ಮನರಂಜನೆ

ರಾಜ್ಯೋತ್ಸವದಂದು ಯುವ ಅಭಿನಯದ 2ನೇ ಚಿತ್ರದ ಹೆಸರು ಘೋಷಣೆ

‘ಯುವ’ ಚಿತ್ರದ ನಂತರ ಯುವ ರಾಜಕುಮಾರ್‍ ಅಭಿನಯದ ಮುಂದಿನ ಚಿತ್ರ ಯಾವುದು, ಯಾರು ನಿರ್ಮಿಸುತ್ತಾರೆ, ಯಾರು ನಿರ್ದೇಶನ ಮಾಡುತ್ತಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ, ಎರಡನೇ ಚಿತ್ರಕ್ಕಿಂತ ಯುವ ಡೈವೋರ್ಸ್ ಪ್ರಕರಣ ಮುನ್ನಲೆಗೆ ಬಂದು, ಮಿಕ್ಕಿದ್ದೆಲ್ಲವೂ ಹಿಂದೆ ಸರಿಯಿತು. ಇದೀಗ ದಸರಾ ಸಂದರ್ಭದಲ್ಲಿ ಯುವ ಅಭಿನಯದ ಎರಡನೇ ಚಿತ್ರವನ್ನು ಅಧಿಕೃತವಾಗಿ ಘೋಷಿಸಲಾಗಿದೆ.

ಸದ್ಯಕ್ಕೆ ಈ ಚಿತ್ರಕ್ಕೆ ‘ಯುವ 02’ ಎಂಬ ಹೆಸರನ್ನು ಇಡಲಾಗಿದ್ದು, ಈ ಚಿತ್ರವನ್ನು ಕನ್ನಡದ ಮೂರು ಜನಪ್ರಿಯ ನಿರ್ಮಾಣ ಸಂಸ್ಥೆಗಳಾದ PRK ಪ್ರೊಡಕ್ಷನ್ಸ್, ಜಯಣ್ಣ ಫಿಲಂಸ್‍ ಮತ್ತು KRG ಸ್ಟುಡಿಯೋಸ್‍ ಜೊತೆಯಾಗಿ ನಿರ್ಮಿಸುತ್ತಿರುವುದು ವಿಶೇಷ. ಈ ಚಿತ್ರವನ್ನು ಅಶ್ವಿನಿ ಪುನೀತ್‍ ರಾಜಕುಮಾರ್‍, ಜಯಣ್ಣ, ಭೋಗೇಂದ್ರ, ಕಾರ್ತಿಕ್‍ ಗೌಡ ಮತ್ತು ಯೋಗಿ ಜೊತೆಯಾಗಿ ನಿರ್ಮಿಸುತ್ತಿದ್ದಾರೆ.

ಸದ್ಯ ‘ಉತ್ತರಕಾಂಡ’ ಚಿತ್ರವನ್ನು ನಿರ್ದೇಶಿಸುತ್ತಿರುವ ರೋಹಿತ್‍ ಪದಕಿ, ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಈಗ ಚಿತ್ರದ ಘೋಷಣೆಯಾಗಿದ್ದು, ರಾಜ್ಯೋತ್ಸವದ ಅಂಗವಾಗಿ ನವೆಂಬರ್‍.1ರಂದು ಚಿತ್ರದ ಮೊದಲ ನೋಟ ಮತ್ತು ಶೀರ್ಷಿಕೆ ಘೋಷಣೆಯಾಗಲಿದೆ.

ಈ ಚಿತ್ರಕ್ಕೆ ‘Sins aren’t always Red’ ಎಂಬ ಅಡಿ ಬರಹವಿದ್ದು, ಮೇಲ್ನೋಟಕ್ಕೆ ಇದೊಂದು ಗ್ಯಾಂಗ್‍ಸ್ಟರ್‍ ಚಿತ್ರ ಎಂದೆನಿಸಬಹುದು. ಇದೊಂದು ಫ್ಯಾಮಿಲಿ ಚಿತ್ರವಾಗಿದ್ದು, ಇದನ್ನು ತಮ್ಮ ಶೈಲಿಯಲ್ಲೇ ಹೇಳುತ್ತಿರುವುದಾಗಿ ರೋಹಿತ್‍ ಪದಕಿ ಹೇಳಿಕೊಂಡಿದ್ದಾರೆ. ಒಂದೊಳ್ಳೆಯ ಕುಟುಂಬದಿಂದ ಬಂದ ಹುಡುಗನೊಬ್ಬ ಯಾಕಾಗಿ ಕತ್ತಿ ಹಿಡಿಯುತ್ತಾನೆ ಎನ್ನುವುದು ಚಿತ್ರದ ಕಥೆಯಂತೆ.

ಸದ್ಯ ಚಿತ್ರದ ನಿರ್ಮಾಣ ಸಂಸ್ಥೆಗಳ ಮತ್ತು ನಿರ್ದೇಶಕರ ಹೆಸರನ್ನು ಮಾತ್ರ ಘೋಷಿಸಲಾಗುತ್ತಿದೆ. ಮಿಕ್ಕಂತೆ ಚಿತ್ರದ ಹೆಚ್ಚಿನ ವಿವರಗಳಿಗಾಗಿ ರಾಜ್ಯೋತ್ಸವದವರೆಗೂ ಕಾಯಬೇಕಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

12 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

12 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

12 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

12 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

12 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

12 hours ago