ಆರೋಗ್ಯ

ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಸಿಗಲಿದೆ ಪರಿಹಾರ

ಹೊಸದಿಲ್ಲಿ: ಟಿಬಿ, ಎಚ್‌ಐವಿ, ಹೆಪಟೈಟಿಸ್ ಬಿ, ಮಧುಮೇಹದಂತಹ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಜನರಿಗೆ ಪರಿಹಾರ ನೀಡುವ ರಾಷ್ಟ್ರೀಯ ಅಗತ್ಯ ಔಷಧಿಗಳ ಪಟ್ಟಿಯನ್ನು (ಎನ್‌ಎಲ್‌ಇಎಂ) ಕೇಂದ್ರ ಸರ್ಕಾರ ಭಾನುವಾರ ಜಾರಿಗೆ ತಂದಿದೆ. ಇದರಿಂದ ಅನೇಕ ರೋಗಗಳಿಗೆ ಔಷಧಗಳು ಅಗ್ಗವಾಗಲಿವೆ. ಇದು ಪೇಟೆಂಟ್ ಔಷಧಗಳನ್ನು ಒಳಗೊಂಡಿದೆ.

ಸುಮಾರು ಏಳು ವರ್ಷಗಳ ನಂತರ ನವೀಕರಿಸಲಾದ ಈ ಪಟ್ಟಿುಂನ್ನು ಆರೋಗ್ಯ ಸಚಿವಾಲಯವು ಭಾನುವಾರ ಬಿಡುಗಡೆ ಮಾಡಿದೆ. ಇದನ್ನು ೩೫೦ ಕ್ಕೂ ಹೆಚ್ಚು ತಜ್ಞರು ಸಿದ್ಧಪಡಿಸಿದ್ದಾರೆ ಮತ್ತು ಒಟ್ಟು ೩೮೪ ಔಷಧಿಗಳನ್ನು ಒಳಗೊಂಡಿದೆ. ಇವುಗಳಲ್ಲಿ ೪ ಕ್ಯಾನ್ಸರ್ ವಿರೋಧಿ ಔಷಧಗಳು ಸೇರಿದಂತೆ ೩೪ ಹೊಸ ಔಷಧಿಗಳಿವೆ. ೨೬ ಔಷಧಗಳನ್ನೂ ತೆಗೆಯಲಾಗಿದೆ. ೨೦೧೫ರ ಪಟ್ಟಿಯಲ್ಲಿ ೩೭೬ ಔಷಧಗಳಿದ್ದವು. ಈ ಔಷಧಿಗಳನ್ನು ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ (ಎನ್‌ಪಿಪಿಎ) ನಿಗದಿಪಡಿಸಿದ ಬೆಲೆಗಿಂತ ಹೆಚ್ಚು ಮಾರಾಟ ಮಾಡುವಂತಿಲ್ಲ. ಕೋವಿಡ್ ಔಷಧಿಗಳು ಮತ್ತು ಲಸಿಕೆಗಳನ್ನು ಈ ಪಟ್ಟಿಯಲ್ಲಿ ಸೇರಿಸಲಾಗಿಲ್ಲ ಏಕೆಂದರೆ ಅವುಗಳನ್ನು ತುರ್ತು ಬಳಕೆಗೆ ಮಾತ್ರ ಅನುಮತಿಸಲಾಗಿದೆ. ಪಟ್ಟಿಯಿಂದ ಹೊರಗುಳಿದಿರುವ ಔಷಧಿಗಳಲ್ಲಿ ರಾನಿಟಿಡಿನ್, ಬ್ಲೀಚಿಂಗ್ ಪೌಡರ್, ವಿಟಮಿನ್ ಸಪ್ಲಿಮೆಂಟ್ ನಿಕೋಟಿನಮೈಡ್ ಸೇರಿವೆ.

ಮಧುಮೇಹ ವಿರೋಧಿ ಔಷಧಗಳು, ಉದಾ ಟೆನೆಲಿಗ್ಲಿಪ್ಟಿನ್, ಇನ್ಸುಲಿನ್ ಗ್ಲಾರ್ಜಿನ್ ಇಂಜೆಕ್ಷನ್. ಪ್ರತಿಜೀವಕಗಳು ಉದಾಹರಣೆಗೆ ಮೆರೊಪೆನೆಮ್, ಸೆಫುರಾಕ್ಸಿಮ್. ಸಾಮಾನ್ಯ ನೋವು ನಿವಾರಕಗಳು ಮತ್ತು ಇತರ ಔಷಧಿಗಳಾದ ವಾರ್ಫಿನ್, ಐಬುಪ್ರೊಫೇನ್, ಡಿಕ್ಲೋಫೆನಾಕ್, ಪ್ಯಾರಸಿಟವಾಲ್, ಟ್ರವಾಡಾಲ್, ಪ್ರೆಡ್ನಿಸೋಲೋನ್, ಹಾವಿನ ವಿಷಕ್ಕೆ ಪ್ರತಿವಿಷ, ಕಾರ್ಬವಾಜೆಪೈನ್, ಅಲ್ಬೆಂಡಜೋಲ್, ಐವರ್ಮೆಕ್ಟಿನ್, ಸೆಟಿರಿಜಿನ್, ಅಮೋಕ್ಸಿಸಿಲಿನ್ ಟಿಬಿ ವಿರೋಧಿ ಔಷಧಿಗಳಾದ ಬೆಡಾಕ್ವಿಲಿನ್ ಮತ್ತು ಡೆಲಾವಾನಿಡ್, ಆಂಟಿ ಎಚ್‌ಐವಿ ಡೊಲುಟೆಗ್ರಾವಿರ್, ಆಂಟಿ ಹೆಪಟೈಟಿಸ್ ಸಿ ಡಕ್ಲಾಟಾಸ್ವಿರ್ ಮುಂತಾದ ಪೇಟೆಂಟ್ ಔಷಧಗಳು ಬುಪ್ರೆನಾರ್ಫಿನ್, ನಿಕೋಟಿನ್ ರಿಪ್ಲೇಸ್‌ಮೆಂಟ್ ಥೆರಪಿಯಂತಹ ಡಿ-ಅಡಿಕ್ಷನ್ ಔಷಧಿಗಳು ಡಬಿಗಟ್ರಾನ್ ಮತ್ತು ಇಂಜೆಕ್ಷನ್ ಟೆನೆಕ್ಟೆ ಪ್ಲಸ್ ಅನ್ನು ಹೃದ್ರೋಗಗಳು ಮತ್ತು ಪಾರ್ಶ್ವವಾಯುಗಳಲ್ಲಿ ಬಳಸಲಾಗುತ್ತದೆ ರೋಟವೈರಸ್ ಲಸಿಕೆ ಭಾರತದಲ್ಲಿ ಅಭಿವೃದ್ಧಿಪಡಿಸಲಾಗಿದೆ.

ಪಟ್ಟಿಯಿಂದ ಹೊರಗುಳಿದಿರುವ ಔಷಧಿಗಳಲ್ಲಿ ರಾನಿಟಿಡಿನ್, ಬ್ಲೀಚಿಂಗ್ ಪೌಡರ್, ವಿಟಮಿನ್ ಸಪ್ಲಿಮೆಂಟ್ ನಿಕೋಟಿನಮೈಡ್ ಸೇರಿವೆ.

ಒಟ್ಟು ಔಷಧಿಗಳು ೩೮೪
೪ ಕ್ಯಾನ್ಸರ್ ವಿರೋಧಿ ಔಷಧಿಗಳು
೩೪ ಹೊಸ ಸೇರ್ಪಡೆ
೨೬ ಪಟ್ಟಿಯಿಂದ ಹೊರಕ್ಕೆ

andolana

Share
Published by
andolana

Recent Posts

‘ಕೊಲೆ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ’

ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…

3 hours ago

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

7 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

7 hours ago

ಗಾಂಧಿ ಮೈಮೇಲೆ ಬಂದಂತೆ ಬದುಕಿದ್ದ ಹುಚ್ಚೇಗೌಡರು

ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…

7 hours ago

ವಿಲಾಯತಿಗೆ ಹೊರಟವನು ಜಾತಿ ಬಾಹಿರನಾದೆ

ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…

7 hours ago