ಬೆಂಗಳೂರು : ನಗರದಲ್ಲಿ 146 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 637ಕ್ಕೆ ಏರಿಕೆಯಾಗಿದೆ.
ವಾರದಿಂದ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಸೋಂಕಿತರಲ್ಲಿ ಸದ್ಯ 41 ಮಂದಿ ಆಸ್ಪತ್ರೆ ಚಿಕಿತ್ಸೆಗೆ ಒಳಗಾಗಿದ್ದಾರೆ. ಐದು ಮಂದಿ ಐಸಿಯು, ಇಬ್ಬರು ವೆಂಟಿಲೇಟರ್ ಸಹಿತ ಐಸಿಯು ಹಾಗೂ ಒಬ್ಬರು ಎಚ್ಡಿಯು ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನುಳಿದವರಿಗೆ ಸಾಮಾನ್ಯ ಹಾಸಿಗೆಯಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ.
ವಾರದ ಅವಧಿಯಲ್ಲಿ ದೃಢಪಟ್ಟ ಪ್ರಕರಣಗಳನ್ನು ಬಿಬಿಎಂಪಿ ವಾರ್ ರೂಮ್ ವಿಶ್ಲೇಷಿಸಿದೆ. ಏಳು ದಿನಗಳಲ್ಲಿ 19,636 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 665 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಈ ಅವಧಿಯಲ್ಲಿ 498 ಮಂದಿ ಚೇತರಿಸಿಕೊಂಡಿದ್ದಾರೆ. ಒಬ್ಬರು ಮೃತಪಟ್ಟಿರುವುದು ದೃಢಪಟ್ಟಿದೆ. ಸೋಂಕು ದೃಢ ಪ್ರಮಾಣ ಸರಾಸರಿ ಶೇ 3.39ರಷ್ಟಿದೆ.
ಕಳೆದ 10 ದಿನಗಳಿಂದ ಬೆಳ್ಳಂದೂರು ವಾರ್ಡ್ನಲ್ಲಿ ಸರಾಸರಿ ನಾಲ್ಕು ಪ್ರಕರಣ, ಎಚ್.ಎಸ್.ಆರ್. ಲೇಔಟ್, ಬೇಗೂರು ಹಾಗೂ ದೊಡ್ಡ ನೆಕ್ಕುಂದಿ ವಾರ್ಡ್ನಲ್ಲಿ ಸರಾಸರಿ ಮೂರು ಪ್ರಕರಣಗಳು ದೃಢಪಡುತ್ತಿವೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…