ಅಂತಾರಾಷ್ಟ್ರೀಯ

ಇಸ್ರೇಲ್‍ನಿಂದ ತಾಯ್ನಾಡಿಗೆ ಸುರಕ್ಷಿತವಾಗಿ ಮರಳಿದ 235 ಭಾರತೀಯರು

ನವದೆಹಲಿ : ಯುದ್ಧಪೀಡಿತ ಇಸ್ರೇಲ್‍ನಲ್ಲಿ ಸಿಲುಕಿಕೊಂಡಿದ್ದ 235 ಮಂದಿ ಭಾರತೀಯರು ಇಂದು ತಾಯ್ನಾಡಿಗೆ ಮರಳಿದ್ದಾರೆ. ಇಸ್ರೇಲ್ ಮತ್ತು ಪ್ಯಾಲೆಸ್ತೇನ್‍ನಲ್ಲಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರಲು ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ಆಪರೇಷನ್ ಅಜಯ್ ಕಾರ್ಯಾಚರಣೆಯನ್ನು ಆರಂಭಿಸಿದೆ.

ನಿನ್ನೆಯಷ್ಟೇ ಇಸ್ರೇಲ್‍ನಿಂದ 230 ಮಂದಿ ಭಾರತೀಯರು ಆಗಮಿಸಿದ್ದರು. ಇಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ 235 ಮಂದಿ ಪ್ರಯಾಣಿಕರನ್ನು ಹೊತ್ತೊಯ್ದ ವಿಮಾನವು ಮುಂಜಾನೆ ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಆಗಮಿಸಿತು.

ಭಾರತಕ್ಕೆ ಬಂದವರಲ್ಲಿ ಒಂಬತ್ತು ಮಂದಿ ಕನ್ನಡಿಗರು ಸೇರಿದ್ದಾರೆ. ಇದರಲ್ಲಿ ಮೈಸೂರಿನ ಐವರು ಹಾಗೂ ಬೆಂಗಳೂರಿನ ಬಸವನಗುಡಿಯ ನಾಲ್ಕು ಮಂದಿ ಸೇರಿದ್ದಾರೆ. ತಾಯ್ನಾಡಿಗೆ ಬಂದ ಭಾರತೀಯರನ್ನು ಕೇಂದ್ರ ಸಚಿವ ರಾಜಕುಮಾರ್ ರಾಜನ್‍ಸಿಂಗ್ ಅವರು ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.

ಸ್ವದೇಶಕ್ಕೆ ಬಂದ ಭಾರತೀಯರು ಕೇಂದ್ರ ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸಿದರು. ಈ ವೇಳೆ ಕೆಲವರು ಭಾವುಕರಾಗಿ ತಮ್ಮ ಪೋಷಕರು ಮತ್ತು ಸಂಬಂಕರನ್ನು ನೋಡುತ್ತಿದ್ದಂತೆ ಕಂಬನಿ ಮಿಡಿದರು. ನಾವು ಪುನಃ ನಮ್ಮ ದೇಶಕ್ಕೆ ಬರುತ್ತೇವೆಂಬ ನಂಬಿಕೆಯನ್ನೇ ಇಟ್ಟುಕೊಂಡಿರಲಿಲ್ಲ. ಅಲ್ಲಿನ ಪರಿಸ್ಥಿತಿ ನಿಜಕ್ಕೂ ಕ್ಷಣಕ್ಷಣಕ್ಕೂ ಭೀಕರವಾಗಿದೆ. ಬದುಕುತ್ತೇವೆ ಎಂಬ ಭರವಸೆಯನ್ನೇ ಕಳೆದುಕೊಂಡಿದ್ದೆವು. ಕೇಂದ್ರ ಸರ್ಕಾರ ಆಪರೇಷನ್ ಅಜಯ್ ದ ಮೂಲಕ ಭಾರತೀಯರನ್ನು ಸ್ವದೇಶಕ್ಕೆ ಕರೆಸಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು.

ಕೇಂದ್ರ ಸರ್ಕಾರಕ್ಕೆ ನಾವು ಎಷ್ಟು ಅಭಿನಂದನೆ ಸಲ್ಲಿಸಿದರೂ ಸಾಲದು. ಅತ್ಯಂತ ಕ್ಲಿಷ್ಟಕರ ಪರಿಸ್ಥಿತಿಯಲ್ಲೂ ನಾವು ಸುರಕ್ಷಿತವಾಗಿ ಬಂದಿದ್ದೇವೆ ಎಂದರೆ ಅಚ್ಚರಿಯೇ ಸರಿ. ನಮಗೆ ಕುಡಿಯಲು ಒಂದಿಷ್ಟು ನೀರು, ಹಣ್ಣು ಬಿಟ್ಟರೆ ಏನೂ ಸಿಗುತ್ತಿರಲಿಲ್ಲ. ಸರಿಯಾದ ಸಮಯಕ್ಕೆ ಕೇಂದ್ರ ಸರ್ಕಾರ ನಮ್ಮನ್ನು ಕರೆಸಿಕೊಂಡಿದೆ. ಇದಕ್ಕಾಗಿ ನಾವು ಸದಾ ಕೃತಜ್ಞತರಾಗಿರುತ್ತೇವೆ ಎಂದು ಅನೇಕರು ಭಾವುಕರಾಗಿ ಹೇಳಿದರು.

andolanait

Share
Published by
andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

18 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

19 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

19 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

19 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

19 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

19 hours ago