ಆರೋಗ್ಯ

ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಸಿಗಲಿದೆ ಪರಿಹಾರ

ಹೊಸದಿಲ್ಲಿ: ಟಿಬಿ, ಎಚ್‌ಐವಿ, ಹೆಪಟೈಟಿಸ್ ಬಿ, ಮಧುಮೇಹದಂತಹ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಜನರಿಗೆ ಪರಿಹಾರ ನೀಡುವ ರಾಷ್ಟ್ರೀಯ ಅಗತ್ಯ ಔಷಧಿಗಳ ಪಟ್ಟಿಯನ್ನು (ಎನ್‌ಎಲ್‌ಇಎಂ) ಕೇಂದ್ರ ಸರ್ಕಾರ ಭಾನುವಾರ ಜಾರಿಗೆ ತಂದಿದೆ. ಇದರಿಂದ ಅನೇಕ ರೋಗಗಳಿಗೆ ಔಷಧಗಳು ಅಗ್ಗವಾಗಲಿವೆ. ಇದು ಪೇಟೆಂಟ್ ಔಷಧಗಳನ್ನು ಒಳಗೊಂಡಿದೆ.

ಸುಮಾರು ಏಳು ವರ್ಷಗಳ ನಂತರ ನವೀಕರಿಸಲಾದ ಈ ಪಟ್ಟಿುಂನ್ನು ಆರೋಗ್ಯ ಸಚಿವಾಲಯವು ಭಾನುವಾರ ಬಿಡುಗಡೆ ಮಾಡಿದೆ. ಇದನ್ನು ೩೫೦ ಕ್ಕೂ ಹೆಚ್ಚು ತಜ್ಞರು ಸಿದ್ಧಪಡಿಸಿದ್ದಾರೆ ಮತ್ತು ಒಟ್ಟು ೩೮೪ ಔಷಧಿಗಳನ್ನು ಒಳಗೊಂಡಿದೆ. ಇವುಗಳಲ್ಲಿ ೪ ಕ್ಯಾನ್ಸರ್ ವಿರೋಧಿ ಔಷಧಗಳು ಸೇರಿದಂತೆ ೩೪ ಹೊಸ ಔಷಧಿಗಳಿವೆ. ೨೬ ಔಷಧಗಳನ್ನೂ ತೆಗೆಯಲಾಗಿದೆ. ೨೦೧೫ರ ಪಟ್ಟಿಯಲ್ಲಿ ೩೭೬ ಔಷಧಗಳಿದ್ದವು. ಈ ಔಷಧಿಗಳನ್ನು ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ (ಎನ್‌ಪಿಪಿಎ) ನಿಗದಿಪಡಿಸಿದ ಬೆಲೆಗಿಂತ ಹೆಚ್ಚು ಮಾರಾಟ ಮಾಡುವಂತಿಲ್ಲ. ಕೋವಿಡ್ ಔಷಧಿಗಳು ಮತ್ತು ಲಸಿಕೆಗಳನ್ನು ಈ ಪಟ್ಟಿಯಲ್ಲಿ ಸೇರಿಸಲಾಗಿಲ್ಲ ಏಕೆಂದರೆ ಅವುಗಳನ್ನು ತುರ್ತು ಬಳಕೆಗೆ ಮಾತ್ರ ಅನುಮತಿಸಲಾಗಿದೆ. ಪಟ್ಟಿಯಿಂದ ಹೊರಗುಳಿದಿರುವ ಔಷಧಿಗಳಲ್ಲಿ ರಾನಿಟಿಡಿನ್, ಬ್ಲೀಚಿಂಗ್ ಪೌಡರ್, ವಿಟಮಿನ್ ಸಪ್ಲಿಮೆಂಟ್ ನಿಕೋಟಿನಮೈಡ್ ಸೇರಿವೆ.

ಮಧುಮೇಹ ವಿರೋಧಿ ಔಷಧಗಳು, ಉದಾ ಟೆನೆಲಿಗ್ಲಿಪ್ಟಿನ್, ಇನ್ಸುಲಿನ್ ಗ್ಲಾರ್ಜಿನ್ ಇಂಜೆಕ್ಷನ್. ಪ್ರತಿಜೀವಕಗಳು ಉದಾಹರಣೆಗೆ ಮೆರೊಪೆನೆಮ್, ಸೆಫುರಾಕ್ಸಿಮ್. ಸಾಮಾನ್ಯ ನೋವು ನಿವಾರಕಗಳು ಮತ್ತು ಇತರ ಔಷಧಿಗಳಾದ ವಾರ್ಫಿನ್, ಐಬುಪ್ರೊಫೇನ್, ಡಿಕ್ಲೋಫೆನಾಕ್, ಪ್ಯಾರಸಿಟವಾಲ್, ಟ್ರವಾಡಾಲ್, ಪ್ರೆಡ್ನಿಸೋಲೋನ್, ಹಾವಿನ ವಿಷಕ್ಕೆ ಪ್ರತಿವಿಷ, ಕಾರ್ಬವಾಜೆಪೈನ್, ಅಲ್ಬೆಂಡಜೋಲ್, ಐವರ್ಮೆಕ್ಟಿನ್, ಸೆಟಿರಿಜಿನ್, ಅಮೋಕ್ಸಿಸಿಲಿನ್ ಟಿಬಿ ವಿರೋಧಿ ಔಷಧಿಗಳಾದ ಬೆಡಾಕ್ವಿಲಿನ್ ಮತ್ತು ಡೆಲಾವಾನಿಡ್, ಆಂಟಿ ಎಚ್‌ಐವಿ ಡೊಲುಟೆಗ್ರಾವಿರ್, ಆಂಟಿ ಹೆಪಟೈಟಿಸ್ ಸಿ ಡಕ್ಲಾಟಾಸ್ವಿರ್ ಮುಂತಾದ ಪೇಟೆಂಟ್ ಔಷಧಗಳು ಬುಪ್ರೆನಾರ್ಫಿನ್, ನಿಕೋಟಿನ್ ರಿಪ್ಲೇಸ್‌ಮೆಂಟ್ ಥೆರಪಿಯಂತಹ ಡಿ-ಅಡಿಕ್ಷನ್ ಔಷಧಿಗಳು ಡಬಿಗಟ್ರಾನ್ ಮತ್ತು ಇಂಜೆಕ್ಷನ್ ಟೆನೆಕ್ಟೆ ಪ್ಲಸ್ ಅನ್ನು ಹೃದ್ರೋಗಗಳು ಮತ್ತು ಪಾರ್ಶ್ವವಾಯುಗಳಲ್ಲಿ ಬಳಸಲಾಗುತ್ತದೆ ರೋಟವೈರಸ್ ಲಸಿಕೆ ಭಾರತದಲ್ಲಿ ಅಭಿವೃದ್ಧಿಪಡಿಸಲಾಗಿದೆ.

ಪಟ್ಟಿಯಿಂದ ಹೊರಗುಳಿದಿರುವ ಔಷಧಿಗಳಲ್ಲಿ ರಾನಿಟಿಡಿನ್, ಬ್ಲೀಚಿಂಗ್ ಪೌಡರ್, ವಿಟಮಿನ್ ಸಪ್ಲಿಮೆಂಟ್ ನಿಕೋಟಿನಮೈಡ್ ಸೇರಿವೆ.

ಒಟ್ಟು ಔಷಧಿಗಳು ೩೮೪
೪ ಕ್ಯಾನ್ಸರ್ ವಿರೋಧಿ ಔಷಧಿಗಳು
೩೪ ಹೊಸ ಸೇರ್ಪಡೆ
೨೬ ಪಟ್ಟಿಯಿಂದ ಹೊರಕ್ಕೆ

andolana

Share
Published by
andolana

Recent Posts

ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ

ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್‌ಗೆ…

9 mins ago

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್‌

ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಕೇಂದ್ರ ಸರ್ಕಾರದ ವಿರುದ್ಧ…

31 mins ago

ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ

ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್‌…

1 hour ago

ನಟ ದರ್ಶನ್‌ 49ನೇ ಹುಟ್ಟುಹಬ್ಬಕ್ಕೆ ಪತ್ನಿ ವಿಜಯಲಕ್ಷ್ಮೀ ಶುಭಾಶಯ

ನಟ ದರ್ಶನ್‌ ಅವರಿಗೆ ಇಂದು 49ನೇ ಹುಟ್ಟುಹಬ್ಬದ ಸಂಭ್ರಮ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್‌ ಬೆಂಗಳೂರಿನ…

2 hours ago

ಹನೂರು| ಭೈರನತ್ತ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಣಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೈರನತ್ತ ಗ್ರಾಮದಲ್ಲಿ ಕಳೆದ…

2 hours ago

ಈಶಾ ಫೌಂಡೇಶನ್‌ ಬಳಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ

ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್‌ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ…

5 hours ago