್ಮಾಣ ಸಂಸ್ಥೆಗಳಾದ PRK ಪ್ರೊಡಕ್ಷನ್ಸ್, ಜಯಣ್ಣ ಫಿಲಂಸ್‍ ಮತ್ತು KRG ಸ್ಟುಡಿಯೋಸ್‍ ಜೊತೆಯಾಗಿ ನಿರ್ಮಿಸುತ್ತಿರುವುದು ವಿಶೇಷ. ಈ ಚಿತ್ರವನ್ನು ಅಶ್ವಿನಿ ಪುನೀತ್‍ ರಾಜಕುಮಾರ್‍, ಜಯಣ್ಣ, ಭೋಗೇಂದ್ರ, ಕಾರ್ತಿಕ್‍ ಗೌಡ ಮತ್ತು ಯೋಗಿ ಜೊತೆಯಾಗಿ ನಿರ್ಮಿಸುತ್ತಿದ್ದಾರೆ.

ಸದ್ಯ ‘ಉತ್ತರಕಾಂಡ’ ಚಿತ್ರವನ್ನು ನಿರ್ದೇಶಿಸುತ್ತಿರುವ ರೋಹಿತ್‍ ಪದಕಿ, ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಈಗ ಚಿತ್ರದ ಘೋಷಣೆಯಾಗಿದ್ದು, ರಾಜ್ಯೋತ್ಸವದ ಅಂಗವಾಗಿ ನವೆಂಬರ್‍.1ರಂದು ಚಿತ್ರದ ಮೊದಲ ನೋಟ ಮತ್ತು ಶೀರ್ಷಿಕೆ ಘೋಷಣೆಯಾಗಲಿದೆ.

ಈ ಚಿತ್ರಕ್ಕೆ ‘Sins aren’t always Red’ ಎಂಬ ಅಡಿ ಬರಹವಿದ್ದು, ಮೇಲ್ನೋಟಕ್ಕೆ ಇದೊಂದು ಗ್ಯಾಂಗ್‍ಸ್ಟರ್‍ ಚಿತ್ರ ಎಂದೆನಿಸಬಹುದು. ಇದೊಂದು ಫ್ಯಾಮಿಲಿ ಚಿತ್ರವಾಗಿದ್ದು, ಇದನ್ನು ತಮ್ಮ ಶೈಲಿಯಲ್ಲೇ ಹೇಳುತ್ತಿರುವುದಾಗಿ ರೋಹಿತ್‍ ಪದಕಿ ಹೇಳಿಕೊಂಡಿದ್ದಾರೆ. ಒಂದೊಳ್ಳೆಯ ಕುಟುಂಬದಿಂದ ಬಂದ ಹುಡುಗನೊಬ್ಬ ಯಾಕಾಗಿ ಕತ್ತಿ ಹಿಡಿಯುತ್ತಾನೆ ಎನ್ನುವುದು ಚಿತ್ರದ ಕಥೆಯಂತೆ.

ಸದ್ಯ ಚಿತ್ರದ ನಿರ್ಮಾಣ ಸಂಸ್ಥೆಗಳ ಮತ್ತು ನಿರ್ದೇಶಕರ ಹೆಸರನ್ನು ಮಾತ್ರ ಘೋಷಿಸಲಾಗುತ್ತಿದೆ. ಮಿಕ್ಕಂತೆ ಚಿತ್ರದ ಹೆಚ್ಚಿನ ವಿವರಗಳಿಗಾಗಿ ರಾಜ್ಯೋತ್ಸವದವರೆಗೂ ಕಾಯಬೇಕಿದೆ.

ಆಂದೋಲನ ಡೆಸ್ಕ್

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago