ಆರೋಗ್ಯ

ಆಂದೋಲನ ಸಂದರ್ಶನ : ಗಿರೀಶ್ ಹುಣಸೂರು

ಸಂದರ್ಶನ : ‘ಬ್ಲೂ ಫೀವರ್ ಹೊಸದೇನಲ್ಲ ಭಯ ಬೇಡ’

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಎಸ್.ಚಿದಂಬರ ಸಲಹೆ 

ಗಿರೀಶ್ ಹುಣಸೂರು
ಮೈಸೂರು: ಚಳಿಗಾಲದ ತೀವ್ರತೆ ಹೆಚ್ಚುತ್ತಿರುವ ಜೊತೆಗೆ ಅಕಾಲಿಕ ಮಳೆ ಬೀಳುತ್ತಾ, ವಾತಾವರಣದಲ್ಲಿ ಏರುಪೇರಾಗಿ ಶೀತಗಾಳಿ ಬೀಸುತ್ತಿರುವುದರಿಂದ ಜ್ವರ, ಕೆಮ್ಮು, ನೆಗಡಿ, ಗಂಟಲು ಕೆರೆತ ಹಾಗೂ ತಲೆನೋವಿನಂತಹ ಸಾಂಕ್ರಾಮಿಕ ರೋಗಗಳು ಜನರನ್ನು ಕಾಡಲಾರಂಭಿಸಿದ್ದು, ಅಸಡ್ಡೆ ತೋರಿ ಕಾಯಿಲೆ ಬಂದ ಮೇಲೆ ಆಸ್ಪತ್ರೆಗಳಿಗೆ ಎಡತಾಕುವ ಬದಲಿಗೆ ಕಾಯಿಲೆ ಬಾರದಂತೆ ಮುನ್ನೆಚ್ಚರಿಕೆ ವಹಿಸಬೇಕಾದ ಅಗತ್ತ ಎನ್ನುತ್ತಾರೆ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಎಸ್.ಚಿದಂಬರ ಅವರು. ‘ಆಂದೋಲನ ದಿನಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಚಳಿಗಾಲದಲ್ಲಿ ಆವರಿಸುವ ರೋಗಗಳ ಬಗ್ಗೆ ಸಲಹೆ-ಸೂಚನೆಗಳನ್ನು ನೀಡಿದ್ದಾರೆ.

ಆಂದೋಲನ: ವಾತಾವರಣದಲ್ಲಿನ ಏರುಪೇರಿನಿಂದ ಸಾಂಕ್ರಾಮಿಕ ರೋಗ ಹರಡುತ್ತಿದೆಯಲ್ಲ?
ಡಾ.ಎಸ್.ಚಿದಂಬರ: ಡಿಸೆಂಬರ್-ಜನವರಿ ತಿಂಗಳು ಚಳಿಗಾಲವಾಗಿರುವುದರಿಂದ ಸಾಮಾನ್ಯವಾಗಿ ಕೆಮ್ಮು, ಜ್ವರ, ನೆಗಡಿ, ಗಂಟಲು ಕೆರೆತ ಹಾಗೂ ತಲೆನೋವು ಕಾಣಿಸಿಕೊಳ್ಳುವುದು ಸಹಜ. ವಾತಾವರಣದಲ್ಲಿನ ವೈಫರಿತ್ಯದಿಂದಾಗಿ ಹೀಗಾಗಿದೆ ಎಂದು ಅಸಡ್ಡೆ ತೋರಿದರೆ, ಒಬ್ಬರಿಂದ ಮನೆ ಮಂದಿಗೆಲ್ಲ ಕಾಯಿಲೆ ಹರಡಲಿದೆ. ಹೀಗಾಗಿ ಜ್ವರ-ಕೆಮ್ಮಿನ ಲಕ್ಷಣಗಳು ಕಾಣಿಸಿಕೊಂಡ ಕೂಡಲೇ ಸಮೀಪದ ವೈದ್ಯರ ಬಳಿ ತೆರಳಿ ಅವರ ಸಲಹೆಯಂತೆ ಚಿಕಿತ್ಸೆ ಪಡೆಯುವುದು ಒಳಿತು.

ಆಂದೋಲನ: ವೈರಲ್ ಫೀವರ್ ಲಕ್ಷಣಗಳೇನು?
ಡಾ.ಎಸ್.ಚಿದಂಬರ: ಜ್ವರ, ಕೆಮ್ಮು, ನೆಗಡಿ, ಗಂಟಲು ಕೆರೆತ, ತಲೆನೋವಿನಂತಹ ಸಾಂಕ್ರಾಮಿಕ ರೋಗಗಳು ಮನೆಯಲ್ಲಿ ಒಬ್ಬರಿಗೆ ಬಂದರೆ ಮನೆ ಮಂದಿಗೆಲ್ಲ ಹರಡುತ್ತದೆ. ಇವುಗಳಿಗೆ ಕನಿಷ್ಠ ಪ್ರಮಾಣದ ಚಿಕಿತ್ಸೆ ಸಾಕು. ವೈರಸ್ ಸೋಂಕು ಮತ್ತು ಫ್ಲೂ ಜ್ವರದ ಲಕ್ಷಣಗಳು ಕಂಡುಬಂದಾಗ ಅದನ್ನು ಕಡೆಗಣಿಸುವಂತೆಯೇ ಇಲ್ಲ. ವೈರಲ್ ಫೀವರ್ ಚಿಕಿತ್ಸೆ ಇಲ್ಲದಿದ್ದರೂ ಒಂದೆರಡು ದಿನಗಳಲ್ಲಿ ಗುಣಮುಖವಾಗಲಿದೆ. ಹಾಗೆಂದು ನಿರ್ಲಕ್ಷ್ಯವಹಿಸಿದರೆ ಸಾಂಕ್ರಾಮಿಕವಾಗಿ ಹರಡುವ ಸಾಧ್ಯತೆ ಹೆಚ್ಚಿರುತ್ತದೆ.

ಆಂದೋಲನ: ಮಲೇರಿಯಾ, ಡೆಂಘೀ, ಚಿಕುನ್ ಗುನ್ಯಾ ರೋಗಗಳ ಹರಡುವಿಕೆ ಹೇಗಿದೆ?
ಡಾ.ಎಸ್.ಚಿದಂಬರ: ಹಳೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ಇತ್ತೀಚಿನ ವರ್ಷಗಳಲ್ಲಿ ಡೆಂಘೀ, ಮಲೇರಿಯಾ, ಚಿಕುನ್ ಗುನ್ಯಾದಂತಹ ಕಾಯಿಲೆ ಉಲ್ಭಣವಾದ ಪ್ರಕರಣಗಳು ಕಡಿಮೆಯಾದರೂ ಕೋವಿಡ್‌ನ ಸಮೂಹ ಸನ್ನಿಯಿಂದ ನಡುಗಿ ಹೋಗಿರುವ ಜನ, ಸಾಮಾನ್ಯ ಜ್ವರ, ಕೆಮ್ಮು ಬಂದ ಕೂಡಲೇ ಹೆದರುತ್ತಿದ್ದಾರೆ. ಜನ ಭಯ ಬಿಟ್ಟು ಕಾಯಿಲೆ ಬಾರದಂತೆ ಮುನ್ನೆಚ್ಚರಿಕೆ ವಹಿಸುವುದು ಒಳಿತು.

ಆಂದೋಲನ: ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ಹೇಗೆ?
ಡಾ.ಎಸ್.ಚಿದಂಬರ: ಶಾಲೆಗಳಲ್ಲಿ ಮಕ್ಕಳಿಗೆ ಈ ಸಾಂಕ್ರಾಮಿಕ ಕಾಯಿಲೆ ಹರಡದಂತೆ ಕ್ರಮವಹಿಸಬೇಕು. ಕೋವಿಡ್ ಸಂದರ್ಭದಲ್ಲಿ ಎಚ್ಚರಿಕೆ ವಹಿಸಿದಂತೆ ಆಗಾಗ್ಗೆ ೨೦ ರಿಂದ ೩೦ ಸೆಕೆಂಡ್‌ಗಳ ಕಾಲ ಸೋಪಿನಿಂದ ಕೈ ಉಜ್ಜಿ ತೊಳೆಯಬೇಕು. ಮುಖಗವಸು ಬಳಸಬೇಕು. ಪ್ರತ್ಯೇಕ ನ್ಯಾಪ್‌ಕಿನ್ ಬಳಸಬೇಕು. ಕುದಿಸಿ ಆರಿಸಿದ ನೀರನ್ನೇ ಕುಡಿಯಬೇಕು. ಚಳಿಯ ಜತೆಗೆ ವಾತಾವರಣದಲ್ಲಿ ಶೀತಗಾಳಿ ಬೀಸುತ್ತಿರುವುದರಿಂದ ತಲೆಯ ಮೇಲೆ ಮಂಜು ಬಿದ್ದರೆ ತಲೆನೋವು ಬರುತ್ತದೆ. ಹೀಗಾಗಿ ಬೆಳಿಗ್ಗೆ ಮತ್ತು ಸಂಜೆ ವಾಕಿಂಗ್ ಮಾಡುವವರು ಕಿವಿ ಮತ್ತು ತಲೆಯನ್ನು ಉಣ್ಣೆಯ ವಸ್ತ್ರಗಳಿಂದ ಮುಚ್ಚಿಕೊಳ್ಳಬೇಕು. ವಯೋ ವೃದ್ಧರು ಹಾಗೂ ಚಿಕ್ಕ ಮಕ್ಕಳನ್ನು ಚಳಿ-ಗಾಳಿಗೆ ಮೈಯೊಡ್ಡದಂತೆ ಹೊರಗೆ ಬಿಡದೆ ಬೆಚ್ಚಗಿರಿಸಬೇಕು. ಸಾಧ್ಯವಾದಷ್ಟು ಬಿಸಿಯಾಗಿಯೇ ಊಟ ಮಾಡಬೇಕು. ರೆಫ್ರಿಜರೇಟರ್‌ನಲ್ಲಿರಿಸಿದ ವಸ್ತುಗಳನ್ನು ಬಳಸದಿರುವುದು ಒಳಿತು.


ಆಂದೋಲನ: ಬ್ಲೂ ಫೀವರ್ ಎಂಬ ಸಮೂಹ ಸನ್ನಿಯಿಂದ ಜನರು ಭಯ-ಭೀತರಾಗಿದ್ದಾರಲ್ಲ?
ಡಾ.ಎಸ್.ಚಿದಂಬರ: ಬ್ಲೂ ಫೀವರ್ ಎಂಬುದು ಹೊಸದಾಗೇನು ಬಂದಿಲ್ಲ. ಅಲ್ಲೊಂದು-ಇಲ್ಲೊಂದು ಪ್ರಕರಣಗಳು ವರದಿಯಾಗುತ್ತಿದ್ದು, ಹಿಂದೆಯೂ ಇತ್ತು. ಈಗಲೂ ಇದೆ. ಬ್ಲೂ ಫೀವರ್ ಬಂದಾಗ ದೇಹ ನೀಲಿ ಬಣ್ಣಕ್ಕೆ ತಿರುಗಿ ಮಾರಣಾಂತಿಕವಾಗಿ ಪರಿಣಮಿಸುತ್ತದೆ ಎಂಬ ಗುಲ್ಲೆದ್ದಿದೆ. ಹಾಗೇನು ಇಲ್ಲ. ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನ ಬೆಳೆದಂತೆಲ್ಲ ವೈದ್ಯಕೀಯ ಕ್ಷೇತ್ರದಲ್ಲಿ ಅತ್ಯಾಧುನಿಕ ಪರಿಕರಗಳ ಆವಿಷ್ಕಾರವಾಗಿರುವುದರಿಂದ ಇಂತಹ ರೋಗಗಳು ಬಹುಬೇಗ ಪತ್ತೆಯಾಗುತ್ತಿವೆ. ಬ್ಲೂ ಫೀವರ್ ಅನ್ನು ಸರ್ಕಾರ ನೋಟಿಫೈ ಮಾಡಿಲ್ಲ. ರೋಗ ಲಕ್ಷಣ ಕಂಡುಬಂದಾಗ ನಿರ್ಲಕ್ಷ್ಯವಹಿಸದೆ ತಜ್ಞ ವೈದ್ಯರನ್ನು ಭೇಟಿ ಮಾಡಿ ಸಲಹೆ ಪಡೆಯುವುದು ಸೂಕ್ತ. ಇದರಿಂದ ಆಸ್ಪತ್ರೆ, ಕ್ಲಿನಿಕ್‌ಗಳ ಮೇಲಿನ ಒತ್ತಡ ತಪ್ಪಿಸಬಹುದು.

andolanait

Recent Posts

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

18 mins ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

44 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

2 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

2 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

3 hours ago