ಆರೋಗ್ಯ

ಕೇರಳದಲ್ಲಿ ಹೆಚ್ಚಿದ ನಿಫಾ ವೈರಸ್ ಭೀತಿ : ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ

ತಿರುವನಂತಪುರಂ : ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಬುಧವಾರ ಮತ್ತೊಂದು ನಿಫಾ ವೈರಸ್ ಪ್ರಕರಣವನ್ನು ದೃಢಪಡಿಸಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಕೋಯಿಕೋಡ್‌ನ ಖಾಸಗಿ ಆಸ್ಪತ್ರೆಯಲ್ಲಿ 24 ವರ್ಷದ ಆರೋಗ್ಯ ಕಾರ್ಯಕರ್ತೆಯೊಬ್ಬರಿಗೆ ವೈರಸ್ ಇರುವುದು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ಸದ್ಯ 706 ಜನ ಸಂಪರ್ಕ ಪಟ್ಟಿಯಲ್ಲಿದ್ದಾರೆ. ಅದರಲ್ಲಿ 77 ಮಂದಿ ಹೈ-ರಿಸ್ಕ್‌ನಲ್ಲಿದ್ದಾರೆ ಮತ್ತು 153 ಕಾರ್ಯಕರ್ತರು ಆರೋಗ್ಯವಾಗಿದ್ದಾರೆ. ಹೈ-ರಿಸ್ಕ್ ವರ್ಗದಲ್ಲಿರುವವರಿಗೆ ಪ್ರಸ್ತುತ ಯಾವುದೇ ರೋಗಲಕ್ಷಣಗಳು ಕಾಣಿಸುತ್ತಿಲ್ಲ ಎಂದಿದ್ದಾರೆ.

ಪ್ರಸ್ತುತ 13 ಜನರು ಆಸ್ಪತ್ರೆಯ ನಿಗಾದಲ್ಲಿದ್ದು, ತಲೆ ನೋವಿನಂತಹ ಸಣ್ಣಪುಟ್ಟ ಲಕ್ಷಣಗಳು ಕಾಣಿಸುತ್ತಿವೆ. ಹೈ-ರಿಸ್ಕ್ ವರ್ಗದಲ್ಲಿರುವವರು ತಮ್ಮ ಮನೆಯೊಳಗಿರಬೇಕು ಎಂದು ಸರ್ಕಾರ ಸಲಹೆ ನೀಡಿದೆ. ಈ ಕುರಿತು ಎಲ್ಲಾ ಕ್ರಮಗಳನ್ನು ಸಮನ್ವಯಗೊಳಿಸಲು ಕೇರಳ ಸರ್ಕಾರವು 19 ಕೋರ್ ಕಮಿಟಿಗಳನ್ನು ರಚಿಸಿದೆ. ಐಸೋಲೇಷನ್‌ನಲ್ಲಿ ಇರುವವರಿಗೆ ಅಗತ್ಯ ವಸ್ತುಗಳನ್ನು ತಲುಪಿಸಲು ಸ್ಥಳೀಯ ಸ್ವಯಂಸೇವಕ ತಂಡಗಳನ್ನು ರಚಿಸಲಾಗಿದೆ.

ಮೆದುಳಿಗೆ ಹಾನಿ ಉಂಟುಮಾಡುವ ಈ ವೈರಸ್ ಕೇರಳದಲ್ಲಿ ಇಬ್ಬರನ್ನು ಬಲಿ ತೆಗೆದುಕೊಂಡಿದೆ. ಸೋಂಕಿತ ವ್ಯಕ್ತಿಗಳ ಸಂಪರ್ಕಗಳನ್ನು ಮೊದಲೇ ಪತ್ತೆಹಚ್ಚಲು ಮತ್ತು ರೋಗಲಕ್ಷಣ ಹೊಂದಿರುವವರನ್ನು ಪ್ರತ್ಯೇಕಿಸುವತ್ತ ರಾಜ್ಯ ಆಡಳಿತ ಗಮನ ಹರಿಸುತ್ತಿದೆ ಎಂದು ವೀಣಾ ಜಾರ್ಜ್ ತಿಳಿಸಿದ್ದಾರೆ. ಅಲ್ಲದೇ ಕೋಯಿಕೋಡ್ ಜಿಲ್ಲೆಯ ಏಳು ಗ್ರಾಮ ಪಂಚಾಯತ್‌ಗಳಾದ ಅತಂಚೇರಿ, ಮಾರುತೋಂಕರ, ತಿರುವಳ್ಳೂರು, ಕುಟ್ಟಿಯಾಡಿ, ಕಾಯಕ್ಕೋಡಿ, ವಿಲ್ಲ್ಯಪಲ್ಲಿ ಮತ್ತು ಕವಿಲುಂಪಾರವನ್ನು ಕಂಟೈನ್‌ಮೆಂಟ್ ವಲಯ ಎಂದು ಘೋಷಿಸಲಾಗಿದೆ.

ಕಂಟೈನ್‌ಮೆಂಟ್ ವಲಯದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳಿಗೆ ಮನೆಯಿಂದಲೇ ತರಗತಿಗಳಿಗೆ ಹಾಜರಾಗಲು ಆನ್‌ಲೈನ್ ತರತಿಗಳನ್ನು ಆಯೋಜಿಸುವಂತೆ ಶಿಕ್ಷಣ ಸಚಿವ ವಿ.ಶಿವನ್‌ಕುಟ್ಟಿ ಸಾರ್ವಜನಿಕ ಶಿಕ್ಷಣ ನಿರ್ದೇಶಕರಿಗೆ ನಿರ್ದೇಶನ ನೀಡಿದ್ದಾರೆ.

lokesh

Share
Published by
lokesh

Recent Posts

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

11 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

24 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

8 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

9 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

15 hours ago