ಅಂತಾರಾಷ್ಟ್ರೀಯ

ಚೀನಾದಲ್ಲಿ 6.1ರ ತೀವ್ರತೆಯ ಭೂಕಂಪ: ಅಪಾರ ಸಾವು ನೋವು

ನವದೆಹಲಿ: ವಾಯವ್ಯ ಚೀನಾದ ಗನ್ನು- ಕ್ವಿಂಫೈ ಗಡಿಯಲ್ಲಿ ಸೋಮವಾರ ಮಧ್ಯರಾತ್ರಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಭಾರಿ ಪ್ರಮಾಣದ ಸಾವು ನೋವುಗಳುಂಟಾಗಿರುವ ಬಗ್ಗೆ ವರದಿಯಾಗಿದೆ. ಅಪಾರ ಪ್ರಮಾಣದ ಆಸ್ತಿಗಳಿಗೂ ವ್ಯಾಪಕ ಹಾನಿಯಾಗಿದ್ದು, ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.1ರಷ್ಟಿತ್ತು ಎಂದು ಮೂಲಗಳು ಹೇಳಿವೆ.

ಗನ್ನು- ಕ್ವಿಂಫೈ ಗಡಿಯಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮಡಿದವರ ಸಂಖ್ಯೆ 100ನ್ನು ದಾಟಿದೆ ಎಂದು ಅಧಿಕೃತ ಸುದ್ದಿಸಂಸ್ಥೆ ಕ್ಸಿಗ್ಗುವಾ ವರದಿ ಮಾಡಿದೆ.

ಗನ್ನು ಮತ್ತು ಪಕ್ಕದ ಕ್ವಿಂಫೈ ಪ್ರಾಂತ್ಯದಲ್ಲಿ ಹಲವು ಬಾರಿ ಲಘು ಕಂಪನಗಳೂ ಸಂಭವಿಸಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಮುಂದುವರಿದಿವೆ ಎಂದು ವರದಿ ಹೇಳಿದೆ. ಸ್ಥಳೀಯ ಕಾಲಮಾನದ ಪ್ರಕಾರ ಸೋಮವಾರ ರಾತ್ರಿ 11.59ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆ 6.1ರಷ್ಟಿತ್ತು ಎಂದು ಯೂರೋಪಿಯನ್ ಮೆಡಿಟರೇನಿಯನ್ ಭೂಕಂಪ ಮಾಪನ ಕೇಂದ್ರ ಸ್ಪಷ್ಟಪಡಿಸಿದೆ

ಚೀನಾದ ಲಕ್ಷ್ಮೀಹು ಪಟ್ಟಣದಿಂದ ವಾಯವ್ಯಕ್ಕೆ 102 ಕಿಲೋಮೀಟರ್ ದೂರದಲ್ಲಿ: ಕಿಲೋಮೀಟರ್ ಆಳದಲ್ಲಿ ಈ ಕಂಪನ ಸಂಭವಿಸಿದೆ ಎಂದು ಇಎಂಎಸ್ ಸಿ ವಿವರಿಸಿದೆ. ಚೀನಾದ ವಿಕೋಪ ತಡೆ ಮತ್ತು ಪರಿಹಾರಗಳ ರಾಷ್ಟ್ರೀಯ ಆಯೋಗ, ತುರ್ತು ನಿರ್ವಹಣೆ ಸಚಿವಾಲಯ 4ನೇ ಹಂತದ ತುರ್ತು ವಿಕೋಪ ಪರಿಹಾರ ಕಾರ್ಯಾಚರಣೆಯನ್ನು ಆರಂಭಿಸಿದೆ ಎಂದು ಕ್ಸಿನ್ನುವಾ ಹೇಳಿದೆ.

ಈಗಾಗಲೇ ನಿಯೋಜಿತವಾಗಿರುವ ಕಾರ್ಯಪಡೆ ಭೂಕಂಪ ಪೀಡಿತ ಪ್ರದೇಶಗಳಲ್ಲಿ ಈ ವಿಕೋಪದ ಪರಿಣಾಮವನ್ನು ಅಂದಾಜಿಸುತ್ತಿದ್ದು, ಸ್ಥಳೀಯ ಪರಿಹಾರ ಕಾರ್ಯಾಚರಣೆಗಳಿಗೆ ಮಾರ್ಗದರ್ಶನ ನೀಡುತ್ತಿದೆ.

andolanait

Share
Published by
andolanait

Recent Posts

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

2 hours ago

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

5 hours ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

6 hours ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

6 hours ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

6 hours ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

6 hours ago