ಅಂತಾರಾಷ್ಟ್ರೀಯ

ಹಮಾಸ್ ಉಗ್ರರಿಂದ 40 ಮಕ್ಕಳ ಶಿರಚ್ಛೇಧ

ಜೆರುಸಲೇಮ್ : ಹಮಾಸ್ ಉಗ್ರರ ಮೇಲೆ ಯುದ್ಧ ತೀವ್ರಗೊಳಿಸಿರುವ ಇಸ್ರೇಲ್, ಗಾಜಾ ಪಟ್ಟಿಯಲ್ಲಿ ನಿರಂತರ ಏರ್‌ಸ್ಟ್ರೈಕ್ ನಡೆಸುತ್ತಿದೆ. ಹಮಾಸ್ ಉಗ್ರರ ಬಿಲಗಳನ್ನು ಹುಡುಕಿ ಹುಡುಕಿ ಧ್ವಂಸ ಮಾಡುತ್ತಿದೆ. ಆದರೆ ಇಸ್ರೇಲ್ ಹೆಜ್ಜೆ ಹೆಜ್ಜೆಗೂ ಹಮಾಸ್ ಉಗ್ರರು ನಡೆಸುತ್ತಿರುವ ಭೀಕರತೆಗೆ ಬೆಚ್ಚಿ ಬೀಳುತ್ತಿದೆ. ಇಸ್ರೇಲ್ ಮಾತ್ರವಲ್ಲ ಜಗತ್ತೇ ಹಮಾಸ್ ಉಗ್ರರ ಕ್ರೂರಿ ವರ್ತನೆಗೆ ಮರುಗುತ್ತಿದೆ. ನಿರಂತರ ಪ್ರತಿದಾಳಿ ನಡೆಸುತ್ತಿರುವ ಇಸ್ರೇಲ್‌ ವಿರುದ್ಧ ಪ್ರತೀಕಾರಕ್ಕೆ ಹಮಾಸ್ ಉಗ್ರರು 40 ಇಸ್ರೇಲ್ ಮಕ್ಕಳ ಶಿರಚ್ಛೇಧ ಮಾಡಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿ ಮಾಡಿದೆ. ಈ ಕುರಿತು ವಿಡಿಯೋಗಳು ಬಹಿರಂಗವಾಗಿದೆ.

ಇಸ್ರೇಲ್‌ ಒಳ ನುಗ್ಗಿ ಹಮಾಸ್ ಉಗ್ರರು ಶನಿವಾರದಿಂದ ನಡೆಸಿರುವ ಭೀಕರ ಹತ್ಯೆಯಲ್ಲಿ 40 ಮಕ್ಕಳ ಶಿರಚ್ಚೇಧ ಮಾಡಿರುವ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಇಸ್ರೇಲ್ ಸೈನಿಕರು ಕಾರ್ಯಾಚರಣೆಯಲ್ಲಿ ಹಲವು ಭಾಗದಲ್ಲಿ ಮಕ್ಕಳು, ಪೋಷಕರು ಸೇರಿದಂತೆ ಕುಟುಂಬಗಳನ್ನೇ ಹತ್ಯೆ ಮಾಡಿರುವ ಘಟನೆಗಳೇ ಎದುರಾಗುತ್ತಿದೆ. ಇಸ್ರೇಲ್ ಮನೆಗಳ ಮೇಲೆ ದಾಳಿ ಮಾಡಿದ ಹಮಾಸ್ ಉಗ್ರರು ಶಿರಚ್ಚೇಧ ಮಾಡಿದ್ದಾರೆ. ಇದರಲ್ಲಿ 40ಕ್ಕೂ ಹೆಚ್ಚು ಮಕ್ಕಳೇ ಇದ್ದಾರೆ.

ಎಳೆ ಹಸಗೂಸು, ಒಂದು ವರ್ಷದಿಂದ 14 ವರ್ಷದ ಮಕ್ಕಳನ್ನೂ ಬಿಡದೇ ಶಿರಚ್ಛೇಧ ಮಾಡಲಾಗಿದೆ. ಇನ್ನು ಹೆಣ್ಣು ಮಕ್ಕಳು, ಮಹಿಳೆಯರು ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. ಹಲವು ಕುಟುಂಬಗಳು ತಮ್ಮ ಮಕ್ಕಳನ್ನು ರಕ್ಷಣೆ ಮಾಡಲು ಹೋಗಿ ತಾವೇ ಹಮಾಸ್ ಉಗ್ರರ ಗುಂಡೇಟಿಗೆ ಬಲಿಯಾಗಿದ್ದಾರೆ. ಇನ್ನು ಈ ಮಕ್ಕಳನ್ನು ಹಮಾಸ್ ಉಗ್ರರು ಶಿರಚ್ಚೇಧ ಮಾಡಿದ್ದಾರೆ.

900 ಇಸ್ರೇಲ್ ನಾಗರೀಕರನ್ನು ಹಮಾಸ್ ಉಗ್ರರು ಹತ್ಯೆ ಮಾಡಿದ್ದಾರೆ. 2,600 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇಸ್ರೇಲ್‌ ಒಳಗೆ ಹಮಾಸ್ ಉಗ್ರರು ನಡೆಸಿದ ಭೀಕರತೆ ಅಮೆರಿಕ ಕೆರಳಿದೆ. ಅಮೆರಿಕ ಆಪರೇಶನ್ ಫೋರ್ಸ್ ಇದೀಗ ಇಸ್ರೇಲ್‌ಗೆ ಬಂದಿಳಿದಿದೆ. ಕಾರ್ಯಾಚರಣೆ ತೀವ್ರಗೊಳ್ಳುತ್ತಿದೆ. ಗಾಜಾದ ಮೇಲಿನ ದಾಳಿ ಜೊತೆಗೆ ಇಸ್ರೇಲ್ ಒಳಗಿರುವ ಹಮಾಸ್ ಉಗ್ರರ ಸದೆಬಡಿಯಲು ಕಾರ್ಯಾಚರಣೆ ತೀವ್ರಗೊಂಡಿದೆ.

lokesh

Share
Published by
lokesh

Recent Posts

ಟಿ20 ವಿಶ್ವಕಪ್‌ : ಇಟಲಿ ವಿರುದ್ಧ ವೆಸ್ಟ್‌ ಇಂಡೀಸ್‌ಗೆ ಸುಲಭ ಜಯ

ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…

3 hours ago

ಟಿ20 ವಿಶ್ವಕಪ್ | ಭರ್ಜರಿ ಜಯ ; ಶ್ರೀಲಂಕಾ ಸೋಲಿಸಿ ಸೂಪರ್ 8ಗೆ ಲಗ್ಗೆ ಇಟ್ಟ ಜಿಂಬಾಬ್ವೆ

ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…

3 hours ago

ದ್ವಿತೀಯ ಪಿಯುಸಿ | ಮೈಸೂರು ಟಾಪ್‌ 10ರೊಳಗೆ ಸ್ಥಾನ ಪಡೆಯಲು ಶ್ರಮಿಸಿ

ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…

4 hours ago

ಎಐ ಭಾರತದ ಭವಿಷ್ಯ ; ನಿಯಂತ್ರಣ ನಮ್ಮ ಕೈಯಲ್ಲಿರಲಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…

4 hours ago

ಬಂಡೀಪುರ ಸಫಾರಿ ಪರ-ವಿರೋಧ ಜಟಾಪಟಿ ; ರೈತರು, ಸಫಾರಿ ಬೆಂಬಲಿತರು ಪೊಲೀಸರ ವಶಕ್ಕೆ.

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…

5 hours ago

ಬೂದನೂರು ಉತ್ಸವ : ನಾಳೆಯಿಂದ ಹೆಲಿ ಟೂರಿಸಂ

ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…

5 hours ago