ಅಂತಾರಾಷ್ಟ್ರೀಯ

ಚೀನಾದಲ್ಲಿ 6.1ರ ತೀವ್ರತೆಯ ಭೂಕಂಪ: ಅಪಾರ ಸಾವು ನೋವು

ನವದೆಹಲಿ: ವಾಯವ್ಯ ಚೀನಾದ ಗನ್ನು- ಕ್ವಿಂಫೈ ಗಡಿಯಲ್ಲಿ ಸೋಮವಾರ ಮಧ್ಯರಾತ್ರಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಭಾರಿ ಪ್ರಮಾಣದ ಸಾವು ನೋವುಗಳುಂಟಾಗಿರುವ ಬಗ್ಗೆ ವರದಿಯಾಗಿದೆ. ಅಪಾರ ಪ್ರಮಾಣದ ಆಸ್ತಿಗಳಿಗೂ ವ್ಯಾಪಕ ಹಾನಿಯಾಗಿದ್ದು, ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.1ರಷ್ಟಿತ್ತು ಎಂದು ಮೂಲಗಳು ಹೇಳಿವೆ.

ಗನ್ನು- ಕ್ವಿಂಫೈ ಗಡಿಯಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮಡಿದವರ ಸಂಖ್ಯೆ 100ನ್ನು ದಾಟಿದೆ ಎಂದು ಅಧಿಕೃತ ಸುದ್ದಿಸಂಸ್ಥೆ ಕ್ಸಿಗ್ಗುವಾ ವರದಿ ಮಾಡಿದೆ.

ಗನ್ನು ಮತ್ತು ಪಕ್ಕದ ಕ್ವಿಂಫೈ ಪ್ರಾಂತ್ಯದಲ್ಲಿ ಹಲವು ಬಾರಿ ಲಘು ಕಂಪನಗಳೂ ಸಂಭವಿಸಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಮುಂದುವರಿದಿವೆ ಎಂದು ವರದಿ ಹೇಳಿದೆ. ಸ್ಥಳೀಯ ಕಾಲಮಾನದ ಪ್ರಕಾರ ಸೋಮವಾರ ರಾತ್ರಿ 11.59ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆ 6.1ರಷ್ಟಿತ್ತು ಎಂದು ಯೂರೋಪಿಯನ್ ಮೆಡಿಟರೇನಿಯನ್ ಭೂಕಂಪ ಮಾಪನ ಕೇಂದ್ರ ಸ್ಪಷ್ಟಪಡಿಸಿದೆ

ಚೀನಾದ ಲಕ್ಷ್ಮೀಹು ಪಟ್ಟಣದಿಂದ ವಾಯವ್ಯಕ್ಕೆ 102 ಕಿಲೋಮೀಟರ್ ದೂರದಲ್ಲಿ: ಕಿಲೋಮೀಟರ್ ಆಳದಲ್ಲಿ ಈ ಕಂಪನ ಸಂಭವಿಸಿದೆ ಎಂದು ಇಎಂಎಸ್ ಸಿ ವಿವರಿಸಿದೆ. ಚೀನಾದ ವಿಕೋಪ ತಡೆ ಮತ್ತು ಪರಿಹಾರಗಳ ರಾಷ್ಟ್ರೀಯ ಆಯೋಗ, ತುರ್ತು ನಿರ್ವಹಣೆ ಸಚಿವಾಲಯ 4ನೇ ಹಂತದ ತುರ್ತು ವಿಕೋಪ ಪರಿಹಾರ ಕಾರ್ಯಾಚರಣೆಯನ್ನು ಆರಂಭಿಸಿದೆ ಎಂದು ಕ್ಸಿನ್ನುವಾ ಹೇಳಿದೆ.

ಈಗಾಗಲೇ ನಿಯೋಜಿತವಾಗಿರುವ ಕಾರ್ಯಪಡೆ ಭೂಕಂಪ ಪೀಡಿತ ಪ್ರದೇಶಗಳಲ್ಲಿ ಈ ವಿಕೋಪದ ಪರಿಣಾಮವನ್ನು ಅಂದಾಜಿಸುತ್ತಿದ್ದು, ಸ್ಥಳೀಯ ಪರಿಹಾರ ಕಾರ್ಯಾಚರಣೆಗಳಿಗೆ ಮಾರ್ಗದರ್ಶನ ನೀಡುತ್ತಿದೆ.

andolanait

Share
Published by
andolanait

Recent Posts

ಸದನದ ಘನತೆಗೆ ಧಕ್ಕೆ ಆರೋಪ : ಶಾಸಕ ಶಿವಲಿಂಗೇಗೌಡ ವಜಾಕ್ಕೆ ಆಗ್ರಹ

ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…

14 mins ago

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…

1 hour ago

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

2 hours ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

2 hours ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

2 hours ago

ನಾಳೆ,ನಾಡಿದ್ದು ಮೈಸೂರಿನ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

ಮೈಸೂರು : ವಿ.ವಿ ಮೊಹಲ್ಲಾ ಉಪವಿಭಾಗ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕೆಲಸದ ನಿಮಿತ್ತ ಫೆ.6 ಮತ್ತು 7 ರಂದು…

3 hours ago