ನವದೆಹಲಿ : ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 3,325 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 44,175ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.
ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇದೇ ಅವಧಿಯಲ್ಲಿ ಕೇರಳಲ್ಲಿ 7 ಮಂದಿ ಸೇರಿದಂತೆ ದೇಶದಾದ್ಯಂತ 17 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಈವರೆಗೆ 5,31,564 ಮಂದಿ ಕೋವಿಡ್ನಿಂದ ಸಾವಿಗೀಡಾಗಿದ್ದಾರೆ.
ಇದೇ ವೇಳೆ ದೇಶದಲ್ಲಿ ಸೋಂಕಿತರ ಸಂಖ್ಯೆ 4,49,52,996 ಕ್ಕೆ ಏರಿಕೆಯಾಗಿದೆ. ಈ ಪೈಕಿ ಸಕ್ರಿಯ ಪ್ರಕರಣಗಳ ಸಂಖ್ಯೆ 0.11 ಕ್ಕೆ ಇಳಿಕೆಯಾಗಿದೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.71 ರಷ್ಟಿದೆ. ಸದ್ಯ ಈವರೆಗೆ 4,43,77,257 ಮಂದಿ ಕೋವಿಡ್ನಿಂದ ಗುಣಮುಖರಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
ದೈನಂದಿನ ಮರಣ ಪ್ರಮಾಣ ಶೇ 1.18 ರಷ್ಟಿದೆ. ಸಚಿವಾಲಯದ ವೆಬ್ಸೈಟಿನಲ್ಲಿ ನೀಡಲಾಗಿರುವ ಮಾಹಿತಿ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 220.66 ಕೋಟಿಗೂ ಅಧಿಕ ಕೋವಿಡ್ ಲಸಿಕಾ ಡೋಸ್ಗಳನ್ನು ವಿತರಿಸಲಾಗಿದೆ.
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…