ಆರೋಗ್ಯ

ಅಂಗಾಂಗ ದಾನದಲ್ಲಿ ರಾಜ್ಯಕ್ಕೆ 2ನೇ ಸ್ಥಾನ

ಬೆಂಗಳೂರು : ತೆಲಂಗಾಣ ನಂತರ ದಕ್ಷಿಣದ ರಾಜ್ಯಗಳಲ್ಲಿ ಅಂಗಾಂಗ ದಾನದಲ್ಲಿ ಎರಡನೇ ಸ್ಥಾನವನ್ನು ಕರ್ನಾಟಕ ಪಡೆದುಕೊಂಡಿದೆ ಎಂಬುದು ಹೆಮ್ಮೆಯ ವಿಷಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ ಸುಧಾಕರ್ ಹೇಳಿದ್ದಾರೆ.

2022 ಡಿಸೆಂಬರ್ 14 ವರೆಗಿನ ದಾಖಲೆ ಸಂಖ್ಯೆಯ ಆಧಾರದ ಮೇಲೆ 143 ಅಂಗಾಂಗ ದಾನ(Organ Donations)ಗಳೊಂದಿಗೆ ಕರ್ನಾಟಕವು ಎರಡನೇ ಸ್ಥಾನದಲ್ಲಿದೆ. ಅಂಗಾಂದ ದಾನದಂತಹ ಮಹತ್ವದ ಕಾರ್ಯದಿಂದಾಗಿ ಕರ್ನಾಟಕದಾದ್ಯಂತ ಸುಮಾರು 397 ಜನರಿಗೆ  ಅಂಗಾಂಗಗವನ್ನು ನೀಡಿ ಅವರಿಗೆ ಹೊಸ ಜೀವನವನ್ನು ನಡೆಸುತ್ತಿರುವುದು ನಿಜಕ್ಕೂ ರಾಜ್ಯಕ್ಕೆ ಹೆಮ್ಮೆಯ ವಿಷಯ. ತೆಲಂಗಾಣ ನಂತರ ದಕ್ಷಿಣದ ರಾಜ್ಯಗಳಲ್ಲಿ ಅಂಗಾಂಗ ದಾನದಲ್ಲಿ ಎರಡನೇ ಸ್ಥಾನವನ್ನು ಕರ್ನಾಟಕ ಪಡೆದುಕೊಂಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ ಸುಧಾಕರ್ ಹೇಳಿದ್ದಾರೆ.

ಹಿಂದಿನ ವರ್ಷ ಕರ್ನಾಟಕದಲ್ಲಿ 70 ಅಂಗಾಂಗ ದಾನಗಳು ದಾಖಲಿಸಿಲಾಗಿತ್ತು. ನಂತರದ ದಿನಗಳಲ್ಲಿ ಅಂಗಾಂಗ ದಾನಗಳ ಕುರಿತು ಮೂಡಿಸಿದ ಜಾಗೃತಿಯಿಂದಾಗಿ ದೊಡ್ಡ ಪ್ರಮಾಣದ ಅಂಗಾಂಗ ದಾನಗಳಿಗೆ ಕಾರಣವಾಗಿದೆ ಎಂದು ಕರ್ನಾಟಕದ ರಾಜ್ಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆಯ ಕಾರ್ಯದರ್ಶಿ ಡಾ ಕಿರಣ್ ಕುಮಾರ್ ಡೆಕ್ಕನ್ ಹೆರಾಲ್ಡ್ ಜೊತೆಗೆ ಹಂಚಿಕೊಂಡಿದ್ದಾರೆ. ವಿಶೇಷವಾಗಿ ದಕ್ಷಿಣ ಕನ್ನಡದಲ್ಲಿ 2021ಕ್ಕೆ ಹೋಲಿಸಿದ್ದರೆ, 2022 ರಲ್ಲಿ ನಾಲ್ಕರಿಂದ ಅಂಗಾಂಗ ದಾನಗಳ ಸಂಖ್ಯೆ 15 ಕ್ಕೆ ಏರಿಕೆ ಕಂಡಿದೆ. ಇದರಲ್ಲಿ 95 ಪ್ರತಿಶತದಷ್ಟು ಮೆದುಳು ನಿಷ್ಕ್ರಿಯಗೊಂಡ ರೋಗಿಗಳ ಕುಟುಂಬದ ಸದಸ್ಯರು ಅಂಗಾಂಗ ದಾನದಂತಹ ಮಹತ್ತರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇದರಿಂದಾಗಿ 72 ಜನರ ಜೀವಗಳನ್ನು ಉಳಿಸಲಾಯಿತು. ಕೆಲವು ವಾರಗಳ ಹಿಂದೆಯಷ್ಟೇ ಮಂಜೇಶ್ವರ ಕೇರಳದಲ್ಲಿ ಅಪಘಾತಕ್ಕೀಡಾದ ಘಟನೆಯ ಕುರಿತು ಡಾ ಕಿರಣ್ ಕುಮಾರ್ ನೆನಪಿಸಿಕೊಂಡಿದ್ದಾರೆ.

ಕೋಡಿಕಲ್‌ನ ನಿವಾಸಿಯೊಬ್ಬರು , ಐದು ವರ್ಷಗಳಿಂದ ಡಯಾಲಿಸಿಸ್‌ಗೆ ಒಳಗಾಗಿದ್ದರು. ಕಸಿ ಮಾಡಿದ ನಂತರ ಸಾಮಾನ್ಯ ಜೀವನವನ್ನು ನಡೆಸುತ್ತಿರುವುದರಿಂದ ಮೂತ್ರಪಿಂಡವನ್ನು ದಾನ ಮಾಡಿದ ದಾನಿಯ ಕುಟುಂಬವನ್ನು ನೆನಪಿಸಿಕೊಳ್ಳುತ್ತಾರೆ ಎಂದು ಅವರು ಹೇಳಿದರು.

andolanait

Share
Published by
andolanait

Recent Posts

ಡಿ.ಕೆ.ಶಿವಕುಮಾರ್‌ ನಿಯತ್ತಿನ ಸೈನಿಕ: ಶಾಸಕ ರವಿಕುಮಾರ್‌ ಗಣಿಗ ಬ್ಯಾಟಿಂಗ್‌

ಮಂಡ್ಯ: ಸಚಿವ ಎಚ್‌.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಶಾಸಕ…

43 mins ago

ಸಾಗರದಲ್ಲಿ ಭಾರತದ ಸಾರ್ವಭೌಮತ್ವ: ವಿಶಾಖಪಟ್ಟಣಂನಲ್ಲಿ ರಾಷ್ಟ್ರಪತಿ ಮುರ್ಮುರಿಂದ ನೌಕಾಶಕ್ತಿ ಪ್ರದರ್ಶನ ವೀಕ್ಷಣೆ

ವಿಶಾಖಪಟ್ಟಣಂ: ಭಾರತೀಯ ನೌಕಾಪಡೆಯ ವಿಶ್ವದ ವಿವಿಧ ದೇಶಗಳ ನೌಕಾಪಡೆಗಳೊಂದಿಗೆ ಸೇರಿ ತನ್ನ ಅಪ್ರತಿಮ ಶೌರ್ಯ ಹಾಗೂ ಸನ್ನದ್ಧತೆಯನ್ನು ಬುಧವಾರ ವಿಶಾಖಪಟ್ಟಣಂ…

59 mins ago

ಗುಂಡ್ಲುಪೇಟೆ| ಹುಲಿ ದಾಳಿಗೆ ಹಸು ಸಾವು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ಹಸುವಿನ ಮೇಲೆ ಹುಲಿ‌ ದಾಳಿ ನಡೆಸಿ ಕೊಂದು…

1 hour ago

ರಾಜ್ಯ ಸರ್ಕಾರಕ್ಕೆ ಮಾಧ್ಯಮಗಳನ್ನು ಕಂಡರೆ ನಡುಕವೇಕೆ?: ಜೆಡಿಎಸ್‌ ಲೇವಡಿ

ಬೆಂಗಳೂರು: ವಿಧಾನಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಜೆಡಿಎಸ್‌ ಲೇವಡಿ ಮಾಡಿದೆ. ಪ್ರಶ್ನೆ ಕೇಳುವ…

2 hours ago

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಪತ್ರ ವೈರಲ್‌

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ…

2 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ ಸಂಪನ್ನ: ಎ.ಈ.ರಘು ಸಂತಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ…

4 hours ago