ಆರೋಗ್ಯ

ಕೇರಳದಲ್ಲಿ ಹೆಚ್ಚಿದ ನಿಫಾ ವೈರಸ್ ಭೀತಿ : ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ

ತಿರುವನಂತಪುರಂ : ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಬುಧವಾರ ಮತ್ತೊಂದು ನಿಫಾ ವೈರಸ್ ಪ್ರಕರಣವನ್ನು ದೃಢಪಡಿಸಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಕೋಯಿಕೋಡ್‌ನ ಖಾಸಗಿ ಆಸ್ಪತ್ರೆಯಲ್ಲಿ 24 ವರ್ಷದ ಆರೋಗ್ಯ ಕಾರ್ಯಕರ್ತೆಯೊಬ್ಬರಿಗೆ ವೈರಸ್ ಇರುವುದು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ಸದ್ಯ 706 ಜನ ಸಂಪರ್ಕ ಪಟ್ಟಿಯಲ್ಲಿದ್ದಾರೆ. ಅದರಲ್ಲಿ 77 ಮಂದಿ ಹೈ-ರಿಸ್ಕ್‌ನಲ್ಲಿದ್ದಾರೆ ಮತ್ತು 153 ಕಾರ್ಯಕರ್ತರು ಆರೋಗ್ಯವಾಗಿದ್ದಾರೆ. ಹೈ-ರಿಸ್ಕ್ ವರ್ಗದಲ್ಲಿರುವವರಿಗೆ ಪ್ರಸ್ತುತ ಯಾವುದೇ ರೋಗಲಕ್ಷಣಗಳು ಕಾಣಿಸುತ್ತಿಲ್ಲ ಎಂದಿದ್ದಾರೆ.

ಪ್ರಸ್ತುತ 13 ಜನರು ಆಸ್ಪತ್ರೆಯ ನಿಗಾದಲ್ಲಿದ್ದು, ತಲೆ ನೋವಿನಂತಹ ಸಣ್ಣಪುಟ್ಟ ಲಕ್ಷಣಗಳು ಕಾಣಿಸುತ್ತಿವೆ. ಹೈ-ರಿಸ್ಕ್ ವರ್ಗದಲ್ಲಿರುವವರು ತಮ್ಮ ಮನೆಯೊಳಗಿರಬೇಕು ಎಂದು ಸರ್ಕಾರ ಸಲಹೆ ನೀಡಿದೆ. ಈ ಕುರಿತು ಎಲ್ಲಾ ಕ್ರಮಗಳನ್ನು ಸಮನ್ವಯಗೊಳಿಸಲು ಕೇರಳ ಸರ್ಕಾರವು 19 ಕೋರ್ ಕಮಿಟಿಗಳನ್ನು ರಚಿಸಿದೆ. ಐಸೋಲೇಷನ್‌ನಲ್ಲಿ ಇರುವವರಿಗೆ ಅಗತ್ಯ ವಸ್ತುಗಳನ್ನು ತಲುಪಿಸಲು ಸ್ಥಳೀಯ ಸ್ವಯಂಸೇವಕ ತಂಡಗಳನ್ನು ರಚಿಸಲಾಗಿದೆ.

ಮೆದುಳಿಗೆ ಹಾನಿ ಉಂಟುಮಾಡುವ ಈ ವೈರಸ್ ಕೇರಳದಲ್ಲಿ ಇಬ್ಬರನ್ನು ಬಲಿ ತೆಗೆದುಕೊಂಡಿದೆ. ಸೋಂಕಿತ ವ್ಯಕ್ತಿಗಳ ಸಂಪರ್ಕಗಳನ್ನು ಮೊದಲೇ ಪತ್ತೆಹಚ್ಚಲು ಮತ್ತು ರೋಗಲಕ್ಷಣ ಹೊಂದಿರುವವರನ್ನು ಪ್ರತ್ಯೇಕಿಸುವತ್ತ ರಾಜ್ಯ ಆಡಳಿತ ಗಮನ ಹರಿಸುತ್ತಿದೆ ಎಂದು ವೀಣಾ ಜಾರ್ಜ್ ತಿಳಿಸಿದ್ದಾರೆ. ಅಲ್ಲದೇ ಕೋಯಿಕೋಡ್ ಜಿಲ್ಲೆಯ ಏಳು ಗ್ರಾಮ ಪಂಚಾಯತ್‌ಗಳಾದ ಅತಂಚೇರಿ, ಮಾರುತೋಂಕರ, ತಿರುವಳ್ಳೂರು, ಕುಟ್ಟಿಯಾಡಿ, ಕಾಯಕ್ಕೋಡಿ, ವಿಲ್ಲ್ಯಪಲ್ಲಿ ಮತ್ತು ಕವಿಲುಂಪಾರವನ್ನು ಕಂಟೈನ್‌ಮೆಂಟ್ ವಲಯ ಎಂದು ಘೋಷಿಸಲಾಗಿದೆ.

ಕಂಟೈನ್‌ಮೆಂಟ್ ವಲಯದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳಿಗೆ ಮನೆಯಿಂದಲೇ ತರಗತಿಗಳಿಗೆ ಹಾಜರಾಗಲು ಆನ್‌ಲೈನ್ ತರತಿಗಳನ್ನು ಆಯೋಜಿಸುವಂತೆ ಶಿಕ್ಷಣ ಸಚಿವ ವಿ.ಶಿವನ್‌ಕುಟ್ಟಿ ಸಾರ್ವಜನಿಕ ಶಿಕ್ಷಣ ನಿರ್ದೇಶಕರಿಗೆ ನಿರ್ದೇಶನ ನೀಡಿದ್ದಾರೆ.

lokesh

Share
Published by
lokesh

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

10 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

10 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

11 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

11 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

11 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

11 hours ago