ಆರೋಗ್ಯ

ತುರ್ತು ಚಿಕಿತ್ಸೆಗೆ ವೈದ್ಯರು ನಿರಾಕರಿಸುವಂತಿಲ್ಲ: ಸರ್ಕಾರ ಖಡಕ್‌ ಆದೇಶ

ಬೆಂಗಳೂರು: ತುಮಕೂರಿನ ಜಿಲ್ಲಾಸ್ಪತ್ರೆಯಲ್ಲಿ ಒಬ್ಬ ಬಾಣಂತಿ ಹಾಗೂ ಅವಳಿ ಶಿಶುಗಳು ವೈದ್ಯರು ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ತುರ್ತು ಚಿಕಿತ್ಸೆ ಸಂದರ್ಭಗಳಲ್ಲಿ ರೋಗಿಯಿಂದ ಅಥವಾ ಅಸ್ವಸ್ಥರಾದವರಿಂದ ಯಾವುದೇ ದಾಖಲೆಗಳನ್ನು ಕೇಳುವಂತಿಲ್ಲ ಎಂದು ಸುತ್ತೋಲೆ ಹೊರಡಿಸಿದೆ. ಈ ನಿಯಮ ಉಲ್ಲಂಘಿಸುವ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸುವುದಾಗಿ ರಾಜ್ಯ ಸರ್ಕಾರ ಎಚ್ಚರಿಸಿದೆ.

ಈ ಕುರಿತಂತೆ ಹೊಸ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದ್ದು, ಎಲ್ಲಾ ಆಸ್ಪತ್ರೆಗಳಿಗೆ, ಸರ್ಕಾರಿ ಅಧೀನ ಪ್ರಾಥಮಿಕ ಆರೋಗ್ಯಗಳಿಗೆ ಅನ್ವಯವಾಗುವಂತೆ ಆದೇಶಿಸಲಾಗಿದೆ. ತುರ್ತು ಚಿಕಿತ್ಸೆಯ ಅವಶ್ಯಕತೆಯಿದ್ದಾಗ ರೋಗಿ ಅಥವಾ ಅಸ್ವಸ್ಥರಾದವರಿಂದ ಸರ್ಕಾರಿ ದಾಖಲೆಗಳನ್ನು ಹಾಜರುಪಡಿಸುವಂತೆ ಬಲವಂತ ಮಾಡುವುದು ಅಥವಾ ಅದೇ ನೆಪದಲ್ಲಿ ಚಿಕಿತ್ಸೆ ನೀಡುವುದಕ್ಕೆ ನಿರಾಕರಿಸಿದರೆ ಅಂಥ ವೈದ್ಯರುಮತ್ತು ಶುಶ್ರೂಷಕರನ್ನು ಕೂಡಲೇ ಸೇವೆಯಿಂದ ವಜಾಗೊಳಿಸಲಾಗುತ್ತದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಬಾಣಂತಿ, ಅವಳಿ ಶಿಶುಗಳ ಮರಣ ಪ್ರಕರಣ: ಜಿಲ್ಲಾಸ್ಪತ್ರೆಯ ಸಿಬ್ಬಂದಿ ಅಮಾನತು
ಇದೇ ವೇಳೆ, ತುಮಕೂರಿನಲ್ಲಿ ಬಾಣಂತಿ ಸಾವಿಗೆ ಕಾರಣವಾಗಿರುವ ವೈದ್ಯರು ಹಾಗೂ ಶುಶ್ರೂಷಕರನ್ನು ಸೇವೆಯಿಂದ ಅಮಾನತುಗೊಳಿಸಿ ರಾಜ್ಯಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ಕರ್ತವ್ಯ ಲೋಪ ಹಾಗೂ ದುರ್ನಡತೆ ಆರೋಪದಡಿ ಜಾರಿಗೆ ಬರುವಂತೆ ಈ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ತಮಿಳುನಾಡು ಮೂಲದ ಕಸ್ತೂರಿ ಎಂಬ ಮಹಿಳೆಯ ಗಂಡ ಎರಡು ತಿಂಗಳ ಹಿಂದಷ್ಟೇ ತೀರಿ ಹೋಗಿದ್ದ. ಈ ಹಿನ್ನೆಲೆಯಲ್ಲಿ ತನ್ನ ಏಳು ವರ್ಷದ ಮಗಳೊಂದಿಗೆ ಆಕೆ ತುಮಕೂರು ನಗರಕ್ಕೆ ಬಂದು ನೆಲೆಸಿದ್ದರು. ತುಂಬು ಗರ್ಭಿಣಿಯಾಗಿದ್ದ ಆಕೆಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ, ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದರು. ಆದರೆ, ವೈದ್ಯರು ಮಹಿಳೆಯ ಆಧಾರ್ ಕಾರ್ಡ್, ತಾಯಿ ಇಲ್ಲವೆಂದು ಚಿಕಿತ್ಸೆ ನಿರಾಕರಿಸಿದ್ದರು.
ತೀವ್ರವಾಗಿ ಅಂಗಲಾಚಿ ಬೇಡಿದ್ದಕ್ಕೆ, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಬರೆದುಕೊಡುವುದಾಗಿ ಹೇಳಿ ಅಲ್ಲಿಯೇ ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದರು. ಆದರೆ, ಮಹಿಳೆಯ ಬಳಿ ಹಣವಿಲ್ಲದ್ದಕ್ಕೆ ಆಕೆ ಮನೆಗೆ ಹಿಂದಿರುಗಿದ್ದರು. ಆದರೆ, ಅದರ ಬೆನ್ನಲ್ಲೇ ಆಕೆಗೆ ಹೆರಿಗೆಯಾಗಿತ್ತು. ಅವಳಿ ಮಕ್ಕಳು ಜನಿಸಿದ್ದವು. ಎರಡನೇ ಮಗು ಜನನವಾಗುವಾಗ ಮಹಿಳೆ ಮೃತಪಟ್ಟಿದ್ದರು. ಅದರ ಹಿಂದೆಯೇ ಆ ಎರಡೂ ಮಕ್ಕಳು ಮೃತಪಟ್ಟಿದ್ದವು.

andolanait

Share
Published by
andolanait

Recent Posts

ಅರಮನೆ ಬಳಿ ಹೀಲಿಯಂ ಸ್ಫೋಟ ಪ್ರಕರಣ: ಎನ್‌ಐಎ ತನಿಖೆಗೆ ಪ್ರಮೋದ್‌ ಮುತಾಲಿಕ್‌ ಆಗ್ರಹ

ಮೈಸೂರು: ಅರಮನೆ ಬಳಿ ಹೀಲಿಯಂ ಸಿಲಿಂಡರ್‌ ಸ್ಫೋಟ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಪ್ರತಿಕ್ರಿಯೆ ನೀಡಿದ್ದು,…

7 mins ago

ಚಿತ್ರದುರ್ಗ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ನ್ಯಾಯಾಲಯದ ಆದೇಶವನ್ನು ಮೀರಿ…

30 mins ago

ಹೊಗೇನಕಲ್ ಜಲಪಾತ ವೀಕ್ಷಣೆಗೆ ಪ್ರವಾಸಿಗರ ಲಗ್ಗೆ: ಪ್ರಕೃತಿ ಸೌಂದರ್ಯಕ್ಕೆ ಮನಸೋತ ಜನತೆ

ಹನೂರು: ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಬರುತ್ತಿದ್ದು, ಇಂದು…

47 mins ago

ಕಾಡುಹಂದಿ ಬೇಟೆಗಾಗಿ ಮನೆಯಲ್ಲಿ ಸಂಗ್ರಹಿಸಿದ್ದ ಸಿಡಿಮದ್ದು ಸಿಡಿದು ವ್ಯಕ್ತಿಗೆ ಗಂಭೀರ ಗಾಯ

ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದಲ್ಲಿ ಸಿಡಿಮದ್ದು ಸಿಡಿದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿಡಿಮದ್ದು ಸಿಡಿದು ಪೆದ್ದಿ ಅಲಿಯಾಸ್‌…

1 hour ago

ಓದುಗರ ಪತ್ರ:  ತಡೆಗೋಡೆ ನಿರ್ಮಿಸಿ

ಎಚ್.ಡಿ.ಕೋಟೆ -ಗದ್ದಿಗೆ ಮುಖ್ಯ ರಸ್ತೆಯಲ್ಲಿರುವ ಪೈಲ್ವಾನ್ ಕಾಲೋನಿ ಗ್ರಾಮದಲ್ಲಿರುವ ನೀರು ಕಾಲುವೆಗೆ ತಡೆಗೋಡೆ ಇಲ್ಲಿದೇ ತೀವ್ರ ತೊಂದರೆಯಾಗಿದೆ. ಎಚ್.ಡಿ.ಕೋಟೆ ಮತ್ತು…

2 hours ago

ಓದುಗರ ಪತ್ರ:  ಗಂಗೋತ್ರಿ ವಿದ್ಯಾರ್ಥಿನಿಲಯಗಳಿಗೆ ಮೂಲ ಸೌಕರ್ಯ ಬೇಕಿದೆ

ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಂಶೋಧಕರ ಪುರುಷ ಮತ್ತು ಮಹಿಳಾ ವಿದ್ಯಾರ್ಥಿ ನಿಲಯಗಳಲ್ಲಿ, ಶುದ್ಧ ಕುಡಿಯುವ ನೀರಿನ ಫಿಲ್ಟರ್, ಬಿಸಿನೀರಿನ…

2 hours ago