ಆರೋಗ್ಯ

ಭಾರತದಲ್ಲಿ ಒಂದೇ ದಿನ 10 ಸಾವಿರಕ್ಕೂ ಹೆಚ್ಚು ಕೊರೊನಾ ಕೇಸ್‌ ದಾಖಲು

ಹೊಸದಿಲ್ಲಿ : ಭಾರತದಲ್ಲಿ ಮತ್ತೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ನಾಲ್ಕನೇ ಅಲೆಯ ಭೀತಿ ಶುರುವಾಗಿದೆ. ಕಳೆದ 24 ಗಂಟೆಗಳಲ್ಲಿ 10 ಸಾವಿರಕ್ಕೂ ಹೆಚ್ಚು ಕೋವಿಡ್‌-19 ಪ್ರಕರಣಗಳು ದೇಶದಲ್ಲಿ ಕಂಡುಬಂದಿವೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 10,158 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಇದು ಬುಧವಾರಕ್ಕಿಂತ ಶೇ.30ರಷ್ಟು ಹೆಚ್ಚಳವಾಗಿದೆ.

ಬುಧವಾರ 7,830 ಪ್ರಕರಣಗಳು ಪತ್ತೆಯಾಗಿದ್ದರೆ ಗುರುವಾರ 10,158 ಸೋಂಕಿನ ಪ್ರಕರಣಗಳು ಕಂಡುಬಂದಿದ್ದು, ಒಂದೇ ದಿನದಲ್ಲಿ ಕೊರೊನಾ ಸೋಂಕು ಭಾರೀ ಏರಿಕೆಯಾಗಿದೆ. ಈ ಮೂಲಕ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 44,998ಕ್ಕೆ ಏರಿದ್ದು, ಇದರೊಂದಿಗೆ ಕೋವಿಡ್‌ ಪ್ರಕರಣಗಳ ಸಂಖ್ಯೆ 4,42,10,127ಕ್ಕೆ ಏರಿಕೆಯಾಗಿದೆ.

ದಿನದ ಕೊರೊನಾ ಪಾಸಿಟಿವಿಟಿ ದರ ಶೇ.4.42ರಷ್ಟಿದ್ದರೆ, ವಾರದ ಪಾಸಿಟಿವಿಟಿ ದರ ಶೇ.4.02ರಷ್ಟಿದೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ ಒಟ್ಟು ಕೊರೊನಾ ಪ್ರಕರಣಗಳ ಶೇ.0.10ರಷ್ಟಿದೆ. ಇನ್ನು, ಆರೋಗ್ಯ ಸಚಿವಾಲಯದ ವೆಬ್‌ಸೈಟ್‌ನ ಪ್ರಕಾರ ದೇಶಾದ್ಯಂತ ಗುಣಮುಖ ಪ್ರಮಾಣ ಶೇ.98.71ರಷ್ಟಿದೆ. ಸಾವಿನ ಪ್ರಮಾಣ ಶೇ.1.19ರಷ್ಟಿದೆ.

ಭಾರತದಲ್ಲಿ ಕೊರೊನಾ ವೈರಸ್‌ ಸ್ಥಳೀಯ ಹಂತವನ್ನು ಪ್ರವೇಶಿಸಿದೆ. ಮುಂದಿನ 10 ರಿಂದ 12ದಿನಗಳವರೆಗೆ ಕೋವಿಡ್‌ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತವೆ. ಬಳಿಕ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತವೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಒಮಿಕ್ರಾನ್‌ನ XBB.1.16 ಉಪ ತಳಿ ಬಗ್ಗೆ ಯಾವುದೇ ಆತಂಕ ಬೇಡ, ಅದರ ವಿರುದ್ಧ ಕೋವಿಡ್‌ ಲಸಿಕೆಗಳು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತವೆ ಎಂದು ಆರೋಗ್ಯ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಒಮಿಕ್ರಾನ್‌ನ ಉಪ ತಳಿಗಳ ಹರಡುವಿಕೆಯು ಫೆಬ್ರವರಿಯಲ್ಲಿ ಶೇ.21.6ರಷ್ಟಿದ್ದರೆ, ಮಾರ್ಚ್‌ನಲ್ಲಿ ಶೇ.35.8ಕ್ಕೆ ಏರಿತ್ತು. ಆದರೆ, ಆಸ್ಪತ್ರೆಗೆ ದಾಖಲಾದ ಅಥವಾ ಸಾವಿನ ಯಾವುದೇ ಘಟನೆ ವರದಿಯಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಒಮಿಕ್ರಾನ್‌ನ ಆರು ಉಪ ತಳಿಗಳು ಭಾರತದಲ್ಲಿ ಕಂಡು ಬಂದಿದ್ದು, ಮುಖ್ಯವಾಗಿ ಎಕ್ಸ್‌ಬಿಬಿ1, ಬಿಎಫ್‌.7, ಎಕ್ಸ್‌ಬಿಬಿ 1.16, ಬಿಎ 2.75, ಬಿಎ 2.10.1, ಎಕ್ಸ್‌ಬಿಬಿ 1.5 ತಳಿಗಳ ಬಗ್ಗೆ ತಜ್ಞರ ತಂಡ ನಿಗಾ ಇರಿಸಿದೆ.

ಎರಡು ದಿನ ನಡೆದಿದ್ದ ಮಾಕ್‌ ಡ್ರಿಲ್‌ : ಕೊರೊನಾ ವೈರಸ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಕೊರೊನಾ ನಿರ್ವಹಣೆಗೆ ಏಪ್ರಿಲ್‌ 10 ಮತ್ತು 11ರಂದು ದೇಶಾದ್ಯಂತ ಕೊರೊನಾ ಮಾಕ್‌ ಡ್ರಿಲ್‌ ನಡೆಸಲಾಗಿತ್ತು. ದೇಶದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಣಕು ಕಾರ್ಯಾಚರಣೆ ನಡೆಸಿದ್ದ ಆರೋಗ್ಯ ಸಿಬ್ಬಂದಿ, ಆಸ್ಪತ್ರೆಗಳಲ್ಲಿನ ಹಾಸಿಗೆ, ಐಸಿಯು, ಆಮ್ಲಜನಕದ ಲಭ್ಯತೆ, ವೆಂಟಿಲೇಟರ್‌, ಆಂಬುಲೆನ್ಸ್‌ಗಳ ಲಭ್ಯತೆಯನ್ನು ಪರೀಕ್ಷಿಸಲಾಗಿತ್ತು.

ನಾಲ್ಕನೇ ಅಲೆ ಭೀತಿ ಇಲ್ಲ : ಕೊರೊನಾ ಪ್ರಕರಣಗಳು ಹೆಚ್ಚಾದರೂ ನಾಲ್ಕನೇ ಅಲೆ ಭೀತಿ ಇಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಡಾ ಮನ್ಸುಖ್‌ ಮಾಂಡವೀಯಾ ಈ ಹಿಂದೆ ಹೇಳಿದ್ದರು. ಈ ಪ್ರಕರಣಗಳ ಸಂಖ್ಯೆ ಮುಂದಿನ 10-12 ದಿನ ಹೆಚ್ಚಾಗಲಿದ್ದು, ಬಳಿಕ ಕಡಿಮೆಯಾಗಲಿವೆ ಎನ್ನಲಾಗಿದೆ. ಒಮಿಕ್ರಾನ್‌ನ ಉಪ ತಳಿಗಳ ಸೋಂಕಿತರ ಪತ್ತೆ ಹಾಗೂ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ರೂಪಿಸಿಕೊಳ್ಳಲು ಎಲ್ಲ ರಾಜ್ಯಗಳಿಗೂ ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್‌ ಮಾಂಡವೀಯ ಅವರು ಕಳೆದ ಶುಕ್ರವಾರ ನಡೆದ ತುರ್ತು ಸಭೆಯಲ್ಲಿ ಸೂಚನೆ ನೀಡಿದ್ದರು.

lokesh

Share
Published by
lokesh

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

4 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

5 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

6 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

7 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

10 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

11 hours ago