ಹೊಸದಿಲ್ಲಿ : ಭಾರತದಲ್ಲಿ ಮತ್ತೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ನಾಲ್ಕನೇ ಅಲೆಯ ಭೀತಿ ಶುರುವಾಗಿದೆ. ಕಳೆದ 24 ಗಂಟೆಗಳಲ್ಲಿ 10 ಸಾವಿರಕ್ಕೂ ಹೆಚ್ಚು ಕೋವಿಡ್-19 ಪ್ರಕರಣಗಳು ದೇಶದಲ್ಲಿ ಕಂಡುಬಂದಿವೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 10,158 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಇದು ಬುಧವಾರಕ್ಕಿಂತ ಶೇ.30ರಷ್ಟು ಹೆಚ್ಚಳವಾಗಿದೆ.
ಬುಧವಾರ 7,830 ಪ್ರಕರಣಗಳು ಪತ್ತೆಯಾಗಿದ್ದರೆ ಗುರುವಾರ 10,158 ಸೋಂಕಿನ ಪ್ರಕರಣಗಳು ಕಂಡುಬಂದಿದ್ದು, ಒಂದೇ ದಿನದಲ್ಲಿ ಕೊರೊನಾ ಸೋಂಕು ಭಾರೀ ಏರಿಕೆಯಾಗಿದೆ. ಈ ಮೂಲಕ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 44,998ಕ್ಕೆ ಏರಿದ್ದು, ಇದರೊಂದಿಗೆ ಕೋವಿಡ್ ಪ್ರಕರಣಗಳ ಸಂಖ್ಯೆ 4,42,10,127ಕ್ಕೆ ಏರಿಕೆಯಾಗಿದೆ.
ದಿನದ ಕೊರೊನಾ ಪಾಸಿಟಿವಿಟಿ ದರ ಶೇ.4.42ರಷ್ಟಿದ್ದರೆ, ವಾರದ ಪಾಸಿಟಿವಿಟಿ ದರ ಶೇ.4.02ರಷ್ಟಿದೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ ಒಟ್ಟು ಕೊರೊನಾ ಪ್ರಕರಣಗಳ ಶೇ.0.10ರಷ್ಟಿದೆ. ಇನ್ನು, ಆರೋಗ್ಯ ಸಚಿವಾಲಯದ ವೆಬ್ಸೈಟ್ನ ಪ್ರಕಾರ ದೇಶಾದ್ಯಂತ ಗುಣಮುಖ ಪ್ರಮಾಣ ಶೇ.98.71ರಷ್ಟಿದೆ. ಸಾವಿನ ಪ್ರಮಾಣ ಶೇ.1.19ರಷ್ಟಿದೆ.
ಭಾರತದಲ್ಲಿ ಕೊರೊನಾ ವೈರಸ್ ಸ್ಥಳೀಯ ಹಂತವನ್ನು ಪ್ರವೇಶಿಸಿದೆ. ಮುಂದಿನ 10 ರಿಂದ 12ದಿನಗಳವರೆಗೆ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತವೆ. ಬಳಿಕ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತವೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಒಮಿಕ್ರಾನ್ನ XBB.1.16 ಉಪ ತಳಿ ಬಗ್ಗೆ ಯಾವುದೇ ಆತಂಕ ಬೇಡ, ಅದರ ವಿರುದ್ಧ ಕೋವಿಡ್ ಲಸಿಕೆಗಳು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತವೆ ಎಂದು ಆರೋಗ್ಯ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಒಮಿಕ್ರಾನ್ನ ಉಪ ತಳಿಗಳ ಹರಡುವಿಕೆಯು ಫೆಬ್ರವರಿಯಲ್ಲಿ ಶೇ.21.6ರಷ್ಟಿದ್ದರೆ, ಮಾರ್ಚ್ನಲ್ಲಿ ಶೇ.35.8ಕ್ಕೆ ಏರಿತ್ತು. ಆದರೆ, ಆಸ್ಪತ್ರೆಗೆ ದಾಖಲಾದ ಅಥವಾ ಸಾವಿನ ಯಾವುದೇ ಘಟನೆ ವರದಿಯಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಒಮಿಕ್ರಾನ್ನ ಆರು ಉಪ ತಳಿಗಳು ಭಾರತದಲ್ಲಿ ಕಂಡು ಬಂದಿದ್ದು, ಮುಖ್ಯವಾಗಿ ಎಕ್ಸ್ಬಿಬಿ1, ಬಿಎಫ್.7, ಎಕ್ಸ್ಬಿಬಿ 1.16, ಬಿಎ 2.75, ಬಿಎ 2.10.1, ಎಕ್ಸ್ಬಿಬಿ 1.5 ತಳಿಗಳ ಬಗ್ಗೆ ತಜ್ಞರ ತಂಡ ನಿಗಾ ಇರಿಸಿದೆ.
ಎರಡು ದಿನ ನಡೆದಿದ್ದ ಮಾಕ್ ಡ್ರಿಲ್ : ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಕೊರೊನಾ ನಿರ್ವಹಣೆಗೆ ಏಪ್ರಿಲ್ 10 ಮತ್ತು 11ರಂದು ದೇಶಾದ್ಯಂತ ಕೊರೊನಾ ಮಾಕ್ ಡ್ರಿಲ್ ನಡೆಸಲಾಗಿತ್ತು. ದೇಶದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಣಕು ಕಾರ್ಯಾಚರಣೆ ನಡೆಸಿದ್ದ ಆರೋಗ್ಯ ಸಿಬ್ಬಂದಿ, ಆಸ್ಪತ್ರೆಗಳಲ್ಲಿನ ಹಾಸಿಗೆ, ಐಸಿಯು, ಆಮ್ಲಜನಕದ ಲಭ್ಯತೆ, ವೆಂಟಿಲೇಟರ್, ಆಂಬುಲೆನ್ಸ್ಗಳ ಲಭ್ಯತೆಯನ್ನು ಪರೀಕ್ಷಿಸಲಾಗಿತ್ತು.
ನಾಲ್ಕನೇ ಅಲೆ ಭೀತಿ ಇಲ್ಲ : ಕೊರೊನಾ ಪ್ರಕರಣಗಳು ಹೆಚ್ಚಾದರೂ ನಾಲ್ಕನೇ ಅಲೆ ಭೀತಿ ಇಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಡಾ ಮನ್ಸುಖ್ ಮಾಂಡವೀಯಾ ಈ ಹಿಂದೆ ಹೇಳಿದ್ದರು. ಈ ಪ್ರಕರಣಗಳ ಸಂಖ್ಯೆ ಮುಂದಿನ 10-12 ದಿನ ಹೆಚ್ಚಾಗಲಿದ್ದು, ಬಳಿಕ ಕಡಿಮೆಯಾಗಲಿವೆ ಎನ್ನಲಾಗಿದೆ. ಒಮಿಕ್ರಾನ್ನ ಉಪ ತಳಿಗಳ ಸೋಂಕಿತರ ಪತ್ತೆ ಹಾಗೂ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ರೂಪಿಸಿಕೊಳ್ಳಲು ಎಲ್ಲ ರಾಜ್ಯಗಳಿಗೂ ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವೀಯ ಅವರು ಕಳೆದ ಶುಕ್ರವಾರ ನಡೆದ ತುರ್ತು ಸಭೆಯಲ್ಲಿ ಸೂಚನೆ ನೀಡಿದ್ದರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…