ತಿರುವನಂತಪುರಂ : ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಬುಧವಾರ ಮತ್ತೊಂದು ನಿಫಾ ವೈರಸ್ ಪ್ರಕರಣವನ್ನು ದೃಢಪಡಿಸಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಕೋಯಿಕೋಡ್ನ ಖಾಸಗಿ ಆಸ್ಪತ್ರೆಯಲ್ಲಿ 24 ವರ್ಷದ ಆರೋಗ್ಯ ಕಾರ್ಯಕರ್ತೆಯೊಬ್ಬರಿಗೆ ವೈರಸ್ ಇರುವುದು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ಸದ್ಯ 706 ಜನ ಸಂಪರ್ಕ ಪಟ್ಟಿಯಲ್ಲಿದ್ದಾರೆ. ಅದರಲ್ಲಿ 77 ಮಂದಿ ಹೈ-ರಿಸ್ಕ್ನಲ್ಲಿದ್ದಾರೆ ಮತ್ತು 153 ಕಾರ್ಯಕರ್ತರು ಆರೋಗ್ಯವಾಗಿದ್ದಾರೆ. ಹೈ-ರಿಸ್ಕ್ ವರ್ಗದಲ್ಲಿರುವವರಿಗೆ ಪ್ರಸ್ತುತ ಯಾವುದೇ ರೋಗಲಕ್ಷಣಗಳು ಕಾಣಿಸುತ್ತಿಲ್ಲ ಎಂದಿದ್ದಾರೆ.
ಪ್ರಸ್ತುತ 13 ಜನರು ಆಸ್ಪತ್ರೆಯ ನಿಗಾದಲ್ಲಿದ್ದು, ತಲೆ ನೋವಿನಂತಹ ಸಣ್ಣಪುಟ್ಟ ಲಕ್ಷಣಗಳು ಕಾಣಿಸುತ್ತಿವೆ. ಹೈ-ರಿಸ್ಕ್ ವರ್ಗದಲ್ಲಿರುವವರು ತಮ್ಮ ಮನೆಯೊಳಗಿರಬೇಕು ಎಂದು ಸರ್ಕಾರ ಸಲಹೆ ನೀಡಿದೆ. ಈ ಕುರಿತು ಎಲ್ಲಾ ಕ್ರಮಗಳನ್ನು ಸಮನ್ವಯಗೊಳಿಸಲು ಕೇರಳ ಸರ್ಕಾರವು 19 ಕೋರ್ ಕಮಿಟಿಗಳನ್ನು ರಚಿಸಿದೆ. ಐಸೋಲೇಷನ್ನಲ್ಲಿ ಇರುವವರಿಗೆ ಅಗತ್ಯ ವಸ್ತುಗಳನ್ನು ತಲುಪಿಸಲು ಸ್ಥಳೀಯ ಸ್ವಯಂಸೇವಕ ತಂಡಗಳನ್ನು ರಚಿಸಲಾಗಿದೆ.
ಮೆದುಳಿಗೆ ಹಾನಿ ಉಂಟುಮಾಡುವ ಈ ವೈರಸ್ ಕೇರಳದಲ್ಲಿ ಇಬ್ಬರನ್ನು ಬಲಿ ತೆಗೆದುಕೊಂಡಿದೆ. ಸೋಂಕಿತ ವ್ಯಕ್ತಿಗಳ ಸಂಪರ್ಕಗಳನ್ನು ಮೊದಲೇ ಪತ್ತೆಹಚ್ಚಲು ಮತ್ತು ರೋಗಲಕ್ಷಣ ಹೊಂದಿರುವವರನ್ನು ಪ್ರತ್ಯೇಕಿಸುವತ್ತ ರಾಜ್ಯ ಆಡಳಿತ ಗಮನ ಹರಿಸುತ್ತಿದೆ ಎಂದು ವೀಣಾ ಜಾರ್ಜ್ ತಿಳಿಸಿದ್ದಾರೆ. ಅಲ್ಲದೇ ಕೋಯಿಕೋಡ್ ಜಿಲ್ಲೆಯ ಏಳು ಗ್ರಾಮ ಪಂಚಾಯತ್ಗಳಾದ ಅತಂಚೇರಿ, ಮಾರುತೋಂಕರ, ತಿರುವಳ್ಳೂರು, ಕುಟ್ಟಿಯಾಡಿ, ಕಾಯಕ್ಕೋಡಿ, ವಿಲ್ಲ್ಯಪಲ್ಲಿ ಮತ್ತು ಕವಿಲುಂಪಾರವನ್ನು ಕಂಟೈನ್ಮೆಂಟ್ ವಲಯ ಎಂದು ಘೋಷಿಸಲಾಗಿದೆ.
ಕಂಟೈನ್ಮೆಂಟ್ ವಲಯದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳಿಗೆ ಮನೆಯಿಂದಲೇ ತರಗತಿಗಳಿಗೆ ಹಾಜರಾಗಲು ಆನ್ಲೈನ್ ತರತಿಗಳನ್ನು ಆಯೋಜಿಸುವಂತೆ ಶಿಕ್ಷಣ ಸಚಿವ ವಿ.ಶಿವನ್ಕುಟ್ಟಿ ಸಾರ್ವಜನಿಕ ಶಿಕ್ಷಣ ನಿರ್ದೇಶಕರಿಗೆ ನಿರ್ದೇಶನ ನೀಡಿದ್ದಾರೆ.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…