ಅಂತಾರಾಷ್ಟ್ರೀಯ

ಹಮಾಸ್ ಉಗ್ರರಿಂದ 40 ಮಕ್ಕಳ ಶಿರಚ್ಛೇಧ

ಜೆರುಸಲೇಮ್ : ಹಮಾಸ್ ಉಗ್ರರ ಮೇಲೆ ಯುದ್ಧ ತೀವ್ರಗೊಳಿಸಿರುವ ಇಸ್ರೇಲ್, ಗಾಜಾ ಪಟ್ಟಿಯಲ್ಲಿ ನಿರಂತರ ಏರ್‌ಸ್ಟ್ರೈಕ್ ನಡೆಸುತ್ತಿದೆ. ಹಮಾಸ್ ಉಗ್ರರ ಬಿಲಗಳನ್ನು ಹುಡುಕಿ ಹುಡುಕಿ ಧ್ವಂಸ ಮಾಡುತ್ತಿದೆ. ಆದರೆ ಇಸ್ರೇಲ್ ಹೆಜ್ಜೆ ಹೆಜ್ಜೆಗೂ ಹಮಾಸ್ ಉಗ್ರರು ನಡೆಸುತ್ತಿರುವ ಭೀಕರತೆಗೆ ಬೆಚ್ಚಿ ಬೀಳುತ್ತಿದೆ. ಇಸ್ರೇಲ್ ಮಾತ್ರವಲ್ಲ ಜಗತ್ತೇ ಹಮಾಸ್ ಉಗ್ರರ ಕ್ರೂರಿ ವರ್ತನೆಗೆ ಮರುಗುತ್ತಿದೆ. ನಿರಂತರ ಪ್ರತಿದಾಳಿ ನಡೆಸುತ್ತಿರುವ ಇಸ್ರೇಲ್‌ ವಿರುದ್ಧ ಪ್ರತೀಕಾರಕ್ಕೆ ಹಮಾಸ್ ಉಗ್ರರು 40 ಇಸ್ರೇಲ್ ಮಕ್ಕಳ ಶಿರಚ್ಛೇಧ ಮಾಡಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿ ಮಾಡಿದೆ. ಈ ಕುರಿತು ವಿಡಿಯೋಗಳು ಬಹಿರಂಗವಾಗಿದೆ.

ಇಸ್ರೇಲ್‌ ಒಳ ನುಗ್ಗಿ ಹಮಾಸ್ ಉಗ್ರರು ಶನಿವಾರದಿಂದ ನಡೆಸಿರುವ ಭೀಕರ ಹತ್ಯೆಯಲ್ಲಿ 40 ಮಕ್ಕಳ ಶಿರಚ್ಚೇಧ ಮಾಡಿರುವ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಇಸ್ರೇಲ್ ಸೈನಿಕರು ಕಾರ್ಯಾಚರಣೆಯಲ್ಲಿ ಹಲವು ಭಾಗದಲ್ಲಿ ಮಕ್ಕಳು, ಪೋಷಕರು ಸೇರಿದಂತೆ ಕುಟುಂಬಗಳನ್ನೇ ಹತ್ಯೆ ಮಾಡಿರುವ ಘಟನೆಗಳೇ ಎದುರಾಗುತ್ತಿದೆ. ಇಸ್ರೇಲ್ ಮನೆಗಳ ಮೇಲೆ ದಾಳಿ ಮಾಡಿದ ಹಮಾಸ್ ಉಗ್ರರು ಶಿರಚ್ಚೇಧ ಮಾಡಿದ್ದಾರೆ. ಇದರಲ್ಲಿ 40ಕ್ಕೂ ಹೆಚ್ಚು ಮಕ್ಕಳೇ ಇದ್ದಾರೆ.

ಎಳೆ ಹಸಗೂಸು, ಒಂದು ವರ್ಷದಿಂದ 14 ವರ್ಷದ ಮಕ್ಕಳನ್ನೂ ಬಿಡದೇ ಶಿರಚ್ಛೇಧ ಮಾಡಲಾಗಿದೆ. ಇನ್ನು ಹೆಣ್ಣು ಮಕ್ಕಳು, ಮಹಿಳೆಯರು ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. ಹಲವು ಕುಟುಂಬಗಳು ತಮ್ಮ ಮಕ್ಕಳನ್ನು ರಕ್ಷಣೆ ಮಾಡಲು ಹೋಗಿ ತಾವೇ ಹಮಾಸ್ ಉಗ್ರರ ಗುಂಡೇಟಿಗೆ ಬಲಿಯಾಗಿದ್ದಾರೆ. ಇನ್ನು ಈ ಮಕ್ಕಳನ್ನು ಹಮಾಸ್ ಉಗ್ರರು ಶಿರಚ್ಚೇಧ ಮಾಡಿದ್ದಾರೆ.

900 ಇಸ್ರೇಲ್ ನಾಗರೀಕರನ್ನು ಹಮಾಸ್ ಉಗ್ರರು ಹತ್ಯೆ ಮಾಡಿದ್ದಾರೆ. 2,600 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇಸ್ರೇಲ್‌ ಒಳಗೆ ಹಮಾಸ್ ಉಗ್ರರು ನಡೆಸಿದ ಭೀಕರತೆ ಅಮೆರಿಕ ಕೆರಳಿದೆ. ಅಮೆರಿಕ ಆಪರೇಶನ್ ಫೋರ್ಸ್ ಇದೀಗ ಇಸ್ರೇಲ್‌ಗೆ ಬಂದಿಳಿದಿದೆ. ಕಾರ್ಯಾಚರಣೆ ತೀವ್ರಗೊಳ್ಳುತ್ತಿದೆ. ಗಾಜಾದ ಮೇಲಿನ ದಾಳಿ ಜೊತೆಗೆ ಇಸ್ರೇಲ್ ಒಳಗಿರುವ ಹಮಾಸ್ ಉಗ್ರರ ಸದೆಬಡಿಯಲು ಕಾರ್ಯಾಚರಣೆ ತೀವ್ರಗೊಂಡಿದೆ.

lokesh

Share
Published by
lokesh

Recent Posts

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

10 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

1 hour ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

2 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

2 hours ago