ಆರೋಗ್ಯ

ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಸಿಗಲಿದೆ ಪರಿಹಾರ

ಹೊಸದಿಲ್ಲಿ: ಟಿಬಿ, ಎಚ್‌ಐವಿ, ಹೆಪಟೈಟಿಸ್ ಬಿ, ಮಧುಮೇಹದಂತಹ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಜನರಿಗೆ ಪರಿಹಾರ ನೀಡುವ ರಾಷ್ಟ್ರೀಯ ಅಗತ್ಯ ಔಷಧಿಗಳ ಪಟ್ಟಿಯನ್ನು (ಎನ್‌ಎಲ್‌ಇಎಂ) ಕೇಂದ್ರ ಸರ್ಕಾರ ಭಾನುವಾರ ಜಾರಿಗೆ ತಂದಿದೆ. ಇದರಿಂದ ಅನೇಕ ರೋಗಗಳಿಗೆ ಔಷಧಗಳು ಅಗ್ಗವಾಗಲಿವೆ. ಇದು ಪೇಟೆಂಟ್ ಔಷಧಗಳನ್ನು ಒಳಗೊಂಡಿದೆ.

ಸುಮಾರು ಏಳು ವರ್ಷಗಳ ನಂತರ ನವೀಕರಿಸಲಾದ ಈ ಪಟ್ಟಿುಂನ್ನು ಆರೋಗ್ಯ ಸಚಿವಾಲಯವು ಭಾನುವಾರ ಬಿಡುಗಡೆ ಮಾಡಿದೆ. ಇದನ್ನು ೩೫೦ ಕ್ಕೂ ಹೆಚ್ಚು ತಜ್ಞರು ಸಿದ್ಧಪಡಿಸಿದ್ದಾರೆ ಮತ್ತು ಒಟ್ಟು ೩೮೪ ಔಷಧಿಗಳನ್ನು ಒಳಗೊಂಡಿದೆ. ಇವುಗಳಲ್ಲಿ ೪ ಕ್ಯಾನ್ಸರ್ ವಿರೋಧಿ ಔಷಧಗಳು ಸೇರಿದಂತೆ ೩೪ ಹೊಸ ಔಷಧಿಗಳಿವೆ. ೨೬ ಔಷಧಗಳನ್ನೂ ತೆಗೆಯಲಾಗಿದೆ. ೨೦೧೫ರ ಪಟ್ಟಿಯಲ್ಲಿ ೩೭೬ ಔಷಧಗಳಿದ್ದವು. ಈ ಔಷಧಿಗಳನ್ನು ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ (ಎನ್‌ಪಿಪಿಎ) ನಿಗದಿಪಡಿಸಿದ ಬೆಲೆಗಿಂತ ಹೆಚ್ಚು ಮಾರಾಟ ಮಾಡುವಂತಿಲ್ಲ. ಕೋವಿಡ್ ಔಷಧಿಗಳು ಮತ್ತು ಲಸಿಕೆಗಳನ್ನು ಈ ಪಟ್ಟಿಯಲ್ಲಿ ಸೇರಿಸಲಾಗಿಲ್ಲ ಏಕೆಂದರೆ ಅವುಗಳನ್ನು ತುರ್ತು ಬಳಕೆಗೆ ಮಾತ್ರ ಅನುಮತಿಸಲಾಗಿದೆ. ಪಟ್ಟಿಯಿಂದ ಹೊರಗುಳಿದಿರುವ ಔಷಧಿಗಳಲ್ಲಿ ರಾನಿಟಿಡಿನ್, ಬ್ಲೀಚಿಂಗ್ ಪೌಡರ್, ವಿಟಮಿನ್ ಸಪ್ಲಿಮೆಂಟ್ ನಿಕೋಟಿನಮೈಡ್ ಸೇರಿವೆ.

ಮಧುಮೇಹ ವಿರೋಧಿ ಔಷಧಗಳು, ಉದಾ ಟೆನೆಲಿಗ್ಲಿಪ್ಟಿನ್, ಇನ್ಸುಲಿನ್ ಗ್ಲಾರ್ಜಿನ್ ಇಂಜೆಕ್ಷನ್. ಪ್ರತಿಜೀವಕಗಳು ಉದಾಹರಣೆಗೆ ಮೆರೊಪೆನೆಮ್, ಸೆಫುರಾಕ್ಸಿಮ್. ಸಾಮಾನ್ಯ ನೋವು ನಿವಾರಕಗಳು ಮತ್ತು ಇತರ ಔಷಧಿಗಳಾದ ವಾರ್ಫಿನ್, ಐಬುಪ್ರೊಫೇನ್, ಡಿಕ್ಲೋಫೆನಾಕ್, ಪ್ಯಾರಸಿಟವಾಲ್, ಟ್ರವಾಡಾಲ್, ಪ್ರೆಡ್ನಿಸೋಲೋನ್, ಹಾವಿನ ವಿಷಕ್ಕೆ ಪ್ರತಿವಿಷ, ಕಾರ್ಬವಾಜೆಪೈನ್, ಅಲ್ಬೆಂಡಜೋಲ್, ಐವರ್ಮೆಕ್ಟಿನ್, ಸೆಟಿರಿಜಿನ್, ಅಮೋಕ್ಸಿಸಿಲಿನ್ ಟಿಬಿ ವಿರೋಧಿ ಔಷಧಿಗಳಾದ ಬೆಡಾಕ್ವಿಲಿನ್ ಮತ್ತು ಡೆಲಾವಾನಿಡ್, ಆಂಟಿ ಎಚ್‌ಐವಿ ಡೊಲುಟೆಗ್ರಾವಿರ್, ಆಂಟಿ ಹೆಪಟೈಟಿಸ್ ಸಿ ಡಕ್ಲಾಟಾಸ್ವಿರ್ ಮುಂತಾದ ಪೇಟೆಂಟ್ ಔಷಧಗಳು ಬುಪ್ರೆನಾರ್ಫಿನ್, ನಿಕೋಟಿನ್ ರಿಪ್ಲೇಸ್‌ಮೆಂಟ್ ಥೆರಪಿಯಂತಹ ಡಿ-ಅಡಿಕ್ಷನ್ ಔಷಧಿಗಳು ಡಬಿಗಟ್ರಾನ್ ಮತ್ತು ಇಂಜೆಕ್ಷನ್ ಟೆನೆಕ್ಟೆ ಪ್ಲಸ್ ಅನ್ನು ಹೃದ್ರೋಗಗಳು ಮತ್ತು ಪಾರ್ಶ್ವವಾಯುಗಳಲ್ಲಿ ಬಳಸಲಾಗುತ್ತದೆ ರೋಟವೈರಸ್ ಲಸಿಕೆ ಭಾರತದಲ್ಲಿ ಅಭಿವೃದ್ಧಿಪಡಿಸಲಾಗಿದೆ.

ಪಟ್ಟಿಯಿಂದ ಹೊರಗುಳಿದಿರುವ ಔಷಧಿಗಳಲ್ಲಿ ರಾನಿಟಿಡಿನ್, ಬ್ಲೀಚಿಂಗ್ ಪೌಡರ್, ವಿಟಮಿನ್ ಸಪ್ಲಿಮೆಂಟ್ ನಿಕೋಟಿನಮೈಡ್ ಸೇರಿವೆ.

ಒಟ್ಟು ಔಷಧಿಗಳು ೩೮೪
೪ ಕ್ಯಾನ್ಸರ್ ವಿರೋಧಿ ಔಷಧಿಗಳು
೩೪ ಹೊಸ ಸೇರ್ಪಡೆ
೨೬ ಪಟ್ಟಿಯಿಂದ ಹೊರಕ್ಕೆ

andolana

Share
Published by
andolana

Recent Posts

ರಾಮಚಂದ್ರರಾವ್‌ ಮೇಲಿನ ಅಮಾನತು ಆದೇಶ ರದ್ದು: ಎಚ್.ವಿಶ್ವನಾಥ್‌ ಆಕ್ಷೇಪ

ಮೈಸೂರು: ಹಿರಿಯ ಪೊಲೀಸ್‌ ಅಧಿಕಾರಿ ರಾಮಚಂದ್ರರಾವ್‌ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್‌ ಎಚ್.ವಿಶ್ವನಾಥ್‌…

27 mins ago

ಮತ್ತೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್:‌ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸಿ ಎಂದ ಗವರ್ನರ್‌

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್‌ ಅವರ ಟಿವಿಕೆ ಪಕ್ಷ…

1 hour ago

ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷ: ಇನ್ನೂ ಚೇತರಿಸಿಕೊಳ್ಳದ ಪಾಕ್‌

ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷವಾಗಿದೆ.…

2 hours ago

ಡಿಕೆಶಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರೋದು ನಿಜ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರುವುದು ನಿಜ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.…

3 hours ago

ಮೈಸೂರಿನಲ್ಲಿ ಮುಂದುವರಿದ ಕಾಡುಪ್ರಾಣಿಗಳ ಉಪಟಳ

ಮೈಸೂರು: ಮೈಸೂರಿನಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ಚಿರತೆಯೊಂದ ನಾಯಿ ಬೇಟೆಯಾಡಿರುವ ಘಟನೆ ಗೌರಿಶಂಕರನಗರದ ಗವಿಮಠದ ಹತ್ತಿರ ನಡೆದಿದೆ. ರಾತ್ರೋರಾತ್ರಿ ಚಿರತೆಯೊಂದು…

3 hours ago

ಓದುಗರ ಪತ್ರ: ಚಿನ್ನದ ಹೆಸರಿನಲ್ಲಾಗುವ ವಂಚನೆಯನ್ನು ತಡೆಗಟ್ಟಿ

ಚಿನ್ನದ ಹೂಡಿಕೆಯ ಹೆಸರಿನಲ್ಲಿ ನಡೆಯುತ್ತಿರುವ ವಂಚನೆ ಅತ್ಯಂತ ಸಂಕೀರ್ಣವೂ ಮತ್ತು ವ್ಯವಸ್ಥಿತವೂ ಆಗಿದೆ. ವಂಚಕರು ಮುಖ್ಯವಾಗಿ ಪೊಂಜಿ ಮಾದರಿಯ ಯೋಜನೆಗಳನ್ನು…

4 hours ago