ನವದೆಹಲಿ : ಯುದ್ಧಪೀಡಿತ ಇಸ್ರೇಲ್ನಲ್ಲಿ ಸಿಲುಕಿಕೊಂಡಿದ್ದ 235 ಮಂದಿ ಭಾರತೀಯರು ಇಂದು ತಾಯ್ನಾಡಿಗೆ ಮರಳಿದ್ದಾರೆ. ಇಸ್ರೇಲ್ ಮತ್ತು ಪ್ಯಾಲೆಸ್ತೇನ್ನಲ್ಲಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರಲು ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ಆಪರೇಷನ್ ಅಜಯ್ ಕಾರ್ಯಾಚರಣೆಯನ್ನು ಆರಂಭಿಸಿದೆ.
ನಿನ್ನೆಯಷ್ಟೇ ಇಸ್ರೇಲ್ನಿಂದ 230 ಮಂದಿ ಭಾರತೀಯರು ಆಗಮಿಸಿದ್ದರು. ಇಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ 235 ಮಂದಿ ಪ್ರಯಾಣಿಕರನ್ನು ಹೊತ್ತೊಯ್ದ ವಿಮಾನವು ಮುಂಜಾನೆ ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಆಗಮಿಸಿತು.
ಭಾರತಕ್ಕೆ ಬಂದವರಲ್ಲಿ ಒಂಬತ್ತು ಮಂದಿ ಕನ್ನಡಿಗರು ಸೇರಿದ್ದಾರೆ. ಇದರಲ್ಲಿ ಮೈಸೂರಿನ ಐವರು ಹಾಗೂ ಬೆಂಗಳೂರಿನ ಬಸವನಗುಡಿಯ ನಾಲ್ಕು ಮಂದಿ ಸೇರಿದ್ದಾರೆ. ತಾಯ್ನಾಡಿಗೆ ಬಂದ ಭಾರತೀಯರನ್ನು ಕೇಂದ್ರ ಸಚಿವ ರಾಜಕುಮಾರ್ ರಾಜನ್ಸಿಂಗ್ ಅವರು ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.
ಸ್ವದೇಶಕ್ಕೆ ಬಂದ ಭಾರತೀಯರು ಕೇಂದ್ರ ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸಿದರು. ಈ ವೇಳೆ ಕೆಲವರು ಭಾವುಕರಾಗಿ ತಮ್ಮ ಪೋಷಕರು ಮತ್ತು ಸಂಬಂಕರನ್ನು ನೋಡುತ್ತಿದ್ದಂತೆ ಕಂಬನಿ ಮಿಡಿದರು. ನಾವು ಪುನಃ ನಮ್ಮ ದೇಶಕ್ಕೆ ಬರುತ್ತೇವೆಂಬ ನಂಬಿಕೆಯನ್ನೇ ಇಟ್ಟುಕೊಂಡಿರಲಿಲ್ಲ. ಅಲ್ಲಿನ ಪರಿಸ್ಥಿತಿ ನಿಜಕ್ಕೂ ಕ್ಷಣಕ್ಷಣಕ್ಕೂ ಭೀಕರವಾಗಿದೆ. ಬದುಕುತ್ತೇವೆ ಎಂಬ ಭರವಸೆಯನ್ನೇ ಕಳೆದುಕೊಂಡಿದ್ದೆವು. ಕೇಂದ್ರ ಸರ್ಕಾರ ಆಪರೇಷನ್ ಅಜಯ್ ದ ಮೂಲಕ ಭಾರತೀಯರನ್ನು ಸ್ವದೇಶಕ್ಕೆ ಕರೆಸಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು.
ಕೇಂದ್ರ ಸರ್ಕಾರಕ್ಕೆ ನಾವು ಎಷ್ಟು ಅಭಿನಂದನೆ ಸಲ್ಲಿಸಿದರೂ ಸಾಲದು. ಅತ್ಯಂತ ಕ್ಲಿಷ್ಟಕರ ಪರಿಸ್ಥಿತಿಯಲ್ಲೂ ನಾವು ಸುರಕ್ಷಿತವಾಗಿ ಬಂದಿದ್ದೇವೆ ಎಂದರೆ ಅಚ್ಚರಿಯೇ ಸರಿ. ನಮಗೆ ಕುಡಿಯಲು ಒಂದಿಷ್ಟು ನೀರು, ಹಣ್ಣು ಬಿಟ್ಟರೆ ಏನೂ ಸಿಗುತ್ತಿರಲಿಲ್ಲ. ಸರಿಯಾದ ಸಮಯಕ್ಕೆ ಕೇಂದ್ರ ಸರ್ಕಾರ ನಮ್ಮನ್ನು ಕರೆಸಿಕೊಂಡಿದೆ. ಇದಕ್ಕಾಗಿ ನಾವು ಸದಾ ಕೃತಜ್ಞತರಾಗಿರುತ್ತೇವೆ ಎಂದು ಅನೇಕರು ಭಾವುಕರಾಗಿ ಹೇಳಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…