ಬೇರೆ ಭಾಷೆಗಳಿಗೆ ಹೋಲಿಸಿದರೆ ಕನ್ನಡದಲ್ಲಿ ವೆಬ್ ಸರಣಿಗಳ ಸಂಖ್ಯೆ ಕಡಿಮೆಯೇ. ಅಪರೂಪಕ್ಕೆಂಬಂತೆ ಅಲ್ಲೊಂದು ಇಲ್ಲೊಂದು ವೆಬ್ ಸರಣಿಗಳು ಕನ್ನಡದಲ್ಲಿ ನಿರ್ಮಾಣವಾಗುತ್ತಿವೆ. ಈ ಸಾಲಿಗೆ ಇದೀಗ ‘ಅಯ್ಯನ ಮನೆ’ ಎಂಬ ಹೊಸ ಸರಣಿಯು ಸೇರಿದೆ.
ZEE5 ಮತ್ತೊಂದು ಹೊಸ ಸಾಹಸ ಮಾಡಿದ್ದು, ಮಿನಿ ವೆಬ್ ಸೀರೀಸ್ ಪರಿಚಯಿಸಿದೆ. ZEE5ನಲ್ಲಿ ಸ್ಟ್ರೀಮ್ ಆಗುತ್ತಿರುವ ಮೊದಲ ಕನ್ನಡ ಮಿನಿ ವೆಬ್ ಸರಣಿಯನ್ನು ನಟಿ-ನಿರ್ದೇಶಕ ರಮೇಶ್ ಇಂದಿರಾ ನಿರ್ದೇಶನ ಮಾಡಿದ್ದಾರೆ. ಆ ಸರಣಿಗೆ ‘ಅಯ್ಯನ ಮನೆ’ ಎಂದು ಹೆಸರಿಡಲಾಗಿದೆ. ಪ್ರತಿ ಮನೆಯೂ ಸ್ವರ್ಗವಾಗಿರುವುದಿಲ್ಲ. ಅಲ್ಲಿ ಎಷ್ಟೋ ಮುಚ್ಚಿಟ್ಟ ವಿಷಯಗಳು ಇರುತ್ತವೆ ಅನ್ನೋದನ್ನು ಈ ಮಿನಿ ಸೀರೀಸ್ ಮೂಲಕ ರಮೇಶ್ ಇಂದಿರಾ ಹೇಳಲು ಹೊರಟಿದ್ದಾರೆ.
ರಮೇಶ್ ಇಂದಿರಾ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ʼಅಯ್ಯನ ಮನೆʼ ವೆಬ್ ಸರಣಿಯನ್ನು ಶೃತಿ ನಾಯ್ಡು ಪ್ರೊಡಕ್ಷನ್ ನಿರ್ಮಾಣ ಮಾಡಿದೆ. ಚಿಕ್ಕಮಗಳೂರಿನ ‘ಅಯ್ಯನ ಮನೆ’ ಕುಟುಂಬದಲ್ಲಿ ಅಡಗಿರುವ ಸತ್ಯಗಳ ಸುತ್ತಕಥೆ ಸಾಗುತ್ತದೆ. ಇದೊಂದು ಮಿಸ್ಟ್ರಿ ಕಥೆಯಾಗಿದ್ದು, ಪ್ರೇಕ್ಷಕರನ್ನು ಪ್ರತಿ ಕ್ಷಣ ಕುತೂಹಲಕ್ಕೀಡು ಮಾಡುತ್ತದೆ.
ಈ ಸರಣಿಯ ಕುರಿತು ಮಾತನಾಡುವ ರಮೇಶ್ ಇಂದಿರಾ, ‘ಅಯ್ಯನ ಮನೆ’ ರೋಚಕತೆ ಜೊತೆಗೆ ಭಯ, ನಂಬಿಕೆ ಮತ್ತು ಫ್ಯಾಮಿಲಿ ಕಥೆಯೊನ್ನೊಳಗೊಂಡಿದೆ. ಈ ವೆಬ್ ಸರಣಿ ಕರ್ನಾಟಕ ಸಂಸ್ಕೃತಿ, ಸಂಪ್ರದಾಯದವನ್ನು ಅನಾವರಣ ಮಾಡುತ್ತದೆ. ‘ಅಯ್ಯನ ಮನೆ’ ವೆಬ್ ಸರಣಿ ಪ್ರೇಕ್ಷಕರನ್ನು ಸೀಟಿನ ತುದಿಗೆ ಕೂರುವಂತೆ ಮಾಡುತ್ತದೆ’ ಎಂದಿದ್ದಾರೆ.
ಏಳು ಎಪಿಸೋಡ್ ಹೊಂದಿರುವ ಈ ಸರಣಿಯಲ್ಲಿ ಖುಷಿ ರವಿ, ಅಕ್ಷಯ್ ನಾಯಕ್, ಮಾನಸಿ ಸುಧೀರ್ ಮುಂತಾದವರು ಅಭಿನಯಿಸಿದ್ದಾರೆ. ಇದು ಭಯ, ನಂಬಿಕೆ ಮತ್ತು ವಿಧಿಯ ಸುತ್ತ ಸುತ್ತುವ ಕಥೆಯಾಗಿದ್ದು, ಇದೇ ತಿಂಗಳ 25 ರಿಂದ ZEE5ನಲ್ಲಿ ಸ್ಟ್ರೀಮಿಂಗ್ ಆಗಲಿದೆ.
ಹೊಸದಿಲ್ಲಿ : ಜೆನ್ಝೀಗಳ ನೆಚ್ಚಿನ ತಾಣವಾಗಿರುವ ಇನ್ಸ್ಟಾಗ್ರಾಂ ಈಗ ಕೇವಲ ಮನರಂಜನೆಯ ತಾಣವಾಗಂತೂ ಇಲ್ಲ. ಬದಲಾಗಿ ಸಂಚಲನ ಸೃಷ್ಟಿಸುವ ಬಹುದೊಡ್ಡ…
ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…
ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…