ನವದೆಹಲಿ : ಯುದ್ಧಪೀಡಿತ ಇಸ್ರೇಲ್ನಲ್ಲಿ ಸಿಲುಕಿಕೊಂಡಿದ್ದ 235 ಮಂದಿ ಭಾರತೀಯರು ಇಂದು ತಾಯ್ನಾಡಿಗೆ ಮರಳಿದ್ದಾರೆ. ಇಸ್ರೇಲ್ ಮತ್ತು ಪ್ಯಾಲೆಸ್ತೇನ್ನಲ್ಲಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರಲು ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ಆಪರೇಷನ್ ಅಜಯ್ ಕಾರ್ಯಾಚರಣೆಯನ್ನು ಆರಂಭಿಸಿದೆ.
ನಿನ್ನೆಯಷ್ಟೇ ಇಸ್ರೇಲ್ನಿಂದ 230 ಮಂದಿ ಭಾರತೀಯರು ಆಗಮಿಸಿದ್ದರು. ಇಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ 235 ಮಂದಿ ಪ್ರಯಾಣಿಕರನ್ನು ಹೊತ್ತೊಯ್ದ ವಿಮಾನವು ಮುಂಜಾನೆ ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಆಗಮಿಸಿತು.
ಭಾರತಕ್ಕೆ ಬಂದವರಲ್ಲಿ ಒಂಬತ್ತು ಮಂದಿ ಕನ್ನಡಿಗರು ಸೇರಿದ್ದಾರೆ. ಇದರಲ್ಲಿ ಮೈಸೂರಿನ ಐವರು ಹಾಗೂ ಬೆಂಗಳೂರಿನ ಬಸವನಗುಡಿಯ ನಾಲ್ಕು ಮಂದಿ ಸೇರಿದ್ದಾರೆ. ತಾಯ್ನಾಡಿಗೆ ಬಂದ ಭಾರತೀಯರನ್ನು ಕೇಂದ್ರ ಸಚಿವ ರಾಜಕುಮಾರ್ ರಾಜನ್ಸಿಂಗ್ ಅವರು ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.
ಸ್ವದೇಶಕ್ಕೆ ಬಂದ ಭಾರತೀಯರು ಕೇಂದ್ರ ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸಿದರು. ಈ ವೇಳೆ ಕೆಲವರು ಭಾವುಕರಾಗಿ ತಮ್ಮ ಪೋಷಕರು ಮತ್ತು ಸಂಬಂಕರನ್ನು ನೋಡುತ್ತಿದ್ದಂತೆ ಕಂಬನಿ ಮಿಡಿದರು. ನಾವು ಪುನಃ ನಮ್ಮ ದೇಶಕ್ಕೆ ಬರುತ್ತೇವೆಂಬ ನಂಬಿಕೆಯನ್ನೇ ಇಟ್ಟುಕೊಂಡಿರಲಿಲ್ಲ. ಅಲ್ಲಿನ ಪರಿಸ್ಥಿತಿ ನಿಜಕ್ಕೂ ಕ್ಷಣಕ್ಷಣಕ್ಕೂ ಭೀಕರವಾಗಿದೆ. ಬದುಕುತ್ತೇವೆ ಎಂಬ ಭರವಸೆಯನ್ನೇ ಕಳೆದುಕೊಂಡಿದ್ದೆವು. ಕೇಂದ್ರ ಸರ್ಕಾರ ಆಪರೇಷನ್ ಅಜಯ್ ದ ಮೂಲಕ ಭಾರತೀಯರನ್ನು ಸ್ವದೇಶಕ್ಕೆ ಕರೆಸಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು.
ಕೇಂದ್ರ ಸರ್ಕಾರಕ್ಕೆ ನಾವು ಎಷ್ಟು ಅಭಿನಂದನೆ ಸಲ್ಲಿಸಿದರೂ ಸಾಲದು. ಅತ್ಯಂತ ಕ್ಲಿಷ್ಟಕರ ಪರಿಸ್ಥಿತಿಯಲ್ಲೂ ನಾವು ಸುರಕ್ಷಿತವಾಗಿ ಬಂದಿದ್ದೇವೆ ಎಂದರೆ ಅಚ್ಚರಿಯೇ ಸರಿ. ನಮಗೆ ಕುಡಿಯಲು ಒಂದಿಷ್ಟು ನೀರು, ಹಣ್ಣು ಬಿಟ್ಟರೆ ಏನೂ ಸಿಗುತ್ತಿರಲಿಲ್ಲ. ಸರಿಯಾದ ಸಮಯಕ್ಕೆ ಕೇಂದ್ರ ಸರ್ಕಾರ ನಮ್ಮನ್ನು ಕರೆಸಿಕೊಂಡಿದೆ. ಇದಕ್ಕಾಗಿ ನಾವು ಸದಾ ಕೃತಜ್ಞತರಾಗಿರುತ್ತೇವೆ ಎಂದು ಅನೇಕರು ಭಾವುಕರಾಗಿ ಹೇಳಿದರು.
ಮಳವಳ್ಳಿ : ಒಳಮೀಸಲಾತಿ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಪರಿಶಿಷ್ಟ ಜಾತಿಗಳನ್ನು ಒಡೆಯುವ ನೀತಿಯನ್ನು ಅನುಸರಿಸಿದೆ…
ಚಾಮರಾಜನಗರ : ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಯುಗಾದಿ, ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸೌಹಾರ್ದ ಸಭೆ…
ಮಂಡ್ಯ : 2027ರ ಜನಗಣತಿಯು ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ನಡೆಯುತ್ತಿರುವುದರಿಂದ, ಕಾರ್ಯಾಚರಣೆಯನ್ನು ದೋಷರಹಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕುಮಾರ ಅವರು ತಾಂತ್ರಿಕ…
ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ…
ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…
ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು…