ಅಂತಾರಾಷ್ಟ್ರೀಯ

ಜಾಪನ್‌ನಲ್ಲಿ ಒಂದೇ ದಿನ 155 ಬಾರಿ ಭೂಕಂಪನ: ಕನಿಷ್ಠ 8 ಸಾವು

ಜಪಾನ್‌: ಹೊಸ ವರ್ಷದ ಮೊಲದ ದಿನವೇ ಜಪಾನ್‌ ನಲ್ಲಿ ತೀವ್ರ ಭೂಕಂಪನ ಉಟಾಗಿದ್ದು, ದಿನವೊಂದರಲ್ಲಿಯೇ 155 ಬಾರಿ ಭೂಮಿ ಕಂಪಿಸಿದೆ. ಇದರ ಪರಿಣಾಮ ಕನಿಷ್ಟ 8 ಮಂದಿ ಸಾವನ್ನಪ್ಪಿದ್ದಾರೆ.

ವರ್ಷದ ಮೊಲದ ದಿನವೇ ಜಪಾನ್‌ ನಲ್ಲಿ ಪ್ರಬಲ ಭೂಕಂಪ ಸಂಭಿವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.4ರಿಂದ 7.6 ವರೆಗೆ ಭೂ ಕಂಪಿಸಿದೆ. ಜಪಾನ್‌ನ ಈಶಾನ್ಯ ಭಾಗದ ನನಾವೋ ಭೂಕಂಂಪನದ ಕೇಂದ್ರ ಬಿಂದುವಾಗಿದೆ ಎಂದು ವರದಿಯಾಗಿದೆ.

ಕಂಪನದಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದು, 32 ಸಾವಿರಕ್ಕೂ ಅಧಿಕ ಮಂದಿ ಕಂಪನದಿಂದ ಸಂತ್ರಸ್ಥರಾಗಿದ್ದಾರೆ.

ಭೂಕಂಪನದಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯವಾಗಿದ್ದು, ವರ್ಷದ ಮೊದಲ ದಿನವೇ ಸೆಂಟ್ರಲ್ ಜಪಾನ್ ನ ನಾಗರೀಕರು ಇಡೀ ರಾತ್ರಿ ಕತ್ತಲೆಯಲ್ಲಿ ಮುಳುಗುವಂತಾಗಿದೆ. ಜಪಾನ್ ಮಿಲಿಟರಿ ಬೇಸ್ ನಲ್ಲಿ ಕನಿಷ್ಠ ಸಾವಿರಕ್ಕೂ ಅಧಿಕ ಮಂದಿ ಆಶ್ರಯ ಪಡೆದಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಟೋಕಿಯೊ ಮತ್ತು ಇಡೀ ಕಾಂಟೊ ಪ್ರದೇಶದಲ್ಲಿ ಕಂಪನಗಳು ಸಂಭವಿಸಿವೆ. 2011 ರಲ್ಲಿ ಭೂಕಂಪದ ನಂತರ ಸುನಾಮಿಯಿಂದಾಗಿ 16 ಸಾವಿರ ಮಂದಿ ಸಾವನ್ನಪ್ಪಿದ್ದರು. ಮಾರ್ಚ್ 2011 ರಲ್ಲಿ, 9 ತೀವ್ರತೆಯ ವಿನಾಶಕಾರಿ ಸುನಾಮಿ ಸಂಭವಿಸಿದೆ. ಆಗ ಎದ್ದ ಸುನಾಮಿ ಅಲೆಗಳು ಫುಕುಶಿಮಾ ಪರಮಾಣು ಸ್ಥಾವರವನ್ನು ನಾಶಪಡಿಸಿದ್ದವು.

andolanait

Share
Published by
andolanait

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

6 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

6 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

6 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

6 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

6 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

6 hours ago