ಅಂತಾರಾಷ್ಟ್ರೀಯ

ಜಾಪನ್‌ನಲ್ಲಿ ಒಂದೇ ದಿನ 155 ಬಾರಿ ಭೂಕಂಪನ: ಕನಿಷ್ಠ 8 ಸಾವು

ಜಪಾನ್‌: ಹೊಸ ವರ್ಷದ ಮೊಲದ ದಿನವೇ ಜಪಾನ್‌ ನಲ್ಲಿ ತೀವ್ರ ಭೂಕಂಪನ ಉಟಾಗಿದ್ದು, ದಿನವೊಂದರಲ್ಲಿಯೇ 155 ಬಾರಿ ಭೂಮಿ ಕಂಪಿಸಿದೆ. ಇದರ ಪರಿಣಾಮ ಕನಿಷ್ಟ 8 ಮಂದಿ ಸಾವನ್ನಪ್ಪಿದ್ದಾರೆ.

ವರ್ಷದ ಮೊಲದ ದಿನವೇ ಜಪಾನ್‌ ನಲ್ಲಿ ಪ್ರಬಲ ಭೂಕಂಪ ಸಂಭಿವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.4ರಿಂದ 7.6 ವರೆಗೆ ಭೂ ಕಂಪಿಸಿದೆ. ಜಪಾನ್‌ನ ಈಶಾನ್ಯ ಭಾಗದ ನನಾವೋ ಭೂಕಂಂಪನದ ಕೇಂದ್ರ ಬಿಂದುವಾಗಿದೆ ಎಂದು ವರದಿಯಾಗಿದೆ.

ಕಂಪನದಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದು, 32 ಸಾವಿರಕ್ಕೂ ಅಧಿಕ ಮಂದಿ ಕಂಪನದಿಂದ ಸಂತ್ರಸ್ಥರಾಗಿದ್ದಾರೆ.

ಭೂಕಂಪನದಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯವಾಗಿದ್ದು, ವರ್ಷದ ಮೊದಲ ದಿನವೇ ಸೆಂಟ್ರಲ್ ಜಪಾನ್ ನ ನಾಗರೀಕರು ಇಡೀ ರಾತ್ರಿ ಕತ್ತಲೆಯಲ್ಲಿ ಮುಳುಗುವಂತಾಗಿದೆ. ಜಪಾನ್ ಮಿಲಿಟರಿ ಬೇಸ್ ನಲ್ಲಿ ಕನಿಷ್ಠ ಸಾವಿರಕ್ಕೂ ಅಧಿಕ ಮಂದಿ ಆಶ್ರಯ ಪಡೆದಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಟೋಕಿಯೊ ಮತ್ತು ಇಡೀ ಕಾಂಟೊ ಪ್ರದೇಶದಲ್ಲಿ ಕಂಪನಗಳು ಸಂಭವಿಸಿವೆ. 2011 ರಲ್ಲಿ ಭೂಕಂಪದ ನಂತರ ಸುನಾಮಿಯಿಂದಾಗಿ 16 ಸಾವಿರ ಮಂದಿ ಸಾವನ್ನಪ್ಪಿದ್ದರು. ಮಾರ್ಚ್ 2011 ರಲ್ಲಿ, 9 ತೀವ್ರತೆಯ ವಿನಾಶಕಾರಿ ಸುನಾಮಿ ಸಂಭವಿಸಿದೆ. ಆಗ ಎದ್ದ ಸುನಾಮಿ ಅಲೆಗಳು ಫುಕುಶಿಮಾ ಪರಮಾಣು ಸ್ಥಾವರವನ್ನು ನಾಶಪಡಿಸಿದ್ದವು.

andolanait

Share
Published by
andolanait

Recent Posts

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

1 hour ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

1 hour ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

1 hour ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

1 hour ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

1 hour ago

ರೈಲ್ವೆ ಕೆಳಸೇತುವೆ ಶಿಥಿಲ

ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ  ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…

2 hours ago