ಆರೋಗ್ಯ

ಕೇರಳದಲ್ಲಿ ಹೆಚ್ಚಿದ ನಿಫಾ ವೈರಸ್ ಭೀತಿ : ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ

ತಿರುವನಂತಪುರಂ : ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಬುಧವಾರ ಮತ್ತೊಂದು ನಿಫಾ ವೈರಸ್ ಪ್ರಕರಣವನ್ನು ದೃಢಪಡಿಸಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಕೋಯಿಕೋಡ್‌ನ ಖಾಸಗಿ ಆಸ್ಪತ್ರೆಯಲ್ಲಿ 24 ವರ್ಷದ ಆರೋಗ್ಯ ಕಾರ್ಯಕರ್ತೆಯೊಬ್ಬರಿಗೆ ವೈರಸ್ ಇರುವುದು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ಸದ್ಯ 706 ಜನ ಸಂಪರ್ಕ ಪಟ್ಟಿಯಲ್ಲಿದ್ದಾರೆ. ಅದರಲ್ಲಿ 77 ಮಂದಿ ಹೈ-ರಿಸ್ಕ್‌ನಲ್ಲಿದ್ದಾರೆ ಮತ್ತು 153 ಕಾರ್ಯಕರ್ತರು ಆರೋಗ್ಯವಾಗಿದ್ದಾರೆ. ಹೈ-ರಿಸ್ಕ್ ವರ್ಗದಲ್ಲಿರುವವರಿಗೆ ಪ್ರಸ್ತುತ ಯಾವುದೇ ರೋಗಲಕ್ಷಣಗಳು ಕಾಣಿಸುತ್ತಿಲ್ಲ ಎಂದಿದ್ದಾರೆ.

ಪ್ರಸ್ತುತ 13 ಜನರು ಆಸ್ಪತ್ರೆಯ ನಿಗಾದಲ್ಲಿದ್ದು, ತಲೆ ನೋವಿನಂತಹ ಸಣ್ಣಪುಟ್ಟ ಲಕ್ಷಣಗಳು ಕಾಣಿಸುತ್ತಿವೆ. ಹೈ-ರಿಸ್ಕ್ ವರ್ಗದಲ್ಲಿರುವವರು ತಮ್ಮ ಮನೆಯೊಳಗಿರಬೇಕು ಎಂದು ಸರ್ಕಾರ ಸಲಹೆ ನೀಡಿದೆ. ಈ ಕುರಿತು ಎಲ್ಲಾ ಕ್ರಮಗಳನ್ನು ಸಮನ್ವಯಗೊಳಿಸಲು ಕೇರಳ ಸರ್ಕಾರವು 19 ಕೋರ್ ಕಮಿಟಿಗಳನ್ನು ರಚಿಸಿದೆ. ಐಸೋಲೇಷನ್‌ನಲ್ಲಿ ಇರುವವರಿಗೆ ಅಗತ್ಯ ವಸ್ತುಗಳನ್ನು ತಲುಪಿಸಲು ಸ್ಥಳೀಯ ಸ್ವಯಂಸೇವಕ ತಂಡಗಳನ್ನು ರಚಿಸಲಾಗಿದೆ.

ಮೆದುಳಿಗೆ ಹಾನಿ ಉಂಟುಮಾಡುವ ಈ ವೈರಸ್ ಕೇರಳದಲ್ಲಿ ಇಬ್ಬರನ್ನು ಬಲಿ ತೆಗೆದುಕೊಂಡಿದೆ. ಸೋಂಕಿತ ವ್ಯಕ್ತಿಗಳ ಸಂಪರ್ಕಗಳನ್ನು ಮೊದಲೇ ಪತ್ತೆಹಚ್ಚಲು ಮತ್ತು ರೋಗಲಕ್ಷಣ ಹೊಂದಿರುವವರನ್ನು ಪ್ರತ್ಯೇಕಿಸುವತ್ತ ರಾಜ್ಯ ಆಡಳಿತ ಗಮನ ಹರಿಸುತ್ತಿದೆ ಎಂದು ವೀಣಾ ಜಾರ್ಜ್ ತಿಳಿಸಿದ್ದಾರೆ. ಅಲ್ಲದೇ ಕೋಯಿಕೋಡ್ ಜಿಲ್ಲೆಯ ಏಳು ಗ್ರಾಮ ಪಂಚಾಯತ್‌ಗಳಾದ ಅತಂಚೇರಿ, ಮಾರುತೋಂಕರ, ತಿರುವಳ್ಳೂರು, ಕುಟ್ಟಿಯಾಡಿ, ಕಾಯಕ್ಕೋಡಿ, ವಿಲ್ಲ್ಯಪಲ್ಲಿ ಮತ್ತು ಕವಿಲುಂಪಾರವನ್ನು ಕಂಟೈನ್‌ಮೆಂಟ್ ವಲಯ ಎಂದು ಘೋಷಿಸಲಾಗಿದೆ.

ಕಂಟೈನ್‌ಮೆಂಟ್ ವಲಯದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳಿಗೆ ಮನೆಯಿಂದಲೇ ತರಗತಿಗಳಿಗೆ ಹಾಜರಾಗಲು ಆನ್‌ಲೈನ್ ತರತಿಗಳನ್ನು ಆಯೋಜಿಸುವಂತೆ ಶಿಕ್ಷಣ ಸಚಿವ ವಿ.ಶಿವನ್‌ಕುಟ್ಟಿ ಸಾರ್ವಜನಿಕ ಶಿಕ್ಷಣ ನಿರ್ದೇಶಕರಿಗೆ ನಿರ್ದೇಶನ ನೀಡಿದ್ದಾರೆ.

lokesh

Share
Published by
lokesh

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

4 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

4 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

4 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

5 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

14 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

14 hours ago