ಆರೋಗ್ಯ

ಬೆಂಗಳೂರಿನಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ

ಬೆಂಗಳೂರು : ನಗರದಲ್ಲಿ 146 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 637ಕ್ಕೆ ಏರಿಕೆಯಾಗಿದೆ.
ವಾರದಿಂದ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಸೋಂಕಿತರಲ್ಲಿ ಸದ್ಯ 41 ಮಂದಿ ಆಸ್ಪತ್ರೆ ಚಿಕಿತ್ಸೆಗೆ ಒಳಗಾಗಿದ್ದಾರೆ. ಐದು ಮಂದಿ ಐಸಿಯು, ಇಬ್ಬರು ವೆಂಟಿಲೇಟರ್ ಸಹಿತ ಐಸಿಯು ಹಾಗೂ ಒಬ್ಬರು ಎಚ್‌ಡಿಯು ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನುಳಿದವರಿಗೆ ಸಾಮಾನ್ಯ ಹಾಸಿಗೆಯಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ.
ವಾರದ ಅವಧಿಯಲ್ಲಿ ದೃಢಪಟ್ಟ ಪ್ರಕರಣಗಳನ್ನು ಬಿಬಿಎಂಪಿ ವಾರ್‌ ರೂಮ್ ವಿಶ್ಲೇಷಿಸಿದೆ. ಏಳು ದಿನಗಳಲ್ಲಿ 19,636 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 665 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಈ ಅವಧಿಯಲ್ಲಿ 498 ಮಂದಿ ಚೇತರಿಸಿಕೊಂಡಿದ್ದಾರೆ. ಒಬ್ಬರು ಮೃತಪಟ್ಟಿರುವುದು ದೃಢಪಟ್ಟಿದೆ. ಸೋಂಕು ದೃಢ ಪ್ರಮಾಣ ಸರಾಸರಿ ಶೇ 3.39ರಷ್ಟಿದೆ.
ಕಳೆದ 10 ದಿನಗಳಿಂದ ಬೆಳ್ಳಂದೂರು ವಾರ್ಡ್‌ನಲ್ಲಿ ಸರಾಸರಿ ನಾಲ್ಕು ಪ್ರಕರಣ, ಎಚ್.ಎಸ್.ಆರ್. ಲೇಔಟ್‌, ಬೇಗೂರು ಹಾಗೂ ದೊಡ್ಡ ನೆಕ್ಕುಂದಿ ವಾರ್ಡ್‌ನಲ್ಲಿ ಸರಾಸರಿ ಮೂರು ಪ್ರಕರಣಗಳು ದೃಢಪಡುತ್ತಿವೆ.

lokesh

Share
Published by
lokesh

Recent Posts

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

38 mins ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

40 mins ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

41 mins ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

4 hours ago