ಚಿಕಿತ್ಸೆ ನಿರಾಕರಿಸಿದರೆ ಆಸ್ಪತ್ರೆಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ
ಬೆಳಗಾವಿ: ಆಯುಷ್ಮಾನ್ ಕಾರ್ಡ್ ಹೊಂದಿರುವ ರೋಗಿಗಳಿಗೆ ಯಾವುದೇ ಆಸ್ಪತ್ರೆಗಳು ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಂಥವರ ಮೇಲೆ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ..
ಶಾಸಕ ಹರತಾಳ್ ಹಾಲಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಆಯುಷ್ಮಾನ್ ಕಾರ್ಡ್ ಹೊಂದಿರುವವರಿಗೆ ಆಸ್ಪತ್ರೆಗಳು ಕಡ್ಡಾಯವಾಗಿ ಚಿಕಿತ್ಸೆಯನ್ನು ಕೊಡಲೇಬೇಕು. ಒಂದು ವೇಳೆ ಯಾರಾದರೂ ಚಿಕಿತ್ಸೆ ಕೊಡಲು ನಿರಾಕರಿಸಿರುವುದು ನನ್ನ ಗಮನಕ್ಕೆ ಬಂದರೆ ತಕ್ಷಣವೇ ಕ್ರಮ ಜರುಗಿಸುತ್ತೇನೆ ಎಂದು ಎಚ್ಚರಿಸಿದರು.
ಆಯುಷ್ಮಾನ್ ಕಾರ್ಡ್ ಪಡೆಯಬೇಕಾದರೆ ಜಿಲ್ಲಾಸ್ಪತ್ರೆಗಳಿಂದ ಶಿಫಾರಸು ಪತ್ರ ಕಡ್ಡಾಯ ಮಾಡಲಾಗಿದೆ. ಆಯುಷ್ಮಾನ್ ಭಾರತ ಆರೋಗ್ಯ , ಕರ್ನಾಟಕ ಯೋಜನೆಯಡಿ 1650 ಚಿಕಿತ್ಸೆ ಪ್ಯಾಕೇಜ್ಗಳಲ್ಲಿ 171 ತುರ್ತು ಚಿಕಿತ್ಸೆ ವಿಧಾನಗಳನ್ನು ಪಡೆಯಬಹುದು. ನೊಂದಾಯಿತ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಚಿಕಿತ್ಸೆ ನೀಡಬೇಕು. ವಿಶೇಷವಾಗಿ ತುರ್ತು ಸಂದರ್ಭಗಳಲ್ಲಿ ಯಾವುದೇ ಶಿಫಾರಸು ಪತ್ರ ಇರುವುದಿಲ್ಲ. ಅಂತಹ ಸಂದರ್ಭದಲ್ಲಿ ಕಡ್ಡಾಯವಾಗಿ ಚಿಕಿತ್ಸೆ ನೀಡಲು ವೈದ್ಯರಿಗೆ ಸೂಚಿಸಲಾಗಿದೆ ಎಂದರು.
ತುರ್ತು ಚಿಕಿತ್ಸಾ ಅವಶ್ಯಕತೆ ಇಲ್ಲದ ಸಂದರ್ಭದಲ್ಲಿ ಕಂಪ್ಯೂಟರ್ ಆಧಾರಿತ ಆನ್ಲೈನ್ ರೆಫೆರೆನ್ಸ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಇದು ದೇಶದಲ್ಲೇ ಮೊದಲ ಬಾರಿಗೆ ನಮ್ಮ ರಾಜ್ಯ ಅನುಷ್ಠಾನ ಮಾಡಿದೆ ಎಂದು ಹೇಳಿದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…