ಸ್ಯಾಂಟಿಯಾಗೊ: ಮಧ್ಯ ಚಿಲಿಯಲ್ಲಿ ಸಂಭವಿಸಿರುವ ಭಾರೀ ಕಾಡ್ಗಿಚ್ಚಿನೊಂದಿಗೆ ಅಗ್ನಿಶಾಮಕ ದಳದವರು ಸೆಣಸಾಡುತ್ತಿದ್ದು ಇದರ ನಡುವೆ ಕನಿಷ್ಠ 112 ಜನರು ಸಾವನ್ನಪ್ಪಿದ್ದಾರೆ. ಹೆಚ್ಚು ಹಾನಿಗೊಳಗಾದ ನಗರಗಳಲ್ಲಿ ಕರ್ಫ್ಯೂ ವಿಧಿದಿಸಲಾಗಿದ್ದು ಎಚ್ಚರಿಕೆ ಸಂದೇಶ ನೀಡಲಾಗಿದೆ.
1931ರಲ್ಲಿ ಸ್ಥಾಪಿಸಲಾದ ಪ್ರಸಿದ್ಧ ಸಸ್ಯೋದ್ಯಾನ ಬೆಂಕಿ ಜ್ವಾಲೆಯಿಂದ ಸಂಪೂರ್ಣ ನಾಶವಾದೆ.
ವಿನಾ ಡೆಲ್ ಮಾರ್ ನಗರದ ಸುತ್ತಲೂ ಬೆಂಕಿ ಸುಮಾರು 1,600 ಮನೆಗಳಿಲ್ಲದೆ ಸಸ್ಯ ಸಂಪತ್ತು ಸುಟ್ಟು ಬೂದಿಯಾಗಿದೆ. ಈ ಭಾಗದ ನೆರೆಹೊರೆ ನಗರಗಳಲ್ಲಿ ಹೊಗೆಯಿಂದ ಜನರು ಹೊರಬರಲಾದರೆ ತಮ್ಮ ಮನೆಗಳಲ್ಲಿ ಸಿಕ್ಕಿಹಾಕಿಕೊಂಡರು. ವಿನಾ ಡೆಲ್ ಮಾರ್ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ 200 ಜನರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜನಪ್ರಿಯ ಬೀಚ್ ರೆಸಾರ್ಟ್ಗಲು ಬೆಂಕಿಯಿಂದ ಹೆಚ್ಚು ಪರಿಣಾಮ ಬೀರಿದ್ದು ಅಲ್ಲೇ ಸುಮಾರು 64 ಜನರು ಸಾವನ್ನಪ್ಪಿದ್ದಾರೆ .ಚಿಲಿಯ ಪೋರೆನ್ಸಿಕ್ ಮೆಡಿಸಿನ್ ಸೇವೆಯ ಪ್ರಕಾರ ಒಟ್ಟಾರೆ ಸಾವಿನ ಸಂಖ್ಯೆಯನ್ನು 112 ಜನರಿಗೆ ಏರಿದೆ.
ಕುಸಿದು ಬಿದ್ದಿರುವ ಮನೆಗಳಲ್ಲಿ ರಕ್ಷಣಾ ಕಾರ್ಯಕರ್ತರು ಹುಡುಕಾಟ ನಡೆಸುತ್ತಿರುವಾಗ ಸಾವಿನ ಸಂಖ್ಯೆ ಹೆಚ್ಚಾಗಬಹುದು. ಆಸ್ಪತ್ರೆಗಳಿಗೆ ಬಂದವರಲ್ಲಿ ಕೆಲವರ ಸ್ಥಿತಿಯೂ ಗಂಭೀರವಾಗಿದೆ ಎಂದು ಅದಿಕಾರಿಗಳು ತಿಳಿಸಿದ್ದಾರೆ.
ಸದ್ಯ ದೇಶದಲ್ಲಿ ತುರ್ತ ಪರಿಸ್ಥತಿ ಘೋಷಿಸಲಾಗಿದೆ.
ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್ಮಂಗಲ…
ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…