ಮನರಂಜನೆ

ಕರ್ನಾಟಕದ ಸಂಸ್ಕೃತಿ, ಸಂಪ್ರದಾಯವನ್ನು ಅನಾವರಣಗೊಳಿಸುವ ‘ಅಯ್ಯನ ಮನೆ’

ಬೇರೆ ಭಾಷೆಗಳಿಗೆ ಹೋಲಿಸಿದರೆ ಕನ್ನಡದಲ್ಲಿ ವೆಬ್‍ ಸರಣಿಗಳ ಸಂಖ್ಯೆ ಕಡಿಮೆಯೇ. ಅಪರೂಪಕ್ಕೆಂಬಂತೆ ಅಲ್ಲೊಂದು ಇಲ್ಲೊಂದು ವೆಬ್‍ ಸರಣಿಗಳು ಕನ್ನಡದಲ್ಲಿ ನಿರ್ಮಾಣವಾಗುತ್ತಿವೆ. ಈ ಸಾಲಿಗೆ ಇದೀಗ ‘ಅಯ್ಯನ ಮನೆ’ ಎಂಬ ಹೊಸ ಸರಣಿಯು ಸೇರಿದೆ.

ZEE5 ಮತ್ತೊಂದು ಹೊಸ ಸಾಹಸ ಮಾಡಿದ್ದು, ಮಿನಿ ವೆಬ್ ಸೀರೀಸ್ ಪರಿಚಯಿಸಿದೆ. ZEE5ನಲ್ಲಿ ಸ್ಟ್ರೀಮ್‍ ಆಗುತ್ತಿರುವ ಮೊದಲ ಕನ್ನಡ ಮಿನಿ ವೆಬ್ ಸರಣಿಯನ್ನು ನಟಿ-ನಿರ್ದೇಶಕ ರಮೇಶ್ ಇಂದಿರಾ ನಿರ್ದೇಶನ ಮಾಡಿದ್ದಾರೆ. ಆ ಸರಣಿಗೆ ‘ಅಯ್ಯನ ಮನೆ’ ಎಂದು ಹೆಸರಿಡಲಾಗಿದೆ. ಪ್ರತಿ ಮನೆಯೂ ಸ್ವರ್ಗವಾಗಿರುವುದಿಲ್ಲ. ಅಲ್ಲಿ ಎಷ್ಟೋ ಮುಚ್ಚಿಟ್ಟ ವಿಷಯಗಳು ಇರುತ್ತವೆ ಅನ್ನೋದನ್ನು ಈ ಮಿನಿ ಸೀರೀಸ್ ಮೂಲಕ ರಮೇಶ್ ಇಂದಿರಾ ಹೇಳಲು ಹೊರಟಿದ್ದಾರೆ.

ರಮೇಶ್ ಇಂದಿರಾ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ʼಅಯ್ಯನ ಮನೆʼ ವೆಬ್‍ ಸರಣಿಯನ್ನು ಶೃತಿ ನಾಯ್ಡು ಪ್ರೊಡಕ್ಷನ್ ನಿರ್ಮಾಣ ಮಾಡಿದೆ. ಚಿಕ್ಕಮಗಳೂರಿನ ‘ಅಯ್ಯನ ಮನೆ’ ಕುಟುಂಬದಲ್ಲಿ ಅಡಗಿರುವ ಸತ್ಯಗಳ ಸುತ್ತಕಥೆ ಸಾಗುತ್ತದೆ. ಇದೊಂದು ಮಿಸ್ಟ್ರಿ ಕಥೆಯಾಗಿದ್ದು, ಪ್ರೇಕ್ಷಕರನ್ನು ಪ್ರತಿ ಕ್ಷಣ ಕುತೂಹಲಕ್ಕೀಡು ಮಾಡುತ್ತದೆ.

ಈ ಸರಣಿಯ ಕುರಿತು ಮಾತನಾಡುವ ರಮೇಶ್ ಇಂದಿರಾ, ‘ಅಯ್ಯನ ಮನೆ’ ರೋಚಕತೆ ಜೊತೆಗೆ ಭಯ, ನಂಬಿಕೆ ಮತ್ತು ಫ್ಯಾಮಿಲಿ ಕಥೆಯೊನ್ನೊಳಗೊಂಡಿದೆ. ಈ ವೆಬ್ ಸರಣಿ ಕರ್ನಾಟಕ ಸಂಸ್ಕೃತಿ, ಸಂಪ್ರದಾಯದವನ್ನು ಅನಾವರಣ ಮಾಡುತ್ತದೆ. ‘ಅಯ್ಯನ ಮನೆ’ ವೆಬ್ ಸರಣಿ ಪ್ರೇಕ್ಷಕರನ್ನು ಸೀಟಿನ ತುದಿಗೆ ಕೂರುವಂತೆ ಮಾಡುತ್ತದೆ’ ಎಂದಿದ್ದಾರೆ.

ಏಳು ಎಪಿಸೋಡ್ ಹೊಂದಿರುವ ಈ ಸರಣಿಯಲ್ಲಿ ಖುಷಿ ರವಿ, ಅಕ್ಷಯ್ ನಾಯಕ್, ಮಾನಸಿ ಸುಧೀರ್ ಮುಂತಾದವರು ಅಭಿನಯಿಸಿದ್ದಾರೆ. ಇದು ಭಯ, ನಂಬಿಕೆ ಮತ್ತು ವಿಧಿಯ ಸುತ್ತ ಸುತ್ತುವ ಕಥೆಯಾಗಿದ್ದು, ಇದೇ ತಿಂಗಳ 25 ರಿಂದ ZEE5ನಲ್ಲಿ ಸ್ಟ್ರೀಮಿಂಗ್ ಆಗಲಿದೆ.

ಆಂದೋಲನ ಡೆಸ್ಕ್

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

10 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

10 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

12 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

12 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

12 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

20 hours ago