ಅಂತಾರಾಷ್ಟ್ರೀಯ

ಹಮಾಸ್ ಉಗ್ರರಿಂದ 40 ಮಕ್ಕಳ ಶಿರಚ್ಛೇಧ

ಜೆರುಸಲೇಮ್ : ಹಮಾಸ್ ಉಗ್ರರ ಮೇಲೆ ಯುದ್ಧ ತೀವ್ರಗೊಳಿಸಿರುವ ಇಸ್ರೇಲ್, ಗಾಜಾ ಪಟ್ಟಿಯಲ್ಲಿ ನಿರಂತರ ಏರ್‌ಸ್ಟ್ರೈಕ್ ನಡೆಸುತ್ತಿದೆ. ಹಮಾಸ್ ಉಗ್ರರ ಬಿಲಗಳನ್ನು ಹುಡುಕಿ ಹುಡುಕಿ ಧ್ವಂಸ ಮಾಡುತ್ತಿದೆ. ಆದರೆ ಇಸ್ರೇಲ್ ಹೆಜ್ಜೆ ಹೆಜ್ಜೆಗೂ ಹಮಾಸ್ ಉಗ್ರರು ನಡೆಸುತ್ತಿರುವ ಭೀಕರತೆಗೆ ಬೆಚ್ಚಿ ಬೀಳುತ್ತಿದೆ. ಇಸ್ರೇಲ್ ಮಾತ್ರವಲ್ಲ ಜಗತ್ತೇ ಹಮಾಸ್ ಉಗ್ರರ ಕ್ರೂರಿ ವರ್ತನೆಗೆ ಮರುಗುತ್ತಿದೆ. ನಿರಂತರ ಪ್ರತಿದಾಳಿ ನಡೆಸುತ್ತಿರುವ ಇಸ್ರೇಲ್‌ ವಿರುದ್ಧ ಪ್ರತೀಕಾರಕ್ಕೆ ಹಮಾಸ್ ಉಗ್ರರು 40 ಇಸ್ರೇಲ್ ಮಕ್ಕಳ ಶಿರಚ್ಛೇಧ ಮಾಡಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿ ಮಾಡಿದೆ. ಈ ಕುರಿತು ವಿಡಿಯೋಗಳು ಬಹಿರಂಗವಾಗಿದೆ.

ಇಸ್ರೇಲ್‌ ಒಳ ನುಗ್ಗಿ ಹಮಾಸ್ ಉಗ್ರರು ಶನಿವಾರದಿಂದ ನಡೆಸಿರುವ ಭೀಕರ ಹತ್ಯೆಯಲ್ಲಿ 40 ಮಕ್ಕಳ ಶಿರಚ್ಚೇಧ ಮಾಡಿರುವ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಇಸ್ರೇಲ್ ಸೈನಿಕರು ಕಾರ್ಯಾಚರಣೆಯಲ್ಲಿ ಹಲವು ಭಾಗದಲ್ಲಿ ಮಕ್ಕಳು, ಪೋಷಕರು ಸೇರಿದಂತೆ ಕುಟುಂಬಗಳನ್ನೇ ಹತ್ಯೆ ಮಾಡಿರುವ ಘಟನೆಗಳೇ ಎದುರಾಗುತ್ತಿದೆ. ಇಸ್ರೇಲ್ ಮನೆಗಳ ಮೇಲೆ ದಾಳಿ ಮಾಡಿದ ಹಮಾಸ್ ಉಗ್ರರು ಶಿರಚ್ಚೇಧ ಮಾಡಿದ್ದಾರೆ. ಇದರಲ್ಲಿ 40ಕ್ಕೂ ಹೆಚ್ಚು ಮಕ್ಕಳೇ ಇದ್ದಾರೆ.

ಎಳೆ ಹಸಗೂಸು, ಒಂದು ವರ್ಷದಿಂದ 14 ವರ್ಷದ ಮಕ್ಕಳನ್ನೂ ಬಿಡದೇ ಶಿರಚ್ಛೇಧ ಮಾಡಲಾಗಿದೆ. ಇನ್ನು ಹೆಣ್ಣು ಮಕ್ಕಳು, ಮಹಿಳೆಯರು ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. ಹಲವು ಕುಟುಂಬಗಳು ತಮ್ಮ ಮಕ್ಕಳನ್ನು ರಕ್ಷಣೆ ಮಾಡಲು ಹೋಗಿ ತಾವೇ ಹಮಾಸ್ ಉಗ್ರರ ಗುಂಡೇಟಿಗೆ ಬಲಿಯಾಗಿದ್ದಾರೆ. ಇನ್ನು ಈ ಮಕ್ಕಳನ್ನು ಹಮಾಸ್ ಉಗ್ರರು ಶಿರಚ್ಚೇಧ ಮಾಡಿದ್ದಾರೆ.

900 ಇಸ್ರೇಲ್ ನಾಗರೀಕರನ್ನು ಹಮಾಸ್ ಉಗ್ರರು ಹತ್ಯೆ ಮಾಡಿದ್ದಾರೆ. 2,600 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇಸ್ರೇಲ್‌ ಒಳಗೆ ಹಮಾಸ್ ಉಗ್ರರು ನಡೆಸಿದ ಭೀಕರತೆ ಅಮೆರಿಕ ಕೆರಳಿದೆ. ಅಮೆರಿಕ ಆಪರೇಶನ್ ಫೋರ್ಸ್ ಇದೀಗ ಇಸ್ರೇಲ್‌ಗೆ ಬಂದಿಳಿದಿದೆ. ಕಾರ್ಯಾಚರಣೆ ತೀವ್ರಗೊಳ್ಳುತ್ತಿದೆ. ಗಾಜಾದ ಮೇಲಿನ ದಾಳಿ ಜೊತೆಗೆ ಇಸ್ರೇಲ್ ಒಳಗಿರುವ ಹಮಾಸ್ ಉಗ್ರರ ಸದೆಬಡಿಯಲು ಕಾರ್ಯಾಚರಣೆ ತೀವ್ರಗೊಂಡಿದೆ.

lokesh

Share
Published by
lokesh

Recent Posts

ಡಿಕೆಶಿ ಸರ್ಕಾರಕ್ಕೆ ಶತದಿನಗಳ ಸಂಭ್ರಮ ; ಬಣ್ಣ ಬಣ್ಣದ ಬೆಳಕಿನಲ್ಲಿ ಝಗಮಗಿಸಲಿದೆ ಮೈಸೂರು ಅರಮನೆ

ಮೈಸೂರು :  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…

8 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ ; ಜಿಲ್ಲಾಧಿಕಾರ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ

ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…

13 hours ago

ಹೊಸ ಪರಿಕಲ್ಪನೆಯೊಂದಿಗೆ ದೀಪಾಲಂಕಾರ ರೂಪಿಸಿ ; ರಮೇಶ್‌ ಬಂಡಿಸಿದ್ದೇಗೌಡ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…

13 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ: ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…

17 hours ago

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ED ಶಾಕ್‌

ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…

18 hours ago

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…

23 hours ago