ಆರೋಗ್ಯ

ಅಂಗಾಂಗ ದಾನದಲ್ಲಿ ರಾಜ್ಯಕ್ಕೆ 2ನೇ ಸ್ಥಾನ

ಬೆಂಗಳೂರು : ತೆಲಂಗಾಣ ನಂತರ ದಕ್ಷಿಣದ ರಾಜ್ಯಗಳಲ್ಲಿ ಅಂಗಾಂಗ ದಾನದಲ್ಲಿ ಎರಡನೇ ಸ್ಥಾನವನ್ನು ಕರ್ನಾಟಕ ಪಡೆದುಕೊಂಡಿದೆ ಎಂಬುದು ಹೆಮ್ಮೆಯ ವಿಷಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ ಸುಧಾಕರ್ ಹೇಳಿದ್ದಾರೆ.

2022 ಡಿಸೆಂಬರ್ 14 ವರೆಗಿನ ದಾಖಲೆ ಸಂಖ್ಯೆಯ ಆಧಾರದ ಮೇಲೆ 143 ಅಂಗಾಂಗ ದಾನ(Organ Donations)ಗಳೊಂದಿಗೆ ಕರ್ನಾಟಕವು ಎರಡನೇ ಸ್ಥಾನದಲ್ಲಿದೆ. ಅಂಗಾಂದ ದಾನದಂತಹ ಮಹತ್ವದ ಕಾರ್ಯದಿಂದಾಗಿ ಕರ್ನಾಟಕದಾದ್ಯಂತ ಸುಮಾರು 397 ಜನರಿಗೆ  ಅಂಗಾಂಗಗವನ್ನು ನೀಡಿ ಅವರಿಗೆ ಹೊಸ ಜೀವನವನ್ನು ನಡೆಸುತ್ತಿರುವುದು ನಿಜಕ್ಕೂ ರಾಜ್ಯಕ್ಕೆ ಹೆಮ್ಮೆಯ ವಿಷಯ. ತೆಲಂಗಾಣ ನಂತರ ದಕ್ಷಿಣದ ರಾಜ್ಯಗಳಲ್ಲಿ ಅಂಗಾಂಗ ದಾನದಲ್ಲಿ ಎರಡನೇ ಸ್ಥಾನವನ್ನು ಕರ್ನಾಟಕ ಪಡೆದುಕೊಂಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ ಸುಧಾಕರ್ ಹೇಳಿದ್ದಾರೆ.

ಹಿಂದಿನ ವರ್ಷ ಕರ್ನಾಟಕದಲ್ಲಿ 70 ಅಂಗಾಂಗ ದಾನಗಳು ದಾಖಲಿಸಿಲಾಗಿತ್ತು. ನಂತರದ ದಿನಗಳಲ್ಲಿ ಅಂಗಾಂಗ ದಾನಗಳ ಕುರಿತು ಮೂಡಿಸಿದ ಜಾಗೃತಿಯಿಂದಾಗಿ ದೊಡ್ಡ ಪ್ರಮಾಣದ ಅಂಗಾಂಗ ದಾನಗಳಿಗೆ ಕಾರಣವಾಗಿದೆ ಎಂದು ಕರ್ನಾಟಕದ ರಾಜ್ಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆಯ ಕಾರ್ಯದರ್ಶಿ ಡಾ ಕಿರಣ್ ಕುಮಾರ್ ಡೆಕ್ಕನ್ ಹೆರಾಲ್ಡ್ ಜೊತೆಗೆ ಹಂಚಿಕೊಂಡಿದ್ದಾರೆ. ವಿಶೇಷವಾಗಿ ದಕ್ಷಿಣ ಕನ್ನಡದಲ್ಲಿ 2021ಕ್ಕೆ ಹೋಲಿಸಿದ್ದರೆ, 2022 ರಲ್ಲಿ ನಾಲ್ಕರಿಂದ ಅಂಗಾಂಗ ದಾನಗಳ ಸಂಖ್ಯೆ 15 ಕ್ಕೆ ಏರಿಕೆ ಕಂಡಿದೆ. ಇದರಲ್ಲಿ 95 ಪ್ರತಿಶತದಷ್ಟು ಮೆದುಳು ನಿಷ್ಕ್ರಿಯಗೊಂಡ ರೋಗಿಗಳ ಕುಟುಂಬದ ಸದಸ್ಯರು ಅಂಗಾಂಗ ದಾನದಂತಹ ಮಹತ್ತರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇದರಿಂದಾಗಿ 72 ಜನರ ಜೀವಗಳನ್ನು ಉಳಿಸಲಾಯಿತು. ಕೆಲವು ವಾರಗಳ ಹಿಂದೆಯಷ್ಟೇ ಮಂಜೇಶ್ವರ ಕೇರಳದಲ್ಲಿ ಅಪಘಾತಕ್ಕೀಡಾದ ಘಟನೆಯ ಕುರಿತು ಡಾ ಕಿರಣ್ ಕುಮಾರ್ ನೆನಪಿಸಿಕೊಂಡಿದ್ದಾರೆ.

ಕೋಡಿಕಲ್‌ನ ನಿವಾಸಿಯೊಬ್ಬರು , ಐದು ವರ್ಷಗಳಿಂದ ಡಯಾಲಿಸಿಸ್‌ಗೆ ಒಳಗಾಗಿದ್ದರು. ಕಸಿ ಮಾಡಿದ ನಂತರ ಸಾಮಾನ್ಯ ಜೀವನವನ್ನು ನಡೆಸುತ್ತಿರುವುದರಿಂದ ಮೂತ್ರಪಿಂಡವನ್ನು ದಾನ ಮಾಡಿದ ದಾನಿಯ ಕುಟುಂಬವನ್ನು ನೆನಪಿಸಿಕೊಳ್ಳುತ್ತಾರೆ ಎಂದು ಅವರು ಹೇಳಿದರು.

andolanait

Share
Published by
andolanait

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

3 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

3 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

3 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

3 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

3 hours ago