ಮನರಂಜನೆ

ರಾಜ್ಯೋತ್ಸವದಂದು ಯುವ ಅಭಿನಯದ 2ನೇ ಚಿತ್ರದ ಹೆಸರು ಘೋಷಣೆ

‘ಯುವ’ ಚಿತ್ರದ ನಂತರ ಯುವ ರಾಜಕುಮಾರ್‍ ಅಭಿನಯದ ಮುಂದಿನ ಚಿತ್ರ ಯಾವುದು, ಯಾರು ನಿರ್ಮಿಸುತ್ತಾರೆ, ಯಾರು ನಿರ್ದೇಶನ ಮಾಡುತ್ತಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ, ಎರಡನೇ ಚಿತ್ರಕ್ಕಿಂತ ಯುವ ಡೈವೋರ್ಸ್ ಪ್ರಕರಣ ಮುನ್ನಲೆಗೆ ಬಂದು, ಮಿಕ್ಕಿದ್ದೆಲ್ಲವೂ ಹಿಂದೆ ಸರಿಯಿತು. ಇದೀಗ ದಸರಾ ಸಂದರ್ಭದಲ್ಲಿ ಯುವ ಅಭಿನಯದ ಎರಡನೇ ಚಿತ್ರವನ್ನು ಅಧಿಕೃತವಾಗಿ ಘೋಷಿಸಲಾಗಿದೆ.

ಸದ್ಯಕ್ಕೆ ಈ ಚಿತ್ರಕ್ಕೆ ‘ಯುವ 02’ ಎಂಬ ಹೆಸರನ್ನು ಇಡಲಾಗಿದ್ದು, ಈ ಚಿತ್ರವನ್ನು ಕನ್ನಡದ ಮೂರು ಜನಪ್ರಿಯ ನಿರ್ಮಾಣ ಸಂಸ್ಥೆಗಳಾದ PRK ಪ್ರೊಡಕ್ಷನ್ಸ್, ಜಯಣ್ಣ ಫಿಲಂಸ್‍ ಮತ್ತು KRG ಸ್ಟುಡಿಯೋಸ್‍ ಜೊತೆಯಾಗಿ ನಿರ್ಮಿಸುತ್ತಿರುವುದು ವಿಶೇಷ. ಈ ಚಿತ್ರವನ್ನು ಅಶ್ವಿನಿ ಪುನೀತ್‍ ರಾಜಕುಮಾರ್‍, ಜಯಣ್ಣ, ಭೋಗೇಂದ್ರ, ಕಾರ್ತಿಕ್‍ ಗೌಡ ಮತ್ತು ಯೋಗಿ ಜೊತೆಯಾಗಿ ನಿರ್ಮಿಸುತ್ತಿದ್ದಾರೆ.

ಸದ್ಯ ‘ಉತ್ತರಕಾಂಡ’ ಚಿತ್ರವನ್ನು ನಿರ್ದೇಶಿಸುತ್ತಿರುವ ರೋಹಿತ್‍ ಪದಕಿ, ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಈಗ ಚಿತ್ರದ ಘೋಷಣೆಯಾಗಿದ್ದು, ರಾಜ್ಯೋತ್ಸವದ ಅಂಗವಾಗಿ ನವೆಂಬರ್‍.1ರಂದು ಚಿತ್ರದ ಮೊದಲ ನೋಟ ಮತ್ತು ಶೀರ್ಷಿಕೆ ಘೋಷಣೆಯಾಗಲಿದೆ.

ಈ ಚಿತ್ರಕ್ಕೆ ‘Sins aren’t always Red’ ಎಂಬ ಅಡಿ ಬರಹವಿದ್ದು, ಮೇಲ್ನೋಟಕ್ಕೆ ಇದೊಂದು ಗ್ಯಾಂಗ್‍ಸ್ಟರ್‍ ಚಿತ್ರ ಎಂದೆನಿಸಬಹುದು. ಇದೊಂದು ಫ್ಯಾಮಿಲಿ ಚಿತ್ರವಾಗಿದ್ದು, ಇದನ್ನು ತಮ್ಮ ಶೈಲಿಯಲ್ಲೇ ಹೇಳುತ್ತಿರುವುದಾಗಿ ರೋಹಿತ್‍ ಪದಕಿ ಹೇಳಿಕೊಂಡಿದ್ದಾರೆ. ಒಂದೊಳ್ಳೆಯ ಕುಟುಂಬದಿಂದ ಬಂದ ಹುಡುಗನೊಬ್ಬ ಯಾಕಾಗಿ ಕತ್ತಿ ಹಿಡಿಯುತ್ತಾನೆ ಎನ್ನುವುದು ಚಿತ್ರದ ಕಥೆಯಂತೆ.

ಸದ್ಯ ಚಿತ್ರದ ನಿರ್ಮಾಣ ಸಂಸ್ಥೆಗಳ ಮತ್ತು ನಿರ್ದೇಶಕರ ಹೆಸರನ್ನು ಮಾತ್ರ ಘೋಷಿಸಲಾಗುತ್ತಿದೆ. ಮಿಕ್ಕಂತೆ ಚಿತ್ರದ ಹೆಚ್ಚಿನ ವಿವರಗಳಿಗಾಗಿ ರಾಜ್ಯೋತ್ಸವದವರೆಗೂ ಕಾಯಬೇಕಿದೆ.

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

7 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

8 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

8 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

9 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

10 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

18 hours ago