ಅಂತಾರಾಷ್ಟ್ರೀಯ

ಹಮಾಸ್ ಉಗ್ರರಿಂದ 40 ಮಕ್ಕಳ ಶಿರಚ್ಛೇಧ

ಜೆರುಸಲೇಮ್ : ಹಮಾಸ್ ಉಗ್ರರ ಮೇಲೆ ಯುದ್ಧ ತೀವ್ರಗೊಳಿಸಿರುವ ಇಸ್ರೇಲ್, ಗಾಜಾ ಪಟ್ಟಿಯಲ್ಲಿ ನಿರಂತರ ಏರ್‌ಸ್ಟ್ರೈಕ್ ನಡೆಸುತ್ತಿದೆ. ಹಮಾಸ್ ಉಗ್ರರ ಬಿಲಗಳನ್ನು ಹುಡುಕಿ ಹುಡುಕಿ ಧ್ವಂಸ ಮಾಡುತ್ತಿದೆ. ಆದರೆ ಇಸ್ರೇಲ್ ಹೆಜ್ಜೆ ಹೆಜ್ಜೆಗೂ ಹಮಾಸ್ ಉಗ್ರರು ನಡೆಸುತ್ತಿರುವ ಭೀಕರತೆಗೆ ಬೆಚ್ಚಿ ಬೀಳುತ್ತಿದೆ. ಇಸ್ರೇಲ್ ಮಾತ್ರವಲ್ಲ ಜಗತ್ತೇ ಹಮಾಸ್ ಉಗ್ರರ ಕ್ರೂರಿ ವರ್ತನೆಗೆ ಮರುಗುತ್ತಿದೆ. ನಿರಂತರ ಪ್ರತಿದಾಳಿ ನಡೆಸುತ್ತಿರುವ ಇಸ್ರೇಲ್‌ ವಿರುದ್ಧ ಪ್ರತೀಕಾರಕ್ಕೆ ಹಮಾಸ್ ಉಗ್ರರು 40 ಇಸ್ರೇಲ್ ಮಕ್ಕಳ ಶಿರಚ್ಛೇಧ ಮಾಡಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿ ಮಾಡಿದೆ. ಈ ಕುರಿತು ವಿಡಿಯೋಗಳು ಬಹಿರಂಗವಾಗಿದೆ.

ಇಸ್ರೇಲ್‌ ಒಳ ನುಗ್ಗಿ ಹಮಾಸ್ ಉಗ್ರರು ಶನಿವಾರದಿಂದ ನಡೆಸಿರುವ ಭೀಕರ ಹತ್ಯೆಯಲ್ಲಿ 40 ಮಕ್ಕಳ ಶಿರಚ್ಚೇಧ ಮಾಡಿರುವ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಇಸ್ರೇಲ್ ಸೈನಿಕರು ಕಾರ್ಯಾಚರಣೆಯಲ್ಲಿ ಹಲವು ಭಾಗದಲ್ಲಿ ಮಕ್ಕಳು, ಪೋಷಕರು ಸೇರಿದಂತೆ ಕುಟುಂಬಗಳನ್ನೇ ಹತ್ಯೆ ಮಾಡಿರುವ ಘಟನೆಗಳೇ ಎದುರಾಗುತ್ತಿದೆ. ಇಸ್ರೇಲ್ ಮನೆಗಳ ಮೇಲೆ ದಾಳಿ ಮಾಡಿದ ಹಮಾಸ್ ಉಗ್ರರು ಶಿರಚ್ಚೇಧ ಮಾಡಿದ್ದಾರೆ. ಇದರಲ್ಲಿ 40ಕ್ಕೂ ಹೆಚ್ಚು ಮಕ್ಕಳೇ ಇದ್ದಾರೆ.

ಎಳೆ ಹಸಗೂಸು, ಒಂದು ವರ್ಷದಿಂದ 14 ವರ್ಷದ ಮಕ್ಕಳನ್ನೂ ಬಿಡದೇ ಶಿರಚ್ಛೇಧ ಮಾಡಲಾಗಿದೆ. ಇನ್ನು ಹೆಣ್ಣು ಮಕ್ಕಳು, ಮಹಿಳೆಯರು ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. ಹಲವು ಕುಟುಂಬಗಳು ತಮ್ಮ ಮಕ್ಕಳನ್ನು ರಕ್ಷಣೆ ಮಾಡಲು ಹೋಗಿ ತಾವೇ ಹಮಾಸ್ ಉಗ್ರರ ಗುಂಡೇಟಿಗೆ ಬಲಿಯಾಗಿದ್ದಾರೆ. ಇನ್ನು ಈ ಮಕ್ಕಳನ್ನು ಹಮಾಸ್ ಉಗ್ರರು ಶಿರಚ್ಚೇಧ ಮಾಡಿದ್ದಾರೆ.

900 ಇಸ್ರೇಲ್ ನಾಗರೀಕರನ್ನು ಹಮಾಸ್ ಉಗ್ರರು ಹತ್ಯೆ ಮಾಡಿದ್ದಾರೆ. 2,600 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇಸ್ರೇಲ್‌ ಒಳಗೆ ಹಮಾಸ್ ಉಗ್ರರು ನಡೆಸಿದ ಭೀಕರತೆ ಅಮೆರಿಕ ಕೆರಳಿದೆ. ಅಮೆರಿಕ ಆಪರೇಶನ್ ಫೋರ್ಸ್ ಇದೀಗ ಇಸ್ರೇಲ್‌ಗೆ ಬಂದಿಳಿದಿದೆ. ಕಾರ್ಯಾಚರಣೆ ತೀವ್ರಗೊಳ್ಳುತ್ತಿದೆ. ಗಾಜಾದ ಮೇಲಿನ ದಾಳಿ ಜೊತೆಗೆ ಇಸ್ರೇಲ್ ಒಳಗಿರುವ ಹಮಾಸ್ ಉಗ್ರರ ಸದೆಬಡಿಯಲು ಕಾರ್ಯಾಚರಣೆ ತೀವ್ರಗೊಂಡಿದೆ.

lokesh

Share
Published by
lokesh

Recent Posts

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

14 mins ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

1 hour ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

1 hour ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

5 hours ago

ಓದುಗರ ಪತ್ರ: ಮಾದಾಪುರ ಪ್ರೌಢಶಾಲೆಗೆ ಇಂಗ್ಲಿಷ್ ಶಿಕ್ಷಕರನ್ನು ನೇಮಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರು ಇಲ್ಲದೆ ವಿದ್ಯಾರ್ಥಿಗಳು ಈ ಪ್ರೌಢಶಾಲೆಗೆ ಸೇರಲು ಹಿಂದೇಟು ಹಾಕುತ್ತಿದ್ದಾರೆ.…

10 hours ago

ಓದುಗರ ಪತ್ರ: ದೇವೇಗೌಡರ ಹಿಂದಿನ ಶಕ್ತಿ ಚನ್ನಮ್ಮ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಪತ್ನಿ ಚನ್ನಮ್ಮ ನವರು ಅವರ ರಾಜಕೀಯ ಜೀವನದಲ್ಲಿ ದೊಡ್ಡ ಶಕ್ತಿಯಾಗಿ ನಿಂತಿದ್ದರು. ಅಂದು ತಮ್ಮ…

10 hours ago